ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು ಜಲಕ್ಷಾಮ: ಸಂಸ್ಕರಿಸಿದ ನೀರು ಬಳಕೆಗೆ ಮಾರ್ಗಸೂಚಿ ರೂಪಿಸಿದ ಸರ್ಕಾರ!

ಬೆಂಗಳೂರು ಸೇರಿದಂತೆ ರಾಜ್ಯದ ಇತರ ಭಾಗಗಳಲ್ಲಿನ ನೀರಿನ ಬಿಕ್ಕಟ್ಟು ತಲೋರಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಂಸ್ಕರಿಸಿದ ನೀರಿನ ಬಳಕೆಗೆ ಮಾರ್ಗಸೂಚಿಗಳನ್ನು ರೂಪಿಸಿದೆ.

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಇತರ ಭಾಗಗಳಲ್ಲಿನ ನೀರಿನ ಬಿಕ್ಕಟ್ಟು ತಲೋರಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಂಸ್ಕರಿಸಿದ ನೀರಿನ ಬಳಕೆಗೆ ಮಾರ್ಗಸೂಚಿಗಳನ್ನು ರೂಪಿಸಿದೆ.

ವಸತಿ ಸಮುಚ್ಚಯಗಳು ಕನಿಷ್ಠ ಶೇ.50 ಸಂಸ್ಕರಿಸಿದ ನೀರನ್ನು ಬಳಕೆ ಮಾಡಬೇಕು. ಉಳಿದ ನೀರನ್ನು ವಾಣಿಜ್ಯ ಉದ್ದೇಶಗಳಿಗೆ ಬಳಕೆ ಮಾಡಬಹುದು ಎಂದು ಹೇಳಿದೆ. ಈ ಸಂಬಂಧ ಏಪ್ರಿಲ್ 3 ರಂದು ಗೆಜೆಟ್ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.

ಸಂಸ್ಕರಿಸಿದ ನೀರನ್ನು ನಿರ್ಮಾಣ, ಕೈಗಾರಿಕೆ, ತೋಟಗಾರಿಕೆ ಮತ್ತಿತರ ಉದ್ದೇಶಗಳಿಗೆ ಬಳಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಕುಡಿಯುವ, ಔಷಧೀಯ ಅಥವಾ ಆಹಾರ ಸಂಸ್ಕರಣಾ ಉದ್ದೇಶಗಳಿಗಾಗಿ ಸಂಸ್ಕರಿಸಿದ ನೀರನ್ನು ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈ ವಿಧಾನವು ಜಲಸಂಪನ್ಮೂಲಗಳನ್ನು ಸಂರಕ್ಷಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದೆ.

ಸಂಸ್ಕರಿಸಿದ ನೀರು ಬಳಕೆ ಕುರಿತು ಸಾಕಷ್ಟು ಅಧಿಕಾರಿಗಳು ಹೇಳಿಕೆಗಳನ್ನು ನೀಡುತ್ತಿದ್ದರು, ಆದರೆ, ನೀರಿನ ಬಳಕೆ ವಿಧಾನದ ಬಗ್ಗೆ ಮಾತ್ರ ಈ ವರೆಗೂ ಯಾವುದೇ ಸ್ಪಷ್ಟ ಮಾಹಿತಿಗಳಿರಲಿಲ್ಲ. ಇದೀಗ ಸರ್ಕಾರ ಮಾರ್ಗಸೂಚಿ ಹೊರಡಿಸಿರುವುದು ಸಹಾಯಕವಾಗಿದೆ.

ಫೆಬ್ರವರಿಯಲ್ಲಿ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸ್ಕರಿಸಿದ ನೀರು ಬಳಕೆ ಕುರಿತು ಮಾತನಾಡಿದ್ದರು. ಈ ಕುರಿತು ಶೀಘ್ರದಲ್ಲೇ ಮಾರ್ಗಸೂಚಿ ರೂಪಿಸುವುದಾಗಿ ತಿಳಿಸಿದ್ದರು. ಇದೀಗ ಸರ್ಕಾರ ಮಾರ್ಗಸೂಚಿಯನ್ನು ರೂಪಿಸಿದೆ. ಸರ್ಕಾರದ ಈ ಕ್ರಮನ್ನು ಮಳೆನೀರು ಕೊಯ್ಲು ತಜ್ಞ ಎಸ್ ವಿಶ್ವನಾಥ್ ಅವರು ಸ್ವಾಗತಿಸಿದ್ದಾರೆ.

ನಗರದ ಹಲವು ಅಪಾರ್ಟ್ ಮೆಂಟ್ ಗಳು ಹೆಚ್ಚುವರಿ ಸಂಸ್ಕರಿಸಿದ ನೀರನ್ನು ಹೊಂದಿವೆ. ಆದರೆ, ಬಳಕೆ ಬಗ್ಗೆ ಅವರಿಗೆ ಮಾಹಿತಿಯಿಲ್ಲ. ಹೀಗಾಗಿ ಆ ನೀರನ್ನು ಚರಂಡಿಗಳಿಗೆ ಹರಿ ಬಿಡುತ್ತಿದ್ದಾರೆಂದು ಹೇಳಿದ್ದಾರೆ.

ಇದೊಂದು ಉತ್ತಮ ನಡೆ, ಆದರೆ ಎಚ್ಚರಿಕೆಯಿಂದ ನಿಗಾ ವಹಿಸಬೇಕು. “ಅಗತ್ಯವಿದ್ದರೆ ಕಾನೂನನ್ನು ಬದಲಾಯಿಸುವಲ್ಲಿ ಸರ್ಕಾರವು ಕ್ರಿಯಾತ್ಮಕವಾಗಿರಬೇಕು. ಹಳೆಯ ಕಾನೂನನ್ನು ಬದಲಾಯಿಸಲು ಬಹಳ ಸಮಯ ಬೇಕಾಗಿತ್ತು. ಹೆಚ್ಚುವರಿ ಸಂಸ್ಕರಿಸಿದ ನೀರನ್ನು ಸಂಪೂರ್ಣವಾಗಿ ಬಳಸಲು ಸಾಧ್ಯವಿಲ್ಲ ಎಂಬುದು ಎಲ್ಲರಿಗೂ ತಿಳಿದಿದೆ. ಸಂಸ್ಕರಿಸಿದ ನೀರನ್ನು ಶೇ.50ರವರೆಗೆ ಮಾರಾಟ ಮಾಡಲು ಇದೀಗ ಅನುಮತಿ ಇರುವುದರಿಂದ ಈ ನೀರಿಗೆ ಮಾರುಕಟ್ಟೆ ಸೃಷ್ಟಿಸಬಹುದು ಎಂದು ತಿಳಿಸಿದ್ದಾರೆ.

ರಿಯಲ್ ಎಸ್ಟೇಟ್ ಸಂಬಂಧಿತ ಅಂಶಗಳಲ್ಲಿ ಪರಿಣತಿ ಹೊಂದಿರುವ ಬೆಂಗಳೂರು ಮೂಲದ ವಕೀಲ ಪ್ರಶಾಂತ್ ಮಿರ್ಲೆ ಎಂಬುವವರು ಮಾತನಾಡಿ, ಮಾಲಿನ್ಯ ನಿಯಂತ್ರಣ ಮಂಡಳಿಯ ಮಾನದಂಡಗಳಿಗೆ ಅನುಗುಣವಾಗಿ ಸಂಸ್ಕರಿಸಿದ ನೀರಿನ ಸಮರ್ಥ ಬಳಕೆ ಮಾಡಬಹುದು. ಇದರಿಂದ ನಗರದ ನೀರಿನ ಕೊರತೆಯನ್ನು ನಿಭಾಯಿಸಬಹುದು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT