ಗ್ರಹಣದ ವೇಳೆ ಹಣ್ಣು ಸೇವನೆ ಮಾಡುತ್ತಿರುವುದು. 
ರಾಜ್ಯ

ಗ್ರಹಣ; ಮೌಢ್ಯ ವಿರೋಧಿಸಿ ಟೌನ್ ಹಾಲ್ ಎದುರು ಆಹಾರ ಸೇವನೆ!

ಗ್ರಹಣಕ್ಕೆ ಸಂಬಂಧಿಸಿದ ಪುರಾಣ ಮತ್ತು ಮೂಢನಂಬಿಕೆಗಳನ್ನು ಹೋಗಲಾಡಿಸಲು ಮೂಢನಂಬಿಕೆ ವಿರೋಧಿ ಒಕ್ಕೂಟದ ಕಾರ್ಯಕರ್ತರು ಸೋಮವಾರ ಜಾಗೃತಿ ಮೂಡಿಸಿದರು.

ಬೆಂಗಳೂರು; ಗ್ರಹಣಕ್ಕೆ ಸಂಬಂಧಿಸಿದ ಪುರಾಣ ಮತ್ತು ಮೂಢನಂಬಿಕೆಗಳನ್ನು ಹೋಗಲಾಡಿಸಲು ಮೂಢನಂಬಿಕೆ ವಿರೋಧಿ ಒಕ್ಕೂಟದ ಕಾರ್ಯಕರ್ತರು ಸೋಮವಾರ ಜಾಗೃತಿ ಮೂಡಿಸಿದರು.

ಸೋಮವಾರ ನಗರದ ಪುರಭವನದ ಮೆಟ್ಟಿಲುಗಳ ಮೇಲೆ ಸಮೋಸಾ, ಬಜ್ಜಿ ಹಾಗೂ ಹಣ್ಣುಗಳು ಸೇರಿದಂತೆ ಮತ್ತಿತರ ಆಹಾರ ಪದಾರ್ಥಗಳನ್ನು ಸೇವಿಸಿ ಚಹಾ ಕುಡಿಯುವ ಮೂಲಕ ಗ್ರಹಣದ ಆಚರಣೆಯನ್ನು ಖಂಡಿಸಿದರು.

ಮೂಡಾಂಬಿಕೆ ವಿರೋಧ ಒಕ್ಕೂಟದ ಸಂಸ್ಥಾಪಕ ನರಸಿಂಹ ಮೂರ್ತಿ, ಸೂರ್ಯಗ್ರಹಣ, ಚಂದ್ರಗ್ರಹಣ ಪ್ರತಿ ವರ್ಷ ನಡೆಯುವ ಪ್ರಕ್ರಿಯೆ. ಆದರೆ, ಕೆಲ ಜ್ಯೋತಿಷಿಗಳು ಇಲ್ಲಸಲ್ಲದ ವಿವರಣೆ ಕೊಡುತ್ತಾರೆ. “ಗರ್ಭಿಣಿಯರು ಹೊರಗೆ ಹೋಗಬಾರದು, ಊಟ ಮಾಡಬಾರದು ಎಂದು ಜನರಿಗೆ ಕೆಲವು ಪ್ರಸ್ತುತವಲ್ಲದ ಸಲಹೆ ನೀಡುತ್ತಾರೆ. ಇವೆಲ್ಲ ಮೂಢನಂಬಿಕೆಗಳಾಗಿವೆ. ಜನರು ಇಂತಹ ಜ್ಯೋತಿಷಿಗಳನ್ನು ನಿರ್ಲಕ್ಷಿಸಬೇಕು. ಹೀಗಾಗಿ ಅರಿವು ಮೂಡಿಸಲು ಅಭಿಯಾನವನ್ನು ನಡೆಸಿದ್ದೇವೆಂದು ಹೇಳಿದರು.

ಜನರಿಗೆ ಸರಿಯಾದ ವೈಜ್ಞಾನಿಕ ದಾರಿ ತೋರಿಸಲು ಸುಮಾರು 20 ವರ್ಷದಿಂದ ಮೂಢ ನಂಬಿಕೆ ವಿರೋಧಿ ಒಕ್ಕೂಟದಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

SCROLL FOR NEXT