ಅಂಚೆ ಇಲಾಖೆ 
ರಾಜ್ಯ

ರಾಜ್ಯಾದ್ಯಂತ ಅಂಚೆ ಕಚೇರಿಗಳಲ್ಲಿ 3ನೇ ದಿನವೂ ಹಣಕಾಸು ವಹಿವಾಟು ಸ್ಥಗಿತ; ಗ್ರಾಹಕರಿಗೆ ತೊಂದರೆ!

ಎಪ್ರಿಲ್ 1 ಮತ್ತು 2 ರಂದು ಎರಡು ದಿನ ಘೋಷಿಸಲಾಗಿದ್ದ ಹಣಕಾಸು ವಹಿವಾಟು ಸ್ಥಗಿತ ಮೂರನೇ ದಿನವೂ ವಿಸ್ತರಣೆಯಾಗಿದ್ದರಿಂದ ಅಂಚೆ ಇಲಾಖೆಯನ್ನು ಅವಲಂಬಿಸಿರುವ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸಿದರು.

ಬೆಂಗಳೂರು: ಎಪ್ರಿಲ್ 1 ಮತ್ತು 2 ರಂದು ಎರಡು ದಿನ ಘೋಷಿಸಲಾಗಿದ್ದ ಹಣಕಾಸು ವಹಿವಾಟು ಸ್ಥಗಿತ ಮೂರನೇ ದಿನವೂ ವಿಸ್ತರಣೆಯಾಗಿದ್ದರಿಂದ ಅಂಚೆ ಇಲಾಖೆಯನ್ನು ಅವಲಂಬಿಸಿರುವ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸಿದರು. ಯಾವುದೇ ಮುಂಗಡ ಸೂಚನೆ ನೀಡದೆ ವಹಿವಾಟು ಸ್ಥಗಿತಗೊಳಿಸಿದ್ದರಿಂದ ಸಾರ್ವಜನಿಕರಲ್ಲಿ ವಿಶೇಷವಾಗಿ ಪಿಂಚಣಿದಾರರಲ್ಲಿ ಹೆಚ್ಚಿನ ಗೊಂದಲ ಮನೆ ಮಾಡಿತ್ತು.

ವರ್ಷಾಂತ್ಯದಲ್ಲಿ ಸಾಮಾನ್ಯವಾಗಿ ಎರಡು ದಿನಗಳವರೆಗೆ ವಹಿವಾಟು ಸ್ಥಗಿತಗೊಳಿಸುವುದು ವಾಡಿಕೆ. ಆದರೆ, ಮೂರನೇ ದಿನಕ್ಕೆ ವಿಸ್ತರಣೆಯು ಸಾರ್ವಜನಿಕರನ್ನು ತೀವ್ರವಾಗಿ ಸಂಕಷ್ಟಕ್ಕೆ ಸಿಲುಕಿದೆ ಎಂದು ಹಿರಿಯ ಅಂಚೆ ಅಧಿಕಾರಿಯೊಬ್ಬರು ಒಪ್ಪಿಕೊಂಡರು. ಆದರೆ, ಇಂದಿನಿಂದ ವಹಿವಾಟು ಆರಂಭವಾಗಿರುವ ಸಾಧ್ಯತೆಯಿದೆ.

ವಹಿವಾಟು ಸ್ಥಗಿತಗೊಂಡ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪಿಂಚಣಿದಾರರು, ವಿಶೇಷವಾಗಿ ಗ್ರಾಮೀಣ ಅಥವಾ ದೂರದ ಪ್ರದೇಶಗಳಲ್ಲಿ ಇರುವವರು ತಮ್ಮ ಮಾಸಿಕ ಪಿಂಚಣಿ ಪಡೆಯಲು ನೆರೆಹೊರೆಯ ಅಂಚೆ ಕಚೇರಿಗಳಿಗೆ ಭೇಟಿ ನೀಡುವವರು, ಹಣ ಜಮೆ ಮಾಡಲು ಸಾಧ್ಯವಾಗದೆ ಬರಿಗೈಯಲ್ಲಿ ವಾಪಸ್ಸಾದರು. ಪಿಂಚಣಿದಾರರ ಅಂಚೆ ಖಾತೆಗೆ ನೇರವಾಗಿ ಹಣವನ್ನು ಜಮೆ ಮಾಡಲಾಗುತ್ತದೆ. ಬಹುತೇಕ ಮಂದಿ ಪಿಂಚಣಿ ಹಣ ವಿತ್ ಡ್ರಾ ಮಾಡಲು ಎಟಿಎಂ ಕಾರ್ಡ್ ಬಳಸುತ್ತಾರೆ ಆದರೆ, ನೇರ ಹಣ ವರ್ಗಾವಣೆ ಕೂಡಾ ನಡೆಯುತ್ತಿರಲಿಲ್ಲ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಬೆಂಗಳೂರಿನಲ್ಲಿರುವ ಪಿಂಚಣಿದಾರ ಮಹಿಳೆ ರಾಗಿನಾ ಅಮ್ಮಾಳ್ (ಹೆಸರು ಬದಲಾಯಿಸಲಾಗಿದೆ) “ನಾನು ಪ್ರತಿ ತಿಂಗಳ ಮೊದಲನೆಯ ದಿನ ನನ್ನ ಫೋನ್‌ನಲ್ಲಿ ನನ್ನ ಖಾತೆಯನ್ನು ಪರಿಶೀಲಿಸುತ್ತೇನೆ ಮತ್ತು ಹಣವನ್ನು ಜಮೆ ಮಾಡಲಾಗಿರುತ್ತದೆ. ಎರಡು ದಿನ ಕಳೆದರೂ ಹಣ ಜಮೆ ಆಗದ ಹಿನ್ನೆಲೆಯಲ್ಲಿ ಆತಂಕಗೊಂಡು ಮಗನನ್ನು ಅಂಚೆ ಕಚೇರಿಗೆ ಕಳುಹಿಸಿದೆ. ನನಗೆ ಯಾವುದೇ ತೊಂದರೆ ಇಲ್ಲ, ನನಗೆ ಒಂದು ದಿನದಲ್ಲಿ ಪಿಂಚಣಿ ಸಿಗುತ್ತದೆ ಎಂದು ಹೇಳಿದರು. ಈ ಪಿಂಚಣಿಯಿಂದ ಬದುಕು ನಡೆಸಲು ಸಾಧ್ಯವಾಗಿದೆ ಎಂದರು.

ಅಂಚೆ ಇಲಾಖೆಗೆ ಗುಡ್ ಫ್ರೈಡೇ ರಜೆ, ಅದರ ನಂತರ ಭಾನುವಾರ ಮತ್ತು ಸೋಮವಾರ ಮತ್ತು ಮಂಗಳವಾರ ಅಧಿಕೃತವಾಗಿ ವಹಿವಾಟು ಸ್ಥಗಿತಗೊಂಡಿದ್ದರಿಂದ ಸಾರ್ವಜನಿಕರಿಗೆ ಖಂಡಿತವಾಗಿಯೂ ಅನಾನುಕೂಲವಾಗಿದೆ ಎಂದು ಇನ್ನೊಬ್ಬ ಅಧಿಕಾರಿ ಹೇಳಿದರು. ಇದರಿಂದ"ಉಳಿತಾಯ ಬ್ಯಾಂಕ್‌ಗಳ ಖಾತೆಗಳು, ಮರುಕಳಿಸುವ ಠೇವಣಿಗಳು ಮತ್ತು ಸ್ಥಿರ ಠೇವಣಿಗಳನ್ನು ನಮ್ಮೊಂದಿಗೆ ನಿರ್ವಹಿಸುವವರ ಮೇಲೆ ತೀವ್ರ ಪರಿಣಾಮ ಬೀರಿದೆ. ಇದಲ್ಲದೆ, ಹೆಣ್ಣು ಮಕ್ಕಳಿಗಾಗಿ ಸುಕನ್ಯಾ ಸಮೃದ್ಧಿ ಯೋಜನೆ ಮತ್ತು ಇತರ ಯೋಜನೆಗಳಂತಹ ಕೇಂದ್ರವು ನಡೆಸುತ್ತಿರುವ ಅನೇಕ ಸಮಾಜ ಕಲ್ಯಾಣ ಯೋಜನೆಗಳ ಫಲಾನುಭವಿಗಳಿಗೆ ಅನಾನುಕೂಲವಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT