EPT ಯಲ್ಲಿ ಸಿಲುಕಿದ್ದ ಕಾಡಾನೆ ರಕ್ಷಣೆ TNIE
ರಾಜ್ಯ

ಕುಶಾಲನಗರ: EPT ಯಲ್ಲಿ ಸಿಲುಕಿದ್ದ ಕಾಡಾನೆ ರಕ್ಷಣೆ

ಆನೆ ನಿಗ್ರಹ ಟ್ರೆಂಚ್ ನಲ್ಲಿ ಸಿಲುಕಿದ್ದ ಕಾಡಾನೆಯನ್ನು ಅರಣ್ಯ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಕುಶಾಲನಗರದ ಗುಡ್ಡೆಹೊಸೂರಿನ ಚಿಕ್ಕಬೆಟ್ಟಗೇರಿಯಲ್ಲಿ ವರದಿಯಾಗಿದೆ.

ಕೊಡಗು: ಆನೆ ನಿಗ್ರಹ ಟ್ರೆಂಚ್ ನಲ್ಲಿ ಸಿಲುಕಿದ್ದ ಕಾಡಾನೆಯನ್ನು ಅರಣ್ಯ ಸಿಬ್ಬಂದಿ ರಕ್ಷಣೆ ಮಾಡಿರುವ ಘಟನೆ ಕುಶಾಲನಗರದ ಗುಡ್ಡೆಹೊಸೂರಿನ ಚಿಕ್ಕಬೆಟ್ಟಗೇರಿಯಲ್ಲಿ ವರದಿಯಾಗಿದೆ. ಬುಧವಾರ ಬೆಳಿಗ್ಗೆ ಅಶೋಕ್ ಎಂಬುವವರ ಮನೆ ಬಳಿ ಕಾಡಾನೆ ಕಾಣಿಸಿಕೊಂಡು ಮನೆ ಬಳಿ ಸುತ್ತಾಡುತ್ತಿತ್ತು. ನೀರಿನ ಟ್ಯಾಂಕ್ ಬಳಿ ಬಂದ ಆನೆ ನೀರಿಗಾಗಿ ಹುಡುಕುತ್ತಿತ್ತು ಎಂದು ಅಶೋಕ್ ಹೇಳಿದ್ದಾರೆ.

ಆನೆಗೆ ನೀರು ಸಿಗದಿದ್ದಾಗ ಬೋರ್‌ವೆಲ್‌ ಅಳವಡಿಸಿದ್ದ ಎಸ್ಟೇಟ್‌ನೊಳಗೆ ಹೋಗಿದ್ದರೂ ನೀರು ಸಿಗಲಿಲ್ಲ ಎನ್ನಲಾಗಿದೆ. ಇದರ ಬೆನ್ನಲ್ಲೇ ಆನೆ ಅರಣ್ಯದಂಚಿಗೆ ಮರಳಿದೆ. ಇಲ್ಲಿ ಆನೆ ನಿಗ್ರಹ ಟ್ರೆಂಚ್ ನಲ್ಲಿ ನೀರು ಕಂಡು ಕುಡಿಯಲು ಹೋಗಿ ಸಿಲುಕಿಕೊಂಡಿದೆ.

ಬೆಳಿಗ್ಗೆ 8 ಗಂಟೆ ವೇಳೆಗೆ ಕಾಫಿ ಬೆಳೆಗಾರ ಗಣೇಶ್ ಎಂಬುವವರು ಎಸ್ಟೇಟ್ ಗೆ ತೆರಳುತ್ತಿದ್ದಾಗ ಆನೆಗಳ ಹಿಂಡಿನ ಕೂಗನ್ನು ಕೇಳಿಸಿಕೊಂಡಿದ್ದಾರೆ. ತಕ್ಷಣವೇ ಅರಣ್ಯ ಇಲಾಖೆಗೆ ಸುದ್ದಿ ತಲುಪಿಸಿದ್ದರು. ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ 3 ಗಂಟೆಗಳ ಕಾರ್ಯಾಚರಣೆ ಬಳಿಕ ಆನೆಯನ್ನು ರಕ್ಷಣೆ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

SCROLL FOR NEXT