ಚುನಾವಣಾ ಆಯೋಗ 
ರಾಜ್ಯ

ಮಾದರಿ ನೀತಿ ಸಂಹಿತೆ ಉಲ್ಲಂಘನೆ: 26.68 ಕೋಟಿ ರೂ. ನಗದು, 33 ಕೋಟಿ ರೂ. ಮೌಲ್ಯದ ಮದ್ಯ ವಶ

ಕರ್ನಾಟಕದಲ್ಲಿ ಮಾರ್ಚ್ 16 ರಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ 1,205 ಪ್ರಕರಣಗಳನ್ನು ದಾಖಲಿಸಲಾಗಿದ್ದು, 26.68 ಕೋಟಿ ರೂಪಾಯಿ ನಗದು, 33 ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಬುಧವಾರ ತಿಳಿಸಿದೆ.

ಬೆಂಗಳೂರು: ಕರ್ನಾಟಕದಲ್ಲಿ ಮಾರ್ಚ್ 16 ರಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ 1,205 ಪ್ರಕರಣಗಳನ್ನು ದಾಖಲಿಸಲಾಗಿದ್ದು, 26.68 ಕೋಟಿ ರೂಪಾಯಿ ನಗದು, 33 ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಬುಧವಾರ ತಿಳಿಸಿದೆ.

ಕರ್ನಾಟಕದ 28 ಕ್ಷೇತ್ರಗಳಿಗೆ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಇಲ್ಲಿಯವರೆಗೆ ಒಟ್ಟು 85.43 ಕೋಟಿ ರೂ. ಮೌಲ್ಯದ ವಸ್ತು ಮತ್ತು ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಹೊರಡಿಸಿದ ಹೇಳಿಕೆ ಪ್ರಕಾರ, ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ, ಫ್ಲೈಯಿಂಗ್ ಸ್ಕ್ವಾಡ್, ಸ್ಥಾಯೀ ಕಣ್ಗಾವಲು ತಂಡಗಳು ಮತ್ತು ಪೊಲೀಸ್ ಅಧಿಕಾರಿಗಳು 26.68 ಕೋಟಿ ರೂಪಾಯಿ ನಗದು, 1.75 ಲಕ್ಷ ರೂ. ಮೌಲ್ಯದ ವಸ್ತುಗಳು, 33 ಕೋಟಿಗೂ ಅಧಿಕ ಮೌಲ್ಯದ 10.73 ಲಕ್ಷ ಲೀಟರ್ ಮದ್ಯ, 3.13 ಕೋಟಿ ರೂ. ಮೌಲ್ಯದ 286.91 ಕೆಜಿ ಮಾದಕ ವಸ್ತುಗಳು, 9.43 ಕೋಟಿ ರೂ. ಮೌಲ್ಯದ 16 ಕೆಜಿ ಚಿನ್ನ, 27 ಲಕ್ಷಕ್ಕೂ ಹೆಚ್ಚು ಮೌಲ್ಯದ 59.04 ಕೆಜಿ ಬೆಳ್ಳಿ ಮತ್ತು 9 ಲಕ್ಷ ರೂ. ಮೌಲ್ಯದ 21.17 ಕ್ಯಾರೆಟ್ ವಜ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಅಬಕಾರಿ ಇಲಾಖೆಯು 1,248 ಅಪರಾಧ ಪ್ರಕರಣಗಳು, ಪರವಾನಗಿ ಷರತ್ತುಗಳ ಉಲ್ಲಂಘನೆಗಾಗಿ 1,203 ಪ್ರಕರಣಗಳು, 79 'ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ ಮತ್ತು ಕರ್ನಾಟಕ ಅಬಕಾರಿ ಕಾಯ್ದೆ 1965 ರ ಸೆಕ್ಷನ್ 15 (ಎ) ಅಡಿಯಲ್ಲಿ 5,327 ಪ್ರಕರಣಗಳನ್ನು ದಾಖಲಿಸಲಾಗಿದೆ. ಇದರೊಂದಿಗೆ 732 ವಿವಿಧ ರೀತಿಯ ವಾಹನಗಳನ್ನು ಸಹ ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ