ಬಿವೈ ರಾಘವೇಂದ್ರ 
ರಾಜ್ಯ

ರಾಜಕಾರಣಕ್ಕೆ ಧಾರ್ಮಿಕ ಸ್ಥಳ ದುರುಪಯೋಗ ಆರೋಪ: ಪ್ರಕರಣ ರದ್ದತಿ ಕೋರಿ ಸಂಸದ ರಾಘವೇಂದ್ರ ಹೈಕೋರ್ಟ್ ಮೊರೆ

ಧಾರ್ಮಿಕ ಸ್ಥಳದಲ್ಲಿ ರಾಜಕೀಯ ಭಾಷಣ ಮಾಡಿ ಮತದಾರರ ಮೇಲೆ ಪ್ರಭಾವ ಬೀರಿದ ಮತ್ತು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ತಮ್ಮ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ...

ಬೆಂಗಳೂರು: ಧಾರ್ಮಿಕ ಸ್ಥಳದಲ್ಲಿ ರಾಜಕೀಯ ಭಾಷಣ ಮಾಡಿ ಮತದಾರರ ಮೇಲೆ ಪ್ರಭಾವ ಬೀರಿದ ಮತ್ತು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ತಮ್ಮ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ರಾಘವೇಂದ್ರ ಅವರು ತಮ್ಮ ಅರ್ಜಿಯಲ್ಲಿ ಚಿತ್ರದುರ್ಗ ಗ್ರಾಮಾಂತರ ಪೊಲೀಸ್‌ ಠಾಣಾ ಪೊಲೀಸರು ಮತ್ತು ಪ್ರಕರಣದ ದೂರುದಾರರಾದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾರಿ ವಿಚಕ್ಷಣಾ ದಳದ ಅಧಿಕಾರಿ ಪಿ ಅವಿನಾಶ್‌ ಅವರನ್ನು ಪ್ರತಿವಾದಿ ಮಾಡಿದ್ದಾರೆ.

ಶುಕ್ರವಾರ ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ಪೀಠದ ಮುಂದೆ ಹಾಜರಾದ ರಾಘವೇಂದ್ರ ಪರ ವಕೀಲರು, ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸಬೇಕು. ಅರ್ಜಿದಾರರ ವಿರುದ್ಧದ ಎಫ್ಐಆರ್‌ಗೆ ಮಧ್ಯಂತರ ತಡೆ ನೀಡಬೇಕು ಎಂದು ಕೋರಿದರು. ಅದಕ್ಕೆ ಪೀಠವು ಮುಂದಿನ ವಾರದಲ್ಲಿ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಲಾಗುವುದು ಎಂದಿತು.

ಏನಿದು ಪ್ರಕರಣ?

2024ರ ಮಾರ್ಚ್‌ 23ರಂದು ಬೆಳಿಗ್ಗೆ 11 ಗಂಟೆಯಲ್ಲಿ ಚಿತ್ರದುರ್ಗದ ಸಿದ್ದೇಶ್ವರ ಭೋವಿ ಸಮಾಜ ಗುರುಪೀಠದಲ್ಲಿ ರಾಘವೇಂದ್ರ ಅವರು ಸಭೆ ನಡೆಸಿದ್ದರು. ಈ ವೇಳೆ ಮತದಾರರ ಮೇಲೆ ಪ್ರಭಾವ ಬೀರಲು ಭಾಷಣ ಮಾಡಿ ಧಾರ್ಮಿಕ ಸ್ಥಳವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಸಭೆ ನಡೆಸಲು ಚುನಾವಣಾ ಆಯೋಗದಿಂದ ಪೂರ್ವಾನುಮತಿ ಪಡೆದಿಲ್ಲ.

ಆ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಸಂಚಾರಿ ವಿಚಕ್ಷಣಾ ದಳದ ಅಧಿಕಾರಿ ಪಿ ಅವಿನಾಶ್‌ ಚಿತ್ರದುರ್ಗ ಗ್ರಾಮೀಣ ಠಾಣಾ ಪೊಲೀಸರಿಗೆ 2024ರ ಮಾರ್ಚ್‌ 23ರಂದು ದೂರು ನೀಡಿದ್ದರು. ಅದನ್ನು ಪರಿಗಣಿಸಿದ್ದ ಪೊಲೀಸರು, ಧಾರ್ಮಿಕ ಸಂಸ್ಥೆಗಳ (ದುರ್ಬಳಕೆ ತಡೆ) ಕಾಯಿದೆ-1988 ಮತ್ತು ಜನಪ್ರತಿನಿಧಿಗಳ ಕಾಯಿದೆ-1951 ಮತ್ತು ಭಾರತೀಯ ದಂಡ ಸಂಹಿತೆ ಸೆಕ್ಷನ್‌ 171ಎಫ್‌ (ಚುನಾವಣೆಯಲ್ಲಿ ಅನಪೇಕ್ಷಿತ ಪ್ರಭಾವ ಬೀರಿದ) ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿ ತನಿಖೆ ಕೈಗೊಂಡಿದ್ದರು. ಇದಕ್ಕೆ ತಡೆ ಕೋರಿ ರಾಘವೇಂದ್ರ ಹೈಕೋರ್ಟ್‌ ಕದತಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT