ಅಪಾರ ಪ್ರಮಾಣದ ಸ್ಫೋಟಕ ವಶ ANI
ರಾಜ್ಯ

Explosives Recovered: ಕರ್ನಾಟಕ-ಆಂಧ್ರ ಗಡಿಯಲ್ಲಿ ಅಪಾರ ಪ್ರಮಾಣದ ಸ್ಫೋಟಕ ವಶ; ಓರ್ವನ ಬಂಧನ

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ಚಾಲ್ತಿಯಲ್ಲಿರುವಂತೆಯೇ ಇತ್ತ ಕರ್ನಾಟಕ-ಆಂಧ್ರ ಗಡಿಯಲ್ಲಿ ಅಧಿಕಾರಿಗಳು ಕಾರಿನಲ್ಲಿ ಸಾಗುಸುತ್ತಿದ್ದ ಅಪಾರ ಪ್ರಮಾಣದ ಸ್ಫೋಟಕಗಳನ್ನು ಪತ್ತೆ ಮಾಡಿ ವಶಕ್ಕೆ ಪಡೆದಿದ್ದಾರೆ.

ಕೋಲಾರ: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ಚಾಲ್ತಿಯಲ್ಲಿರುವಂತೆಯೇ ಇತ್ತ ಕರ್ನಾಟಕ-ಆಂಧ್ರ ಗಡಿಯಲ್ಲಿ ಅಧಿಕಾರಿಗಳು ಕಾರಿನಲ್ಲಿ ಸಾಗುಸುತ್ತಿದ್ದ ಅಪಾರ ಪ್ರಮಾಣದ ಸ್ಫೋಟಕಗಳನ್ನು ಪತ್ತೆ ಮಾಡಿ ವಶಕ್ಕೆ ಪಡೆದಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಕರ್ನಾಟಕ-ಆಂಧ್ರ ಗಡಿಯ ನಂಗಲಿ ಚೆಕ್ ಪೋಸ್ಟ್ ನಲ್ಲಿ ಅಪಾರ ಪ್ರಮಾಣದ ಸ್ಫೋಟಕಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಘಟನೆಯ್ಲಿ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗಿದೆ.

ಮೂಲಗಳ ಪ್ರಕಾರ ಕೋಲಾರ ಜಿಲ್ಲೆಯ ಮುಳಬಾಗಲು ತಾಲೂಕಿನ ನಂಗಲಿ ಚೆಕ್ ಪೋಸ್ಟ್ ಬಳಿ ಸ್ಫೋಟಕ ಸಾಗಿಸುತ್ತಿದ್ದ ದುಷ್ಕರ್ಮಿಯನ್ನು ಬಂಧಿಸಲಾಗಿದೆ. ಖಾಸಗಿ ಕಾರಿನಲ್ಲಿ ಸ್ಫೋಟಕಗಳನ್ನು ಸಾಗಿಸಲಾಗುತ್ತಿತ್ತು. ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದ್ದು, ಬಂಧಿತನನ್ನು ಆಸಿಫ್ ಹಜರತ್ ಅಲಿ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಆರೋಪಿಯಿಂದ 1200 ಜಿಲೆಟಿನ್ ಕಡ್ಡಿಗಳು, 7 ಬಾಕ್ಸ್ ವೈರ್, 6 ಡಿಟೋನೇಟರ್ ವಶಪಡಿಸಿಕೊಳ್ಳಲಾಗಿದೆ. ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಕ್ರಮ ಕಲ್ಲುಗಣಿಗಾರಿಕೆಗೆ ಸಾಗಿಸಲಾಗುತ್ತಿತ್ತೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಂಗಲಿ ಪೊಲೀಸ್ ಠಾಣೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾಕ್‌ನಲ್ಲಿ ಅಮೆರಿಕ-ಸೌದಿ ಜಂಟಿ ವಾಯುದಾಳಿ: ಇರಾನ್ ಬೆಂಬಲಿತ ಉಗ್ರ ನೆಲೆಗಳು ಧ್ವಂಸ, ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ..!

ರಾಜ್ಯ ಸಚಿವ ಸಂಪುಟ ವಿಸ್ತರಣೆ: ಇಂದೇ ರಾಹುಲ್ ಗಾಂಧಿ ಒಪ್ಪಿಗೆ ಸಾಧ್ಯತೆ, ನಾಳೆ ಸಂಜೆ ನೂತನ ಸಚಿವರ ಪಟ್ಟಾಭಿಷೇಕ..?

ಪಾದಚಾರಿ ಮಾರ್ಗದಲ್ಲಿ Bescom ಅಟಾಟೋಪಕ್ಕೆ ಬ್ರೇಕ್; ಸಚಿವ ಕೃಷ್ಣ ಬೈರೇಗೌಡ ಖಡಕ್ ವಾರ್ನಿಂಗ್..!

ಕರಾವಳಿಯಲ್ಲಿ ವಿಷ ಬಿತ್ತಿದರೆ ಪರಿಣಾಮ ನೆಟ್ಟಗಿರಲ್ಲ, ಅರಬ್ಬಿ ಸಮುದ್ರದ ಮೀನುಗಳಿಗೆ ಆಹಾರವಾಗ್ತೀರಿ: ಪ್ರಕಾಶ್ ರಾಜ್‌ಗೆ ಉಡುಪಿ BJP ಶಾಸಕ ಎಚ್ಚರಿಕೆ..!

ಸುಪ್ರೀಂನ ಮಧ್ಯಂತರ ಆದೇಶ ವಿದ್ಯಾರ್ಥಿಗಳ ವಿರುದ್ಧ ದುರ್ಬಳಕೆಯಾಗುವ ಸಾಧ್ಯತೆ: 'ಕಿರುಕುಳ' ಮುಂದುವರಿದರೆ ಸರಿ ಇರಲ್ಲ- ದೀಪ್ಕೆ ವಾರ್ನಿಂಗ್!