ಬೆಂಕಿ ನಂದಿಸುತ್ತಿರುವ ಅಗ್ನಿಶಾಮಕ ದಳದ ಸಿಬ್ಬಂದಿ.
ರಾಜ್ಯ

ಟಿ.ಆರ್.ಮಿಲ್ ಗೋದಾಮಿನಲ್ಲಿ ಅಗ್ನಿ ಅವಘಡ: ಭಾರೀ ಪ್ರಮಾಣದ ಟಯರ್ ಬೆಂಕಿಗಾಹುತಿ

ನಗರದ ಚಾಮರಾಜಪೇಟೆಯ ಗೋದಾಮಿನಲ್ಲಿ ಭಾನುವಾರ ಅಗ್ನಿಅವಘಡ ಸಂಭವಿಸಿದ್ದು, ಭಾರೀ ಪ್ರಮಾಣದ ಟೈಯರ್ ಗಳು ಬೆಂಕಿಗಾಹುತಿಯಾಗಿವೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ.

ಬೆಂಗಳೂರು: ನಗರದ ಚಾಮರಾಜಪೇಟೆಯ ಗೋದಾಮಿನಲ್ಲಿ ಭಾನುವಾರ ಅಗ್ನಿಅವಘಡ ಸಂಭವಿಸಿದ್ದು, ಭಾರೀ ಪ್ರಮಾಣದ ಟೈಯರ್ ಗಳು ಬೆಂಕಿಗಾಹುತಿಯಾಗಿವೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ.

ಚಾಮರಾಜಪೇಟೆಯ ಗವಿಪುರದ ಟಿಆರ್.ಮಿಲ್ ಆವರಣದ ಟೈಯರ್ ಗೋದಾಮಿನಲ್ಲಿ ನಿನ್ನೆ ಬೆಳಗಿನ ಜಾವ 4.40ರ ಸುಮಾರಿಗೆ ದಟ್ಟ ಹೊಣೆ ಕಾಣಿಸಿಕೊಂಡು, ಕೆಲವೇ ಕ್ಷಣಗಳಲ್ಲಿ ಬೆಂಕಿ ಹೊತ್ತಿಕೊಂಡಿದೆ.

ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಶಾರ್ಟ್ ಸರ್ಕ್ಯೂಟ್‌ನಿಂದ ಘಟನೆ ಸಂಭವಿಸಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸಾಕಷ್ಟು ಹರಸಾಹಸ ಪಟ್ಟರು. ಮೈಸೂರು ರಸ್ತೆ, ಹೈಗ್ರೌಂಡ್ಸ್, ಬನಶಂಕರಿ, ರಾಜಾಜಿನಗರ, ಸರ್ಜಾಪುರ, ನಾಗರಭಾವಿಯಿಂದ ತಲಾ ಒಂದರಂತೆ ಮತ್ತು ಬಾಣಸವಾಡಿಯಿಂದ ಎರಡು ಅಗ್ನಿಶಾಮಕ ದಳದ ವಾಹನಗಳೊಂದಿಗೆ ಸುಮಾರು 10 ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿದರು.

ಟಿಆರ್ ಮಿಲ್ ಬಳಿಯ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಭದ್ರತಾ ಸಿಬ್ಬಂದಿ ಘಟನೆಯ ಬಗ್ಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದರು. . ಬೆಂಕಿ ಭಾಗಶಃ ನಂದಿಸುವವರೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಸಮೀಪದ ಮನೆಗಳಲ್ಲಿದ್ದವರನ್ನು ಸ್ಥಳಾಂತರಿಸಲಾಗಿತ್ತು ಅಗ್ನಿಶಾಮಕ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT