ಕೆಎಸ್ ಈಶ್ವರಪ್ಪ 
ರಾಜ್ಯ

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಈಶ್ವರಪ್ಪ ವಿರುದ್ಧ FIR ದಾಖಲು

ಲೋಕಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಬೆಂಗಳೂರು: ಲೋಕಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಚುನಾವಣಾಧಿಕಾರಿಯಿಂದ ಅಗತ್ಯ ಅನುಮತಿ ಪಡೆಯದೆ ರಾಜಕೀಯ ಕಾರ್ಯಕ್ರಮ ಆಯೋಜಿಸಿದ ಹಿನ್ನೆಲೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ ಎಂದು ತಿಳಿದುಬಂದಿದೆ.

ಬಿಜೆಪಿಯಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿರುವ ಈಶ್ವರಪ್ಪ ಅವರು, ತೀರ್ಥಹಳ್ಳಿ ತಾಲೂಕಿನ ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಬುತೀರ್ಥದ ದೇವಸ್ಥಾನದಲ್ಲಿ ಧಾರ್ಮಿಕ ವಿಧಿವಿಧಾನ ನೆರವೇರಿಸಿದರು.

ತರುವಾಯ ಹತ್ತಿರದ ಅರ್ಚಕರ ನಿವಾಸದ ಅಂಗಳದಲ್ಲಿ ಸುಮಾರು 50 ರಿಂದ 60 ವ್ಯಕ್ತಿಗಳೊಂದಿಗೆ ಸಭೆಯನ್ನು ನಡೆಸಿದ್ದಾರೆಂದು ಹೇಳಲಾಗುತ್ತಿದೆ.

ಸಭೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ತಾತ್ಕಾಲಿಕ ವೇದಿಕೆಯನ್ನು ನಿರ್ಮಿಸಿ, 50 ಕುರ್ಚಿಗಳು ಮತ್ತು ಹ್ಯಾಂಡ್‌ಹೆಲ್ಡ್ ಮೈಕ್‌ ವ್ಯವಸ್ಥೆ ಮಾಡಿದ್ದು, ಈಶ್ವರಪ್ಪ ರಾಜಕೀಯ ಉದ್ದೇಶದಿಂದ ಭಾಷಣ ಮಾಡಿದ್ದರು ಎಂದು ತಿಳಿದುಬಂದಿದೆ.

ಇದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಶನಿವಾರ ಚುನಾವಣಾ ಆಯೋಗದ ಅಧಿಕೃತ ಪತ್ರಿಕಾ ಪ್ರಕಟಣೆ ತಿಳಿಸಿದೆ. ಸ್ಥಳೀಯ ನ್ಯಾಯಾಲಯದ ಅನುಮತಿ ಮೇರೆಗೆ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ನೀರು ಹಂಚಿಕೆ: ತಮಿಳುನಾಡು ಅರ್ಜಿಯನ್ನು ಸುಪ್ರೀಂನಲ್ಲಿ ಪ್ರಶ್ನಿಸಲು ಅಧಿಕಾರಿಗಳಿಗೆ ಸಚಿವ ರಾಮಲಿಂಗಾ ರೆಡ್ಡಿ ನಿರ್ದೇಶನ

ಹೈಕೋರ್ಟ್‌ನಿಂದ ಜೀವಾವಧಿ ಶಿಕ್ಷೆಗೆ ತಡೆ: ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹತೆ ರದ್ದು!

ಸಂಪುಟ ವಿಸ್ತರಣೆಯಲ್ಲಿ ಬಿಗ್ ಟ್ವಿಸ್ಟ್: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು; ಕೊನೆ ಕ್ಷಣದಲ್ಲಿ ಒಬ್ಬರಿಗೆ ಕೊಕ್!

ಭಾವೋದ್ವೇಗಕ್ಕೆ ಒಳಗಾಗಿ ರಾಜೀನಾಮೆ ನೀಡಬೇಡಿ: ಪಕ್ಷ ನಿಮ್ಮ ಸೇವೆ ಮರೆಯಲ್ಲ; ಅಸಮಾಧಾನಿತ ಶಾಸಕರಿಗೆ ಬಿ.ಕೆ ಹರಿಪ್ರಸಾದ್ ಮನವಿ

ಕಾಂಗ್ರೆಸ್‌ ಲೆಟರ್‌ಹೆಡ್‌ನಲ್ಲಿ ಸ್ಪೀಕರ್‌ ಹೆಸರು; ಮತ್ತೊಂದು ಕೆಟ್ಟ ಸಂಪ್ರದಾಯಕ್ಕೆ ನಾಂದಿ: ಸುರೇಶ್‌ ಕುಮಾರ್‌ ಕಿಡಿ