ಕಾಡಾನೆ ದಾಳಿ (ಸಾಂದರ್ಭಿಕ ಚಿತ್ರ) 
ರಾಜ್ಯ

Elephant Attack: ಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ಬರುತ್ತಿದ್ದ ಭಕ್ತರ ಮೇಲೆ ಕಾಡಾನೆ ದಾಳಿ, ಮಹಿಳೆ ಸಾವು

ಮಹದೇಶ್ವರ ಸ್ವಾಮಿ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ಬರುತ್ತಿದ್ದ ಭಕ್ತರ ಮೇಲೆ ಕಾಡಾನೆ ದಾಳಿ ಮಾಡಿದ್ದು, ದಾಳಿಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ವರದಿಯಾಗಿದೆ.

ಚಾಮರಾಜನಗರ: ಮಹದೇಶ್ವರ ಸ್ವಾಮಿ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ಬರುತ್ತಿದ್ದ ಭಕ್ತರ ಮೇಲೆ ಕಾಡಾನೆ ದಾಳಿ ಮಾಡಿದ್ದು, ದಾಳಿಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ವರದಿಯಾಗಿದೆ.

ಚಾಮರಾಜನಗರದ ಹನೂರು ತಾಲ್ಲೂಕಿನ ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟಕ್ಕೆ ಮಂಗಳವಾರ ಸಂಜೆ ಕಾಲ್ನಡಿಗೆಯಲ್ಲಿ ಬರುತ್ತಿದ್ದ ಭಕ್ತರ ಮೇಲೆ ಕಾಡಾನೆಯೊಂದು ದಾಳಿ ಮಾಡಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೂಲಗಳ ಪ್ರಕಾರ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕಿರುಗಾವಲಿನ ಹೊನ್ನೇನಳ್ಳಿಯ ಲಕ್ಷ್ಮಿ (40) ಮೃತಪಟ್ಟವರಾಗಿದ್ದು, ಗ್ರಾಮದಿಂದ ಎಂಟು ಮಂದಿ ಬೆಟ್ಟಕ್ಕೆ ಬಂದಿದ್ದರು. ಈ ಪೈಕಿ ಲಕ್ಷ್ಮಿ, ಪದ್ಮಮ್ಮ, ಪುಟ್ಟರಾಜು ಅವರು ಕಾಲ್ನಡಿಗೆಯಲ್ಲಿ ಬರುತ್ತಿದ್ದರು. ಸಂಜೆ 7 ಗಂಟೆಯ ಸುಮಾರಿಗೆ ಆನೆ ತಲೆದಿಂಬ ಸಮೀಪ ಕಾಡಾನೆ ಹಠಾತ್ ದಾಳಿ ಮಾಡಿದೆ. ಆನೆ ತುಳಿತಕ್ಕೆ ಒಳಗಾದ ಲಕ್ಷ್ಮಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಚಾರ ತಿಳಿಯುತ್ತಲೇ ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಮ ಮಂದಿರ ದೇಣಿಗೆ ವಿವಾದ: 'ಆಕಾಶವೇನು ಕಳಚಿ ಬೀಳಲ್ಲ'; ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ..!

ಅಮೆರಿಕ-ಇರಾನ್ ಸಂಘರ್ಷಕ್ಕೆ ಬ್ರೇಕ್: ಶಾಂತಿ ಮಾತುಕತೆಗೆ ಉಭಯ ರಾಷ್ಟ್ರಗಳು ಸಮ್ಮತಿ. ಹಾರ್ಮುಜ್‌ನಲ್ಲಿ ಹಡಗು ಸಂಚಾರಕ್ಕೆ ಗ್ರೀನ್ ಸಿಗ್ನಲ್..!

#OpentoWork: ಭಾರತಕ್ಕೆ ಆಘಾತ ನೀಡಿದ್ದ ಐರ್ಲೆಂಡ್ ವೇಗಿ ಲಿಂಕ್ಡ್‌ಇನ್ ಪೋಸ್ಟ್ ವೈರಲ್, Jai Moondraಗೆ ಕೆಲ್ಸ ಇಲ್ವಾ?

AIADMKಗೆ ಮತ್ತೆ ಮರ್ಮಾಘಾತ: ಮತ್ತೋರ್ವ ಪ್ರಮುಖ ಶಾಸಕ ರಾಜೀನಾಮೆ, ತಮಿಳುನಾಡು ಚುನಾವಣೆ ಬಳಿಕ 6ನೇ ವಿಕೆಟ್ ಪತನ!

ಹೆದ್ದಾರಿಯಲ್ಲಿ ರಿವರ್ಸ್ ಬಂದ Tata Tiagoಗೆ ಬೊಲೆರೋ SUV ಢಿಕ್ಕಿ, ಒಂದೇ ಕುಟುಂಬದ ನಾಲ್ವರ ಸಾವು, Video