ಗಾಯಾಳು ಅಂಗಡಿ ಮಾಲೀಕ ಮುಖೇಶ್ 
ರಾಜ್ಯ

ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಪ್ರಕರಣಕ್ಕೆ ತಿರುವು: ಅಂಗಡಿ ಮಾಲೀಕ ಮುಖೇಶ್ ವಿರುದ್ಧವೂ FIR ದಾಖಲು!

ನಗರ್ತಪೇಟೆಯಲ್ಲಿ ಮಾರ್ಚ್ ತಿಂಗಳಲ್ಲಿ ನಡೆದ ಹನುಮಾನ್‌ ಚಾಲೀಸಾ ಪ್ರಕರಣದಲ್ಲಿ ಈಗ ಹೊಸ ತಿರುವು ಸಿಕ್ಕಿದೆ. ಅನ್ಯಕೋಮಿನ ಯುವಕರಿಂದ ಹಲ್ಲೆಗೊಳಗಾದ ಅಂಗಡಿ ಮಾಲೀಕ ಮುಖೇಶ್ ವಿರುದ್ಧವೇ ಇದೀಗ ಎಫ್ಐಆರ್ ದಾಖಲಾಗಿದೆ.

ಬೆಂಗಳೂರು: ನಗರ್ತಪೇಟೆಯಲ್ಲಿ ಮಾರ್ಚ್ ತಿಂಗಳಲ್ಲಿ ನಡೆದ ಹನುಮಾನ್‌ ಚಾಲೀಸಾ ಪ್ರಕರಣದಲ್ಲಿ ಈಗ ಹೊಸ ತಿರುವು ಸಿಕ್ಕಿದೆ. ಅನ್ಯಕೋಮಿನ ಯುವಕರಿಂದ ಹಲ್ಲೆಗೊಳಗಾದ ಅಂಗಡಿ ಮಾಲೀಕ ಮುಖೇಶ್ ವಿರುದ್ಧವೇ ಇದೀಗ ಎಫ್ಐಆರ್ ದಾಖಲಾಗಿದೆ.

ಘಟನೆ ಸಂಬಂಧ ಅಂದು ಸುಲೈಮನ್ ಎಂಬಾತನ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇದೀಗ ಮುಖೇಶ್ ಮೇಲೆ ಎಫ್ಐಆರ್ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

ರಂಜಾನ್ ಇದ್ದರೂ ಭಕ್ತಿ ಗೀತೆ ಹಾಕಿ ಕಿರಿಕ್ ಮಾಡುತ್ತಿದ್ದ ಎಂದು ಸುಲೈಮನ್ ತಂದೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ನಿರ್ದೇಶನ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಮುಖೇಶ್ ವಿರುದ್ಧ ಐಪಿಸಿ ಸೆಕ್ಷನ್‌ 506(ಕ್ರಿಮಿನಲ್‌ ಬೆದರಿಕೆ), 504(ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), 323(ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು) ಅಡಿ ಪ್ರಕರಣ ದಾಖಲಾಗಿದೆ.

ದೂರಿನಲ್ಲಿ ಏನಿದೆ?

ರಂಜಾನ್ ಇದ್ದರೂ ಭಕ್ತಿ ಗೀತೆ ಹಾಕಿ ಮುಖೇಶ್‌ ಕಿರಿಕ್ ಮಾಡುತ್ತಿದ್ದ. ಮಾರ್ಚ್ 17 ರಂದು ಸುಲೇಮಾನ್ ಸೇರಿ ಸ್ನೇಹಿತರು ಮುಖೇಶ್‌ಗೆ ಪ್ರಶ್ನಿಸಿದ್ದರು. ಪವಿತ್ರ ರಂಜಾನ್ ಹಬ್ಬವಿದೆ, ಮೂರು ಸಾವಿರ ಮಂದಿ ಇದೇ ರಸ್ತೆಯಲ್ಲಿ ಪ್ರಾರ್ಥನೆಗೆ ಹೋಗುತ್ತಾರೆ. ಇಷ್ಟು ಸೌಂಡ್ ಇಟ್ಟು ಹಾಡುಗಳನ್ನು ಹಾಕುವುದು ಯಾಕೆ ಎಂದು ಕೇಳಿದ್ದರು.

ಪ್ರಶ್ನೆ ಕೇಳಿದ್ದಕ್ಕೆ ನನ್ನ ಮಗನ ಮೇಲೆ ಮುಖೇಶ್ ಹಲ್ಲೆ ಮಾಡಿದ್ದಾನೆ. ಹಲ್ಲೆ ಮಾಡಿದ್ದು ಅಲ್ಲದೇ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಹಲಸೂರು ಗೇಟ್ ಪೊಲೀಸರು, ಮುಕೇಶ್ ಅವರನ್ನು ವಿಚಾರಣೆಗೆ ಕರೆಸಿಕೊಳ್ಳಬೇಕಿದೆ. ಸುಲೇಮಾನ್, ಶಾನವಾಜ್, ರೋಹಿತ್, ದಾನಿಶ್, ತರುಣ ಮತ್ತು ಇತರ ಆರೋಪಿಗಳು ಕೆಲವು ದಿನಗಳ ಹಿಂದೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆಂದು ಹೇಳಿದ್ದಾರೆ.

ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಮುಖೇಶ್‌ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸುವಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ ಸೇರಿದಂತೆ 500ಕ್ಕೂ ಹೆಚ್ಚು ಮಂದಿ ಪ್ರತಿಭಟಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್