ಯುಗಾದಿ ಬಳಿಕ ಮಳೆ ಸಾಧ್ಯತೆ 
ರಾಜ್ಯ

Weather: ಕೊನೆಗೂ ಬೆಂಗಳೂರಿಗೆ ಹವಾಮಾನ ಇಲಾಖೆ ಸಿಹಿಸುದ್ದಿ: ಯುಗಾದಿ ನಂತರ ಮಳೆ ಸಾಧ್ಯತೆ!

ಬೇಸಿಗೆ ಧಗೆಯಿಂದ ಕಳೆದೊಂದು ತಿಂಗಳಿನಿಂದ ಕಾದ ಕಾವಲಿಯಂತಾಗಿರುವ ಬೆಂಗಳೂರಿಗೆ ಮಳೆರಾಯನ ಸಿಂಚನವಾಗಲಿದ್ದು, ಈ ಬಗ್ಗೆ ಹವಾಮಾನ ಇಲಾಖೆ ಸಿಹಿಸುದ್ದಿಯೊಂದನ್ನು ನೀಡಿದೆ.

ಬೆಂಗಳೂರು: ಬೇಸಿಗೆ ಧಗೆಯಿಂದ ಕಳೆದೊಂದು ತಿಂಗಳಿನಿಂದ ಕಾದ ಕಾವಲಿಯಂತಾಗಿರುವ ಬೆಂಗಳೂರಿಗೆ ಮಳೆರಾಯನ ಸಿಂಚನವಾಗಲಿದ್ದು, ಈ ಬಗ್ಗೆ ಹವಾಮಾನ ಇಲಾಖೆ ಸಿಹಿಸುದ್ದಿಯೊಂದನ್ನು ನೀಡಿದೆ.

ಹೌದು.. ಬೇಸಿಗೆ ಧಗೆಯಿಂದ ಬಳಲಿ ಬೆಂಡಾಗಿರುವ ಉದ್ಯಾನ ನಗರಿಯ ಜನತೆಗೆ ಹವಾವಮಾನ ಇಲಾಖೆ ಸಮಾಧಾನಕರ ಸುದ್ದಿ ನೀಡಿದ್ದು, ಯುಗಾದಿ ಬಳಿಕ ನಗರದಲ್ಲಿ ಮಳೆಯಾಗುವ ಸಾಧ್ಯತೆ ಎಂದು ಹೇಳಿದೆ. ಏಪ್ರಿಲ್ 13 ಮತ್ತು 14 ರ ಬಳಿಕ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿಗಳು ಹೇಳಿದೆ.

ಈಗಾಗಲೇ ರಾಜ್ಯದ ಹಲವೆಡೆ ಮಳೆಯ ಸಿಂಚನವಾಗುತ್ತಿದೆಯಾದರೂ ಬೆಂಗಳೂರಿಗೆ ಮಾತ್ರ ಈ ವರೆಗೂ ಒಂದೇ ಒಂದು ಹನಿಯೂ ಮಳೆಯಾಗಿರಲಿಲ್ಲ. ಹೀಗಾಗಿ ಬೆಂಗಳೂರಿಗರು ಬೇಸಿಗೆ ಧಗೆಯಿಂದ ಹೈರಾಣಾಗಿ ಹೋಗಿದ್ದರು. ಆದರೆ ಕೊನೆಗೂ ಇದೀಗ ನಗರಕ್ಕೆ ಮಳೆಯ ಆಗಮನವಾಗುತ್ತಿರುವುದು ನಿವಾಸಿಗಳಿಗೆ ಸಮಾಧಾನ ತಂದಿದೆ.

ಕೊಡಗು ಜಿಲ್ಲೆಯಲ್ಲಿ ಬುಧವಾರ ಮತ್ತು ಗುರುವಾರ ಕೂಡ ಮಳೆಯಾಗಿದೆ. ಚಿಕ್ಕಮಗಳೂರು, ಮೈಸೂರು, ಧಾರವಾಡ, ದಾವಣಗೆರೆ, ಶಿವಮೊಗ್ಗ, ಬೆಳಗಾವಿ, ಬೀದರ್ ಜಿಲ್ಲೆಗಳು ಈಗಾಗಲೇ ವರ್ಷದ ಮೊದಲ ಮಳೆಯನ್ನು ನೋಡಿವೆ. ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ. ಏಪ್ರಿಲ್ ತಿಂಗಳಿನಲ್ಲಿ ಈ ಭಾಗದಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ. ಅಶ್ವಿನಿ ಮಳೆ ಶುರುವಾದ ಬಳಿಕ ಮಳೆಯ ತೀವ್ರತೆ ಹೆಚ್ಚಾದರೂ ಅಚ್ಚರಿಯಿಲ್ಲ.

ಅಶ್ವಿನಿ ಮಳೆ

ಏಪ್ರಿಲ್ 14ರಂದು ಅಶ್ವಿನಿ ಮಳೆ ಆರಂಭವಾಗಲಿದೆ. ಅಶ್ವಿನಿ ಮಳೆಯೇ ಬೆಂಗಳೂರಿಗೆ ವರ್ಷದ ಮೊದಲ ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಏಪ್ರಿಲ್ ತಿಂಗಳ ಮಧ್ಯದಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೂಡ ಸಾಧಾರಣ ಮಳೆಯನ್ನು ನಿರೀಕ್ಷೆ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಂಗನ ಜ್ವರಕ್ಕೆ ಈ ವರ್ಷ ಮೊದಲ ಸಾವು: ಶಿವಮೊಗ್ಗದಲ್ಲಿ 29 ವರ್ಷದ ಯುವಕ ಬಲಿ, ಆರೋಗ್ಯ ಇಲಾಖೆಗೆ ಮುನ್ನೆಚ್ಚರಿಕೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ 'ಸ್ಕ್ಯಾಮ್ ಲಾರ್ಡ್' ಪೋಸ್ಟ್: ಬಿಜೆಪಿ ವಿರುದ್ಧ ಕಾಂಗ್ರೆಸ್ ದೂರು ದಾಖಲು

AIADMK ಭ್ರಷ್ಟಾಚಾರವನ್ನು ನಿಮ್ಮ ವಾಶಿಂಗ್ ಮೆಷಿನ್ ನಲ್ಲಿ ಸ್ವಚ್ಛಗೊಳಿಸಿದ್ದೀರಾ? ಬಿಜೆಪಿಗೆ ಎಂ.ಕೆ ಸ್ಟಾಲಿನ್ ಟಾಂಗ್

ಕೃತಕ ಬುದ್ಧಿಮತ್ತೆ, ಸಾಮಾಜಿಕ ಮಾಧ್ಯಮ ಜವಾಬ್ದಾರಿಯುತ ಬಳಕೆಗೆ ಜಾರಿಗೆ ತರಬೇಕಾದ ಕ್ರಮಗಳ ಕುರಿತು ಸಮಾಲೋಚನೆ: ಸಚಿವ ಪ್ರಿಯಾಂಕ್ ಖರ್ಗೆ

SURYASTRA: ಭಾರತೀಯ ಸೇನೆಯ ಬತ್ತಳಿಕೆಗೆ ಹೊಸ ಸೇರ್ಪಡೆ, ಸ್ವದೇಶಿ ನಿರ್ಮಿತ ದೀರ್ಘ-ಶ್ರೇಣಿಯ ಬಹು-ಕ್ಯಾಲಿಬರ್ ರಾಕೆಟ್ ಲಾಂಚರ್!

SCROLL FOR NEXT