ಸಿಎಂ ಸಿದ್ದರಾಮಯ್ಯ  
ರಾಜ್ಯ

'ಈ ಯುಗಾದಿ ಸಮಯದಲ್ಲಿ ಇನ್ನಾದರೂ ದೇವರು ಸಿದ್ದರಾಮಯ್ಯನವರಿಗೆ ಒಳ್ಳೆ ಬುದ್ದಿ ಕೊಡಲಿ': ಬಿಜೆಪಿ ಟ್ವೀಟ್

ಈಗ ಲೋಕಸಭೆ ಚುನಾವಣೆಯ ಹೊತ್ತು. ರಾಜಕೀಯ ಪಕ್ಷಗಳ ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುತ್ತಿರುತ್ತಾರೆ. ಯುಗಾದಿ ಹಬ್ಬದ ದಿನವಾದ ಇಂದು ರಾಜ್ಯ ಬಿಜೆಪಿಯು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಯುಗಾದಿ ಹಬ್ಬದ ಶುಭಾಶಯವನ್ನು ಕೋರಿದೆ.

ಬೆಂಗಳೂರು: ಈಗ ಲೋಕಸಭೆ ಚುನಾವಣೆಯ ಹೊತ್ತು. ರಾಜಕೀಯ ಪಕ್ಷಗಳ ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುತ್ತಿರುತ್ತಾರೆ. ಯುಗಾದಿ ಹಬ್ಬದ ದಿನವಾದ ಇಂದು ರಾಜ್ಯ ಬಿಜೆಪಿಯು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಯುಗಾದಿ ಹಬ್ಬದ ಶುಭಾಶಯವನ್ನು ಕೋರಿದೆ. ಜೊತೆಗೆ ಇನ್ನಾದರೂ ಭಗವಂತ ಅವರಿಗೆ ಸದ್ಭುದ್ಧಿ ಕೊಡಲಿ ಎಂದು ವ್ಯಂಗಭರಿತವಾಗಿ ಟ್ವೀಟ್ ಮಾಡಿದೆ.

ಕರ್ವಾಟಕ ಬಿಜೆಪಿಯ ಅಧಿಕೃತ ಟ್ವಿಟ್ಟರ್ ಈ ಪೋಸ್ಟ್ ಹಾಕಲಾಗಿದ್ದು ಅರಾಜಕತೆ, ತಮಿಳುನಾಡಿಗೆ ಕಾವೇರಿ ನೀರು, ಸುಳ್ಳು ಆರೋಪ, ರೈತರಿಗೆ ಬರ ಪರಿಹಾರ, ಮಹಿಳೆಯರ ರಕ್ಷಣೆ, ಭಯೋತ್ಪಾದನೆ ನಿಗ್ರಹ, ಬಡವರ ಪರ, ಕನ್ನಡಿಗರ ತೆರಿಗೆ ಹಣ, ಸಂಸ್ಕಾರವಂತ ನಾಲಿಗೆ, ಜಾತಿ ಧರ್ಮಗಳ ನಡುವೆ ಕಲಹ ಮೊದಲಾದ ವಿಚಾರಗಳನ್ನು ಪ್ರಸ್ತಾಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಲೆಳೆದಿದೆ.

ಪೋಸ್ಟ್ ನಲ್ಲಿ ಏನಿದೆ? ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಯುಗಾದಿ ಹಬ್ಬದ ಶುಭಾಶಯಗಳು. ಹಳೆಯ ಎಲೆ ಉದುರಿ ಹೊಸ ಚಿಗುರು ಮೂಡುವ ಸಮಯ ಬಂದಿದೆ. ಇನ್ನಾದರೂ ಭಗವಂತ ಅವರಿಗೆ ಸದ್ಬುದ್ಧಿ ಕರುಣಿಸಿ ಈ ಬದಲಾವಣೆ ತರಲೆಂದು ವಿಘ್ನ ವಿನಾಶಕ ವಿನಾಯಕನಲ್ಲಿ ಕರುನಾಡು ಮೊರೆಯಿಡುತ್ತಿದೆ.

ಅರಾಜಕತೆಯನ್ನು ಹೋಗಲಾಡಿಸುವ ಬುದ್ಧಿ ನೀಡಲಿ

ಕಾವೇರಿಯನ್ನು ತಮಿಳುನಾಡಿಗೆ ಹರಿಸದೆ ಕನ್ನಡಿಗರ ಹಿತಾಸಕ್ತಿ ಕಾಪಾಡುವ ಸ್ಥೈರ್ಯ ತೋರಿಸಲಿ

ಸುಳ್ಳು‌ ಹೇಳುವುದನ್ನು ಕಡಿಮೆ ಮಾಡುವ ಜ್ಞಾನ ನೀಡಲಿ

ರೈತರಿಗೆ ಬರ ಪರಿಹಾರ ನೀಡುವಂತಹ ಗುಣ ಕರುಣಿಸಲಿ

ಮಹಿಳೆಯರ ರಕ್ಷಣೆ ಮಾಡುವ ಹೊಣೆ ಹೊರುವಂತಾಗಲಿ

ಭಯೋತ್ಪಾದಕರನ್ನು ಹತ್ತಿಕ್ಕುವ ಧೈರ್ಯ ತುಂಬಲಿ

ಬಡವರ ಮೇಲೆ ಮಮಕಾರ ತೋರುವ ಮಾನವೀಯತೆ ದೊರೆಯಲಿ

ಮೋಜು ಮಾಡದೆ ಕನ್ನಡಿಗರ ತೆರಿಗೆ ಹಣ ಉಳಿಸುವ ಜವಾಬ್ದಾರಿ ತೋರಲಿ

ನಾಲಿಗೆ ಹರಿಬಿಡದೆ ಗೌರವ ನೀಡುವ ಸಂಸ್ಕಾರ ಸಿಗುವಂತಾಗಲಿ

ಜಾತಿ, ಧರ್ಮಗಳ ನಡುವೆ ಬೆಂಕಿ ಹಚ್ಚುವ‌ ಕೆಲಸ ಬಿಡುವ ಸದ್ಗುಣ ನೀಡಲಿ

ಸತ್ಯ ಹರಿಶ್ಚಂದ್ರನ ಅವತಾರ ಸಿದ್ದರಾಮಯ್ಯನವರೇ ಕನ್ನಡಿಗರ ತೆರಿಗೆ ಹಣ ಯಾರ ಜೇಬು ಪಾಲು?: ಬಿಜೆಪಿ ಸವಾಲು

ಇಷ್ಟು ಬುದ್ಧಿಯನ್ನು ಆ ಭಗವಂತ ಕರುಣಿಸಿ‌ಬಿಟ್ಟರೆ, ಸಮೃದ್ಧವಾಗಿ ಕಾಲಕಾಲಕ್ಕೆ ಮಳೆ-ಬೆಳೆಯಾಗಿ ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟವಾಗಿ ಕಂಗೊಳಿಸಲಿದೆ.'' ಎಂದು ಪೋಸ್ಚ್ ನಲ್ಲಿ ಬರೆಯಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT