ಸಚಿವೆ ಶಶಿಕಲಾ ಜೊಲ್ಲೆ 
ರಾಜ್ಯ

ಚುನಾವಣಾ ಅಕ್ರಮ ಆರೋಪ: ಮಾಜಿ ಸಚಿವೆ ಶಶಿಕಲಾ ಜೊಲ್ಲೆಗೆ ಬಿಗ್‌ ರಿಲೀಫ್‌, ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌

ಕಳೆದ ವಿಧಾನಸಭೆ ಚುನಾವಣೆ ವೇಳೆ ಅಕ್ರಮ ನಡೆಸಿದ ಆರೋಪದ ಮೇಲೆ ನಿಪ್ಪಾಣಿ ಶಾಸಕಿ ಹಾಗೂ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ವಿರುದ್ದ ದಾಖಲಿಸಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ವೇಳೆ ಅಕ್ರಮ ನಡೆಸಿದ ಆರೋಪದ ಮೇಲೆ ನಿಪ್ಪಾಣಿ ಶಾಸಕಿ ಹಾಗೂ ಮಾಜಿ ಸಚಿವೆ ಶಶಿಕಲಾ ಜೊಲ್ಲೆ ವಿರುದ್ದ ದಾಖಲಿಸಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

ಬಿಜೆಪಿ ಶಾಸಕಿ ಶಶಿಕಲಾ ಜೊಲ್ಲೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ವಾದ-ಪ್ರತಿವಾದ ಆಲಿಸಿದ ಪೀಠವು ಪ್ರಕರಣ ಸಂಬಂಧ ಶಶಿಕಲಾ ಜೊಲ್ಲೆ ವಿರುದ್ಧ ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್, ಅದನ್ನು ಆಧರಿಸಿ ತನಿಖೆ ನಡೆಸಿ ಪೊಲೀಸರು ಸಲ್ಲಿಸಿದ್ದ ಆರೋಪ ಪಟ್ಟಿ ಮತ್ತು ಪ್ರಕರಣ ಸಂಬಂಧ ನಿಪ್ಪಾಣಿ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ರದ್ದುಪಡಿಸಿದೆ. ಅಲ್ಲದೇ, ಅರ್ಜಿದಾರ ಆರೋಪಿಯನ್ನು ಪ್ರಕರಣದಿಂದ ಮುಕ್ತಗೊಳಿಸಲಾಗಿದೆ ಎಂದು ಹೇಳಿದೆ.

ಶಶಿಕಲಾ ಜೊಲ್ಲೆ ಅವರನ್ನು ಪ್ರತಿನಿಧಿಸಿದ್ದ ವಕೀಲ ಶಿವರಾಜ್ ಎಸ್. ಬಳ್ಳೊಳಿ, ರಾಜಕೀಯ ದುರುದ್ದೇಶದಿಂದ ಪ್ರಕರಣ ದಾಖಲಿಸಲಾಗಿದೆ. ಅರ್ಜಿದಾರರು ಚುನಾವಣಾ ಏಜೆಂಟ್ ಬಳಿ 10 ಸಾವಿರ ರೂಪಾಯಿ ನಗದು ಸಿಕ್ಕಿದ್ದ ಮಾತ್ರಕ್ಕೆ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದಲ್ಲಿ ಅರ್ಜಿದಾರರ ಪಾತ್ರವಿಲ್ಲ. ಹಣ ಯಾರಿಗೆ ಕೊಡಲಾಗುತ್ತಿತ್ತು ಎಂದೂ ಗೊತ್ತಿಲ್ಲ. ಹಣ ಪತ್ತೆಯಾದ ಸ್ಥಳದಲ್ಲಿ ಹಣ ಪಡೆದುಕೊಳ್ಳಲು ಬಂದವರು ಯಾರೂ ಇರಲಿಲ್ಲ. ಆರೋಪ ಸಾಬೀತುಪಡಿಸುವಂತ ಅಂಶಗಳು ಎಫ್‌ಐಆರ್‌ನಲ್ಲಿಲ್ಲ. ಪ್ರಕರಣ ದಾಖಲಿಸಿರುವುದು ಕಾನೂನಿನ ದುರ್ಬಳಕೆಯಾಗಿದೆ ಎಂದು ಪೀಠಕ್ಕೆ ಮನವವರಿಕೆ ಮಾಡಿಕೊಟ್ಟರು.

ನಿಪ್ಪಾಣಿಯ ಜಾಮದಾರ್ ಪ್ಲಾಟ್, ಲೇನ್ ನಂಬರ್ 1ರ ಬಳಿ ಕೆಲ ವ್ಯಕ್ತಿಗಳು ಜಮಾಯಿಸಿದ್ದು, ಮತದಾರರ ಮೇಲೆ ಪ್ರಭಾವ ಬೀರುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಚುನಾವಣಾಧಿಕಾರಿ 2023ರ ಮೇ 10ರಂದು ದೂರು ನೀಡಿದ್ದರು. ಅದನ್ನು ಆಧರಿಸಿ ನಿಪ್ಪಾಣಿ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟಾಗ ಅಲ್ಲಿ ಸೇರಿದ್ದ ಜನರ ಬಳಿ ಬಿಜೆಪಿ ಅಭ್ಯರ್ಥಿಯಾಗಿದ್ದ ಶಶಿಕಲಾ ಜೊಲ್ಲೆ ಅವರಿಗೆ ಸೇರಿದ್ದ ಕೆಲವು ಚುನಾವಣಾ ಸಾಮಗ್ರಿ, ವ್ಯಕ್ತಿಯೊಬ್ಬರ ಬಳಿ 10 ಸಾವಿರ ರೂಪಾಯಿ ಸಿಕ್ಕಿತ್ತು. ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು, ಮ್ಯಾಜಿಸ್ಟ್ರೇಟ್ ಕೋರ್ಟ್ ಅನುಮತಿ ಪಡೆದು ತನಿಖೆ ನಡೆಸಿ ಆರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಿಪ್ಪಾಣಿ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆಯುತ್ತಿತ್ತು. ಅದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ