ಗಾಯಾಳು ಅಂಗಡಿ ಮಾಲೀಕ ಮುಖೇಶ್ 
ರಾಜ್ಯ

ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಪ್ರಕರಣಕ್ಕೆ ತಿರುವು: ಅಂಗಡಿ ಮಾಲೀಕ ಮುಖೇಶ್ ವಿರುದ್ಧವೂ FIR ದಾಖಲು!

ನಗರ್ತಪೇಟೆಯಲ್ಲಿ ಮಾರ್ಚ್ ತಿಂಗಳಲ್ಲಿ ನಡೆದ ಹನುಮಾನ್‌ ಚಾಲೀಸಾ ಪ್ರಕರಣದಲ್ಲಿ ಈಗ ಹೊಸ ತಿರುವು ಸಿಕ್ಕಿದೆ. ಅನ್ಯಕೋಮಿನ ಯುವಕರಿಂದ ಹಲ್ಲೆಗೊಳಗಾದ ಅಂಗಡಿ ಮಾಲೀಕ ಮುಖೇಶ್ ವಿರುದ್ಧವೇ ಇದೀಗ ಎಫ್ಐಆರ್ ದಾಖಲಾಗಿದೆ.

ಬೆಂಗಳೂರು: ನಗರ್ತಪೇಟೆಯಲ್ಲಿ ಮಾರ್ಚ್ ತಿಂಗಳಲ್ಲಿ ನಡೆದ ಹನುಮಾನ್‌ ಚಾಲೀಸಾ ಪ್ರಕರಣದಲ್ಲಿ ಈಗ ಹೊಸ ತಿರುವು ಸಿಕ್ಕಿದೆ. ಅನ್ಯಕೋಮಿನ ಯುವಕರಿಂದ ಹಲ್ಲೆಗೊಳಗಾದ ಅಂಗಡಿ ಮಾಲೀಕ ಮುಖೇಶ್ ವಿರುದ್ಧವೇ ಇದೀಗ ಎಫ್ಐಆರ್ ದಾಖಲಾಗಿದೆ.

ಘಟನೆ ಸಂಬಂಧ ಅಂದು ಸುಲೈಮನ್ ಎಂಬಾತನ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇದೀಗ ಮುಖೇಶ್ ಮೇಲೆ ಎಫ್ಐಆರ್ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

ರಂಜಾನ್ ಇದ್ದರೂ ಭಕ್ತಿ ಗೀತೆ ಹಾಕಿ ಕಿರಿಕ್ ಮಾಡುತ್ತಿದ್ದ ಎಂದು ಸುಲೈಮನ್ ತಂದೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ನಿರ್ದೇಶನ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಮುಖೇಶ್ ವಿರುದ್ಧ ಐಪಿಸಿ ಸೆಕ್ಷನ್‌ 506(ಕ್ರಿಮಿನಲ್‌ ಬೆದರಿಕೆ), 504(ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), 323(ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು) ಅಡಿ ಪ್ರಕರಣ ದಾಖಲಾಗಿದೆ.

ದೂರಿನಲ್ಲಿ ಏನಿದೆ?

ರಂಜಾನ್ ಇದ್ದರೂ ಭಕ್ತಿ ಗೀತೆ ಹಾಕಿ ಮುಖೇಶ್‌ ಕಿರಿಕ್ ಮಾಡುತ್ತಿದ್ದ. ಮಾರ್ಚ್ 17 ರಂದು ಸುಲೇಮಾನ್ ಸೇರಿ ಸ್ನೇಹಿತರು ಮುಖೇಶ್‌ಗೆ ಪ್ರಶ್ನಿಸಿದ್ದರು. ಪವಿತ್ರ ರಂಜಾನ್ ಹಬ್ಬವಿದೆ, ಮೂರು ಸಾವಿರ ಮಂದಿ ಇದೇ ರಸ್ತೆಯಲ್ಲಿ ಪ್ರಾರ್ಥನೆಗೆ ಹೋಗುತ್ತಾರೆ. ಇಷ್ಟು ಸೌಂಡ್ ಇಟ್ಟು ಹಾಡುಗಳನ್ನು ಹಾಕುವುದು ಯಾಕೆ ಎಂದು ಕೇಳಿದ್ದರು.

ಪ್ರಶ್ನೆ ಕೇಳಿದ್ದಕ್ಕೆ ನನ್ನ ಮಗನ ಮೇಲೆ ಮುಖೇಶ್ ಹಲ್ಲೆ ಮಾಡಿದ್ದಾನೆ. ಹಲ್ಲೆ ಮಾಡಿದ್ದು ಅಲ್ಲದೇ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಹಲಸೂರು ಗೇಟ್ ಪೊಲೀಸರು, ಮುಕೇಶ್ ಅವರನ್ನು ವಿಚಾರಣೆಗೆ ಕರೆಸಿಕೊಳ್ಳಬೇಕಿದೆ. ಸುಲೇಮಾನ್, ಶಾನವಾಜ್, ರೋಹಿತ್, ದಾನಿಶ್, ತರುಣ ಮತ್ತು ಇತರ ಆರೋಪಿಗಳು ಕೆಲವು ದಿನಗಳ ಹಿಂದೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆಂದು ಹೇಳಿದ್ದಾರೆ.

ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ ಮುಖೇಶ್‌ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸುವಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ ಸೇರಿದಂತೆ 500ಕ್ಕೂ ಹೆಚ್ಚು ಮಂದಿ ಪ್ರತಿಭಟಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT