ಸಾಂದರ್ಭಿಕ ಚಿತ್ರ  
ರಾಜ್ಯ

ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಪೊಲೀಸರಿಗೆ ಕರೆ ಮಾಡಿದ ತಾಯಿ: ಬೆಂಗಳೂರಿನ ಜಾಲಹಳ್ಳಿಯಲ್ಲಿ ಹೃದಯ ವಿದ್ರಾವಕ ಘಟನೆ!

ತನಗೆ ಕೆಲಸವಿಲ್ಲದೆ ಮಕ್ಕಳಿಬ್ಬರನ್ನು ಸಾಕುವುದಕ್ಕೆ ಕಷ್ಟವಾಗುತ್ತಿದೆ ಎಂದು ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಜಾಲಹಳ್ಳಿಯಲ್ಲಿ ನಡೆದಿದೆ.

ಬೆಂಗಳೂರು: ಬಡತನ, ಹಸಿವು, ಆರ್ಥಿಕ ಕಷ್ಟ ಮನುಷ್ಯನನ್ನು ಯಾವ ಹೀನ ಕೃತ್ಯವೆಸಗುವ ಮನಸ್ಥಿತಿಗೆ ತಳ್ಳಬಹುದು ಎಂಬುದಕ್ಕೆ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯೇ ಉದಾಹರಣೆ.

ತನಗೆ ಕೆಲಸವಿಲ್ಲದೆ ಮಕ್ಕಳಿಬ್ಬರನ್ನು ಸಾಕುವುದಕ್ಕೆ ಕಷ್ಟವಾಗುತ್ತಿದೆ ಎಂದು ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಜಾಲಹಳ್ಳಿಯಲ್ಲಿ ನಡೆದಿದೆ.

ಗಂಗಾದೇವಿ ಮಕ್ಕಳನ್ನು ಕೊಲೆ ಮಾಡಿದ ತಾಯಿ. ಈಕೆ ತಾನು ಹೆತ್ತ ಮಕ್ಕಳಾದ 9 ವರ್ಷದ ಲಕ್ಷ್ಮಿ ಮತ್ತು 7 ವರ್ಷದ ಗೌತಮ್ ನನ್ನು ಉಸಿರುಗಟ್ಟಿಸಿ ಕೊಂದು ಹಾಕಿದ್ದಾಳೆ. ಸದ್ಯ ಆರೋಪಿ ಗಂಗಾದೇವಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆಂಧ್ರ ಮೂಲದವರಾದ ಆರೋಪಿ ಗಂಗಾದೇವಿ ಕುಟುಂಬ ಬೆಂಗಳೂರಿನ ಜಾಲಹಳ್ಳಿಯಲ್ಲಿ ವಾಸವಾಗಿದ್ದರು. ಕಳೆದ ಮಾರ್ಚ್ ತಿಂಗಳಲ್ಲಿ ತನ್ನ ಪತಿ ಮಗಳ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಗಂಗಾದೇವಿ ಖುದ್ದು ಪೊಲೀಸ್​ ಠಾಣೆಗೆ ದೂರು ನೀಡಿ, ಗಂಡನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು ಮಾಡಿದ್ದಳು.

ಗಂಗಾದೇವಿ ಕೊಟ್ಟ ದೂರಿನ ಆಧಾರದ ಮೇಲೆ ಜಾಲಹಳ್ಳಿ ಪೊಲೀಸರು ಗಂಡನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಅದಾದ ಬಳಿಕ ಈಗ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದಾಳೆ. ಕೆಲಸ ಇಲ್ಲದೇ ಮಕ್ಕಳಿಬ್ಬರನ್ನು ಸಾಕುವುದಕ್ಕೆ ಕಷ್ಟವಾಗುತ್ತಿತ್ತು. ಈ ಕಾರಣಕ್ಕೆ ಇಬ್ಬರು ಮಕ್ಕಳನ್ನು ನಿನ್ನೆ ಯುಗಾದಿ ಹಬ್ಬದ ದಿನ ರಾತ್ರಿ 9.30ರ ಸುಮಾರಿಗೆ ಕೊಲೆ ಮಾಡಿದ್ದಾಳೆ ಎಂದು ತಿಳಿದುಬಂದಿದೆ.

ಗಂಗಾದೇವಿ ಖಾಸಗಿ ಕಂಪನಿಯಲ್ಲಿ ಮಾರ್ಕೆಟಿಂಗ್ ಕೆಲಸ ಮಾಡುತ್ತಿದ್ದಾಳೆ.ನಿನ್ನೆ ರಾತ್ರಿ 9:30ಕ್ಕೆ ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದೇನೆ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾಳೆ. ಕೂಡಲೇ ಘಟನಾ ಸ್ಥಳಕ್ಕೆ ಜಾಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಂಗಾದೇವಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

SCROLL FOR NEXT