ನಗದು, ಚಿನ್ನಾಭರಣ ವಶ 
ರಾಜ್ಯ

ಬಳ್ಳಾರಿಯಲ್ಲಿ ಚುನಾವಣಾಧಿಕಾರಿಗಳ ಭರ್ಜರಿ ಬೇಟೆ; 5 ಕೋಟಿ ರೂ. ನಗದು, 3 ಕೆಜಿ ಚಿನ್ನ, 68 ಕೆಜಿ ಬೆಳ್ಳಿ ವಶ!

ಲೋಕಸಭಾ ಚುನಾವಣೆಯಿಂದಾಗಿ ಮಾದರಿ ನೀತಿ ಸಂಹಿತೆ ಜಾರಿ ಹೊತ್ತಿನಲ್ಲಿ ಬಳ್ಳಾರಿಯಲ್ಲಿ ಚುನಾವಣಾಧಿಕಾರಿಗಳು ಭರ್ಜರಿ ಬೇಟೆಯಾಡಿದ್ದು ದಾಖಲೆ ಇಲ್ಲದ 5.6 ಕೋಟಿ ರೂಪಾಯಿ ನಗದು ಹಾಗೂ 3 ಕೆಜಿ ಚಿನ್ನ, 68 ಕೆಜಿ ಬೆಳ್ಳಿ ಗಟ್ಟಿ, 103 ಕೆಜಿ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಬಳ್ಳಾರಿ: ಲೋಕಸಭಾ ಚುನಾವಣೆಯಿಂದಾಗಿ ಮಾದರಿ ನೀತಿ ಸಂಹಿತೆ ಜಾರಿ ಹೊತ್ತಿನಲ್ಲಿ ಬಳ್ಳಾರಿಯಲ್ಲಿ ಚುನಾವಣಾಧಿಕಾರಿಗಳು ಭರ್ಜರಿ ಬೇಟೆಯಾಡಿದ್ದು ದಾಖಲೆ ಇಲ್ಲದ 5.6 ಕೋಟಿ ರೂಪಾಯಿ ನಗದು ಹಾಗೂ 3 ಕೆಜಿ ಚಿನ್ನ, 68 ಕೆಜಿ ಬೆಳ್ಳಿ ಗಟ್ಟಿ, 103 ಕೆಜಿ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಹೇಮಾ ಜ್ಯುವೆಲರ್ಸ್ ಮಾಲೀಕರಾದ ನರೇಶ್ ಸೋನಿ ಎಂಬುವವರ ಬ್ರೂಸ್‌ಪೇಟೆ ಮನೆ ಮೇಲೆ ದಾಳಿ ನಡೆಸಿದ ಬಳ್ಳಾರಿ ಪೊಲೀಸರು ಅಪಾರ ಪ್ರಮಾಣದ ನಗದು, ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ನರೇಶ್ ಸೋನಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಇನ್ನು ಹಣ ಸಾಗಿಸುತ್ತಿದ್ದವರನ್ನು ಬ್ರೂಸ್‌ಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. 98 ಕೆಪಿ ಆ್ಯಕ್ಟ್ ಅಡಿ ಪ್ರಕರಣವನ್ನು ದಾಖಲಿಸಿ ಆದಾಯ ತೆರಿಗೆ ಇಲಾಖೆಗೆ ಇದನ್ನು ಹಸ್ತಾಂತರ ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT