EPT ಯಲ್ಲಿ ಸಿಲುಕಿದ್ದ ಕಾಡಾನೆ ರಕ್ಷಣೆ TNIE
ರಾಜ್ಯ

ಕುಶಾಲನಗರ: EPT ಯಲ್ಲಿ ಸಿಲುಕಿದ್ದ ಕಾಡಾನೆ ರಕ್ಷಣೆ

ಆನೆ ನಿಗ್ರಹ ಟ್ರೆಂಚ್ ನಲ್ಲಿ ಸಿಲುಕಿದ್ದ ಕಾಡಾನೆಯನ್ನು ಅರಣ್ಯ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಕುಶಾಲನಗರದ ಗುಡ್ಡೆಹೊಸೂರಿನ ಚಿಕ್ಕಬೆಟ್ಟಗೇರಿಯಲ್ಲಿ ವರದಿಯಾಗಿದೆ.

ಕೊಡಗು: ಆನೆ ನಿಗ್ರಹ ಟ್ರೆಂಚ್ ನಲ್ಲಿ ಸಿಲುಕಿದ್ದ ಕಾಡಾನೆಯನ್ನು ಅರಣ್ಯ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಕುಶಾಲನಗರದ ಗುಡ್ಡೆಹೊಸೂರಿನ ಚಿಕ್ಕಬೆಟ್ಟಗೇರಿಯಲ್ಲಿ ವರದಿಯಾಗಿದೆ. ಬುಧವಾರ ಬೆಳಿಗ್ಗೆ ಅಶೋಕ್ ಎಂಬುವವರ ಮನೆ ಬಳಿ ಕಾಡಾನೆ ಕಾಣಿಸಿಕೊಂಡು ಮನೆ ಬಳಿ ಸುತ್ತಾಡುತ್ತಿತ್ತು. ನೀರಿನ ಟ್ಯಾಂಕ್ ಬಳಿ ಬಂದ ಆನೆ ನೀರಿಗಾಗಿ ಹುಡುಕುತ್ತಿತ್ತು ಎಂದು ಅಶೋಕ್ ಹೇಳಿದ್ದಾರೆ.

ಆನೆಗೆ ನೀರು ಸಿಗದಿದ್ದಾಗ ಬೋರ್‌ವೆಲ್‌ ಅಳವಡಿಸಿದ್ದ ಎಸ್ಟೇಟ್‌ನೊಳಗೆ ಹೋಗಿದ್ದರೂ ನೀರು ಸಿಗಲಿಲ್ಲ ಎನ್ನಲಾಗಿದೆ. ಇದರ ಬೆನ್ನಲ್ಲೇ ಆನೆ ಅರಣ್ಯದಂಚಿಗೆ ಮರಳಿದೆ. ಇಲ್ಲಿ ಆನೆ ನಿಗ್ರಹ ಟ್ರೆಂಚ್ ನಲ್ಲಿ ನೀರು ಕಂಡು ಕುಡಿಯಲು ಹೋಗಿ ಸಿಲುಕಿಕೊಂಡಿದೆ.

ಬೆಳಿಗ್ಗೆ 8 ಗಂಟೆ ವೇಳೆಗೆ ಕಾಫಿ ಬೆಳೆಗಾರ ಗಣೇಶ್ ಎಂಬುವವರು ಎಸ್ಟೇಟ್ ಗೆ ತೆರಳುತ್ತಿದ್ದಾಗ ಆನೆಗಳ ಹಿಂಡಿನ ಕೂಗನ್ನು ಕೇಳಿಸಿಕೊಂಡಿದ್ದಾರೆ. ತಕ್ಷಣವೇ ಅರಣ್ಯ ಇಲಾಖೆಗೆ ಸುದ್ದಿ ತಲುಪಿಸಿದ್ದರು. ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ 3 ಗಂಟೆಗಳ ಕಾರ್ಯಾಚರಣೆ ಬಳಿಕ ಆನೆಯನ್ನು ರಕ್ಷಣೆ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT