ಬೆಂಕಿ ನಂದಿಸುತ್ತಿರುವ ಅಗ್ನಿಶಾಮಕ ದಳದ ಸಿಬ್ಬಂದಿ.
ರಾಜ್ಯ

ಟಿ.ಆರ್.ಮಿಲ್ ಗೋದಾಮಿನಲ್ಲಿ ಅಗ್ನಿ ಅವಘಡ: ಭಾರೀ ಪ್ರಮಾಣದ ಟಯರ್ ಬೆಂಕಿಗಾಹುತಿ

ನಗರದ ಚಾಮರಾಜಪೇಟೆಯ ಗೋದಾಮಿನಲ್ಲಿ ಭಾನುವಾರ ಅಗ್ನಿಅವಘಡ ಸಂಭವಿಸಿದ್ದು, ಭಾರೀ ಪ್ರಮಾಣದ ಟೈಯರ್ ಗಳು ಬೆಂಕಿಗಾಹುತಿಯಾಗಿವೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ.

ಬೆಂಗಳೂರು: ನಗರದ ಚಾಮರಾಜಪೇಟೆಯ ಗೋದಾಮಿನಲ್ಲಿ ಭಾನುವಾರ ಅಗ್ನಿಅವಘಡ ಸಂಭವಿಸಿದ್ದು, ಭಾರೀ ಪ್ರಮಾಣದ ಟೈಯರ್ ಗಳು ಬೆಂಕಿಗಾಹುತಿಯಾಗಿವೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ.

ಚಾಮರಾಜಪೇಟೆಯ ಗವಿಪುರದ ಟಿಆರ್.ಮಿಲ್ ಆವರಣದ ಟೈಯರ್ ಗೋದಾಮಿನಲ್ಲಿ ನಿನ್ನೆ ಬೆಳಗಿನ ಜಾವ 4.40ರ ಸುಮಾರಿಗೆ ದಟ್ಟ ಹೊಣೆ ಕಾಣಿಸಿಕೊಂಡು, ಕೆಲವೇ ಕ್ಷಣಗಳಲ್ಲಿ ಬೆಂಕಿ ಹೊತ್ತಿಕೊಂಡಿದೆ.

ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಶಾರ್ಟ್ ಸರ್ಕ್ಯೂಟ್‌ನಿಂದ ಘಟನೆ ಸಂಭವಿಸಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸಾಕಷ್ಟು ಹರಸಾಹಸ ಪಟ್ಟರು. ಮೈಸೂರು ರಸ್ತೆ, ಹೈಗ್ರೌಂಡ್ಸ್, ಬನಶಂಕರಿ, ರಾಜಾಜಿನಗರ, ಸರ್ಜಾಪುರ, ನಾಗರಭಾವಿಯಿಂದ ತಲಾ ಒಂದರಂತೆ ಮತ್ತು ಬಾಣಸವಾಡಿಯಿಂದ ಎರಡು ಅಗ್ನಿಶಾಮಕ ದಳದ ವಾಹನಗಳೊಂದಿಗೆ ಸುಮಾರು 10 ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿದರು.

ಟಿಆರ್ ಮಿಲ್ ಬಳಿಯ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಭದ್ರತಾ ಸಿಬ್ಬಂದಿ ಘಟನೆಯ ಬಗ್ಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದರು. . ಬೆಂಕಿ ಭಾಗಶಃ ನಂದಿಸುವವರೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಸಮೀಪದ ಮನೆಗಳಲ್ಲಿದ್ದವರನ್ನು ಸ್ಥಳಾಂತರಿಸಲಾಗಿತ್ತು ಅಗ್ನಿಶಾಮಕ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT