ಕೊಳವೆ ಬಾವಿಗೆ ಬಿದ್ದ 2 ವರ್ಷದ ಬಾಲಕನ ರಕ್ಷಣೆ 
ರಾಜ್ಯ

ಸಾವು ಗೆದ್ದ ಸಾತ್ವಿಕ್: 20 ಗಂಟೆ ನಿರಂತರ ಕಾರ್ಯಾಚರಣೆ; ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕನ ರಕ್ಷಣೆ

ಸತತ 20 ಗಂಟೆಗಳ ಕಾರ್ಯಾಚರಣೆ ನಡೆಸಿದ ನಂತರ ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್‌ ತಂಡಗಳು ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್ ನನ್ನು ಸುರಕ್ಷಿತವಾಗಿ ಹೊರ ಕರೆತರಲಾಗಲಾಗಿದೆ.

ವಿಜಯಪುರ: ಸತತ 20 ಗಂಟೆಗಳ ಕಾರ್ಯಾಚರಣೆ ನಡೆಸಿದ ನಂತರ ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್‌ ತಂಡಗಳು ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್ ನನ್ನು ಸುರಕ್ಷಿತವಾಗಿ ಹೊರತಂದಿದ್ದಾರೆ.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಮನೆ ಬಳಿ ಆಟವಾಡುತ್ತಿದ್ದ 2 ವರ್ಷದ ಮಗು ಸಾತ್ವಿಕ್ ಆಕಸ್ಮಿಕವಾಗಿ ಸುಮಾರು 16 ಅಡಿಯ ಕೊಳವೆ ಬಾವಿಗೆ ಬಿದ್ದಿದ್ದ. ನಿನ್ನೆ ಸಂಜೆಯಿಂದ ಮಗು ರಕ್ಷಣೆಗಾಗಿ ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್ ತಂಡ ನಿರಂತರವಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದವು.

ಎರಡು ದಿನಗಳ ಹಿಂದೆ ಕೊರೆಸಿದ್ದ ತೆರೆದ ಕೊಳವೆಬಾವಿಗೆ ಬಿದ್ದು, ಮಗು ಜೀವನ್ಮರಣದ ನಡುವೆ ಹೋರಾಟ ನಡೆಸಿತ್ತು. ಸತೀಶ್ ಮತ್ತು ಪೂಜಾ ದಂಪತಿಯ ಪುತ್ರ ಸಾತ್ವಿಕ್ ಮುಜಗೊಂಡ ಬಾಲಕನು ಬುಧವಾರ ಆಟವಾಡಲು ಹೋಗಿದ್ದ ವೇಳೆ ಆಯತಪ್ಪಿ ಕೊಳವೆ ಬಾವಿಗೆ ಬಿದ್ದಿದ್ದ. ಸಂಜೆ 5.30ರ ಸುಮಾರಿಗೆ ಆತ ಕೊಳವೆಬಾವಿಗೆ ಬಿದ್ದಿದ್ದ. ಸಂಜೆ 6 ಗಂಟೆಯಿಂದಲೇ ರಕ್ಷಣಾ ಕಾರ್ಯಾಚರಣೆ ಆರಂಭವಾಗಿತ್ತು.

ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್, ಅಗ್ನಿ ಶಾಮಕ ಮತ್ತು ಪೊಲೀಸರು ಸತತವಾಗಿ ನಡೆಸಿದ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ.‌ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವಾಗಲೇ ಬಾಲಕ ಅಳುವುದು ಕೇಳಿಸಿತು. ಮಧ್ಯಾಹ್ನ 1.44ಕ್ಕೆ ಮಗುವನ್ನು ಜೀವಂತವಾಗಿ ಹೊರ ತೆಗೆಯಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ತಂದೆ-ತಾಯಿ ಸೇರಿ ಲಕ್ಷಾಂತರ ಜನರು ಸಲ್ಲಿಸಿದ ಪ್ರಾರ್ಥನೆ ಫಲಿಸಿದೆ.

ಸಾತ್ವಿಕ್ ಬದುಕಿ ಬರಲಿ ಎಂದು ಗ್ರಾಮದಲ್ಲಿ ಹಾಗೂ ಸುತ್ತಮುತ್ತ ಜನ ದೇವಾಲಯಗಳಲ್ಲಿ ವಿಶೇಷ ಪೂಜೆ ಮೂಲಕ ಪ್ರಾರ್ಥನೆ ಸಲ್ಲಿಸಿದ್ದರು. ಲಚ್ಯಾಣ ಗ್ರಾಮದ ಸಿದ್ದಪ್ಪ ಮಹಾರಾಜರ ಗದ್ದುಗೆಗೆ ಗ್ರಾಮದ ಯುವಕರಿಂದ ವಿಶೇಷ ಪೂಜೆ ನಡೆದಿತ್ತು. ಬಾಲಕ ಬದುಕಿ ಬರಲಿ ಎಂದು ಪೂಜೆ ಸಲ್ಲಿಸಿ ಯುವಕರು ಪ್ರಾರ್ಥನೆ ಸಲ್ಲಿಸಿದ್ದರು. ಬಾಲಕನ ತಂದೆ-ತಾಯಿಯಂತೂ ರಾತ್ರಿಯಿಡೀ ಕೊಳವೆಬಾವಿ ಪಕ್ಕದಲ್ಲೇ ಇದ್ದು ದೇವರಲ್ಲಿ ಪ್ರಾರ್ಥನೆ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT