ರಾಮೇಶ್ವರಂ ಕೆಫೆ  
ರಾಜ್ಯ

Rameshwaram Cafe Blast: NIA ಯಿಂದ BJP ಕಾರ್ಯಕರ್ತನ ವಿಚಾರಣೆ

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ಬಿಜೆಪಿ ಕಾರ್ಯಕರ್ತನೋರ್ವನನ್ನು ವಿಚಾರಣೆಗೊಳಪಡಿಸಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ಬಿಜೆಪಿ ಕಾರ್ಯಕರ್ತನೋರ್ವನನ್ನು ವಿಚಾರಣೆಗೊಳಪಡಿಸಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್‌ ಎಂಬುವವರನ್ನು ರಾಷ್ಟ್ರೀಯ ತನಿಖಾ ದಳ (NIA) ವಶಕ್ಕೆ ಪಡೆದಿದ್ದು, ವಿಚಾರಣೆಗೊಳಪಡಿಸಿದೆ ಎನ್ನಲಾಗಿದೆ.

ಬಿಜೆಪಿ ‌ಕಾರ್ಯಕರ್ತ ಸಾಯಿ ಪ್ರಸಾದ್‌ನನ್ನು ಎನ್‌ಐಎ ಅಧಿಕಾರಿಗಳು ವಿಚಾರಣೆಗೆ ಕರೆದೊಯ್ದಿದ್ದು, ರಹಸ್ಯ ಸ್ಥಳದಲ್ಲಿ ವಿಚಾರಣೆಗೊಳಪಡಿಸಿದ್ದಾರೆ ಎಂದು ಹೇಳಲಾಗಿದೆ.

ಕಳೆದ ವಾರ ತೀರ್ಥಹಳ್ಳಿಯಲ್ಲಿ ಇಬ್ಬರು ಮುಸ್ಲಿಂ ಯುವಕರ ಮನೆ ಹಾಗೂ ಮೊಬೈಲ್ ಅಂಗಡಿ ಮೇಲೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ಶೋಧ ನಡೆಸಿದ್ದರು. ತನಿಖೆ ವೇಳೆ ಇಬ್ಬರು ಮುಸ್ಲಿಂ ಯುವಕರ ಜೊತೆ ಸಾಯಿ ಪ್ರಸಾದ್ ಸಂಪರ್ಕದಲ್ಲಿದ್ದ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಮಾರ್ಚ್ 1ರಂದು ವೈಟ್‌ ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಐಇಡಿ ಸ್ಫೋಟದಲ್ಲಿ ಕನಿಷ್ಠ 9 ಮಂದಿ ಗಾಯಗೊಂಡಿದ್ದರು. ಕೇಂದ್ರ ಗೃಹ ಸಚಿವಾಲಯದ ಸೂಚನೆಯಂತೆ ಎನ್‌ಐಎ ಈ ಪ್ರಕರಣದ ತನಿಖೆಯನ್ನು ವಹಿಸಿಕೊಂಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT