ಕೊಳವೆ ಬಾವಿಗೆ ಬಿದ್ದ 2 ವರ್ಷದ ಬಾಲಕ 
ರಾಜ್ಯ

ಕೊಳವೆ ಬಾವಿ ಗುರಂತ: ಬದುಕಿ ಬಂದ ಸಾತ್ವಿಕ್‌ ಗೆ ಮರು ನಾಮಕರಣ, ಹೆಸರು 'ಸಿದ್ದಲಿಂಗ'!

ವಿಜಯಪುರದ ಇಂಡಿ ತಾಲ್ಲೂಕಿನಲ್ಲಿ ಕೊಳವೆಬಾವಿಗೆ ಬಿದ್ದು ಪವಾಡ ಸದೃಶ ರೀತಿಯಲ್ಲಿ ಬದುಕಿ ಬಂದ ಮಗು ಸಾತ್ವಿಕ್ ನ ಹೆಸರನ್ನು ಆತನ ಪೋಷಕರು ಬದಲಾವಣೆ ಮಾಡಲು ನಿರ್ಧರಿಸಿದ್ದಾರೆ.

ವಿಜಯಪುರ: ವಿಜಯಪುರದ ಇಂಡಿ ತಾಲ್ಲೂಕಿನಲ್ಲಿ ಕೊಳವೆಬಾವಿಗೆ ಬಿದ್ದು ಪವಾಡ ಸದೃಶ ರೀತಿಯಲ್ಲಿ ಬದುಕಿ ಬಂದ ಮಗು ಸಾತ್ವಿಕ್ ನ ಹೆಸರನ್ನು ಆತನ ಪೋಷಕರು ಬದಲಾವಣೆ ಮಾಡಲು ನಿರ್ಧರಿಸಿದ್ದಾರೆ.

ಕೊಳವೆ ಬಾವಿಯಲ್ಲಿ ಬಿದ್ದಿದ್ದ ತನ್ನ ಮಗುವನ್ನು ಬದುಕಿಸಿಕೊಡುವಂತೆ ದೇವರಲ್ಲಿ ಹರಕೆ ಹೊತ್ತಿದ್ದ ತಾಯಿ ಪೂಜಾ, ಮನೆಯಿಂದ ಮಠದವರೆಗೆ ದೀಡ ನಮಸ್ಕಾರ ಹಾಕಿ, ಮಗುವಿಗೆ ಮರು ನಾಮಕರಣ ಮಾಡುವುದಾಗಿ ಹೇಳಿಕೊಂಡಿದ್ದರು.

ಅದರಂತೆ ಇದೀಗ ಸಾತ್ವಿಕ್ ಮಗುವಿನ ಹೆಸರನ್ನು ಸಿದ್ದಲಿಂಗ ಎಂದು ಬದಲಾಯಿಸಲು ಪೋಷಕರು ನಿರ್ಧರಿಸಿದ್ದಾರೆ. ಬರುವ 28ರಂದು ಪೂಜಾ ತಮ್ಮ ಮನೆಯಿಂದ ಲಚ್ಯಾನ್ ಸಿದ್ದಲಿಂಗ ಮಹಾರಾಜರ ಮಠದ ವರೆಗೆ ದೀಡ ನಮಸ್ಕಾರ ಹಾಕಿ ಮಠದಲ್ಲಿ ತೊಟ್ಟಿಲು ಕಟ್ಟಿ ಮರುನಾಮಕರಣ ಮಾಡಲಿದ್ದಾರೆ.

“ಸಿದ್ದಲಿಂಗ ಮಹಾರಾಜರ ಪವಾಡದಿಂದ ನನ್ನ ಮಗ ಬದುಕಿ ಬಂದಿದ್ದಾನೆ. ಹೀಗಾಗಿ ಸಾತ್ವಿಕ್ ಹೆಸರು ಬದಲಿಗೆ ಸಿದ್ದಲಿಂಗ ಎಂಬ ಹೆಸರನ್ನು ನಾಮಕರಣ ಮಾಡುತ್ತೇವೆ. ರಕ್ಷಣೆ ಮಾಡಿದ ಎಲ್ಲ ಸಿಬ್ಬಂದಿಗೆ ಜಿಲ್ಲಾಡಳಿತಕ್ಕೆ ಧನ್ಯವಾದ ಹೇಳುತ್ತೇನೆ,” ಎಂದು ಮಗುವಿನ ತಾಯಿ ಪೂಜಾ ಹೇಳಿದ್ದಾರೆ. ಚಿಕಿತ್ಸೆ ನೀಡಿದ ವೈದ್ಯರು ಮತ್ತು ಆಸ್ಪತ್ರೆ ಸಿಬ್ಬಂದಿಗೂ ಅವರು ಧನ್ಯವಾದ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!