ಕೊಳವೆ ಬಾವಿಗೆ ಬಿದ್ದ 2 ವರ್ಷದ ಬಾಲಕ 
ರಾಜ್ಯ

ಕೊಳವೆ ಬಾವಿ ಗುರಂತ: ಬದುಕಿ ಬಂದ ಸಾತ್ವಿಕ್‌ ಗೆ ಮರು ನಾಮಕರಣ, ಹೆಸರು 'ಸಿದ್ದಲಿಂಗ'!

ವಿಜಯಪುರದ ಇಂಡಿ ತಾಲ್ಲೂಕಿನಲ್ಲಿ ಕೊಳವೆಬಾವಿಗೆ ಬಿದ್ದು ಪವಾಡ ಸದೃಶ ರೀತಿಯಲ್ಲಿ ಬದುಕಿ ಬಂದ ಮಗು ಸಾತ್ವಿಕ್ ನ ಹೆಸರನ್ನು ಆತನ ಪೋಷಕರು ಬದಲಾವಣೆ ಮಾಡಲು ನಿರ್ಧರಿಸಿದ್ದಾರೆ.

ವಿಜಯಪುರ: ವಿಜಯಪುರದ ಇಂಡಿ ತಾಲ್ಲೂಕಿನಲ್ಲಿ ಕೊಳವೆಬಾವಿಗೆ ಬಿದ್ದು ಪವಾಡ ಸದೃಶ ರೀತಿಯಲ್ಲಿ ಬದುಕಿ ಬಂದ ಮಗು ಸಾತ್ವಿಕ್ ನ ಹೆಸರನ್ನು ಆತನ ಪೋಷಕರು ಬದಲಾವಣೆ ಮಾಡಲು ನಿರ್ಧರಿಸಿದ್ದಾರೆ.

ಕೊಳವೆ ಬಾವಿಯಲ್ಲಿ ಬಿದ್ದಿದ್ದ ತನ್ನ ಮಗುವನ್ನು ಬದುಕಿಸಿಕೊಡುವಂತೆ ದೇವರಲ್ಲಿ ಹರಕೆ ಹೊತ್ತಿದ್ದ ತಾಯಿ ಪೂಜಾ, ಮನೆಯಿಂದ ಮಠದವರೆಗೆ ದೀಡ ನಮಸ್ಕಾರ ಹಾಕಿ, ಮಗುವಿಗೆ ಮರು ನಾಮಕರಣ ಮಾಡುವುದಾಗಿ ಹೇಳಿಕೊಂಡಿದ್ದರು.

ಅದರಂತೆ ಇದೀಗ ಸಾತ್ವಿಕ್ ಮಗುವಿನ ಹೆಸರನ್ನು ಸಿದ್ದಲಿಂಗ ಎಂದು ಬದಲಾಯಿಸಲು ಪೋಷಕರು ನಿರ್ಧರಿಸಿದ್ದಾರೆ. ಬರುವ 28ರಂದು ಪೂಜಾ ತಮ್ಮ ಮನೆಯಿಂದ ಲಚ್ಯಾನ್ ಸಿದ್ದಲಿಂಗ ಮಹಾರಾಜರ ಮಠದ ವರೆಗೆ ದೀಡ ನಮಸ್ಕಾರ ಹಾಕಿ ಮಠದಲ್ಲಿ ತೊಟ್ಟಿಲು ಕಟ್ಟಿ ಮರುನಾಮಕರಣ ಮಾಡಲಿದ್ದಾರೆ.

“ಸಿದ್ದಲಿಂಗ ಮಹಾರಾಜರ ಪವಾಡದಿಂದ ನನ್ನ ಮಗ ಬದುಕಿ ಬಂದಿದ್ದಾನೆ. ಹೀಗಾಗಿ ಸಾತ್ವಿಕ್ ಹೆಸರು ಬದಲಿಗೆ ಸಿದ್ದಲಿಂಗ ಎಂಬ ಹೆಸರನ್ನು ನಾಮಕರಣ ಮಾಡುತ್ತೇವೆ. ರಕ್ಷಣೆ ಮಾಡಿದ ಎಲ್ಲ ಸಿಬ್ಬಂದಿಗೆ ಜಿಲ್ಲಾಡಳಿತಕ್ಕೆ ಧನ್ಯವಾದ ಹೇಳುತ್ತೇನೆ,” ಎಂದು ಮಗುವಿನ ತಾಯಿ ಪೂಜಾ ಹೇಳಿದ್ದಾರೆ. ಚಿಕಿತ್ಸೆ ನೀಡಿದ ವೈದ್ಯರು ಮತ್ತು ಆಸ್ಪತ್ರೆ ಸಿಬ್ಬಂದಿಗೂ ಅವರು ಧನ್ಯವಾದ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT