ಪ್ರೀತಂ ಗೌಡ TNIE
ರಾಜ್ಯ

ಹಾಸನದಲ್ಲಿ ಮುಗಿಯದ ಬೇಗುದಿ: ಪ್ರೀತಂ ಗೌಡರನ್ನು ಟೀಕಿಸಿದ್ದ ಬಿಜೆಪಿ ಕಾರ್ಯಕರ್ತನಿಗೆ ಹಿಗ್ಗಾಮುಗ್ಗಾ ಥಳಿತ!

ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡರನ್ನು ಟೀಕಿಸಿದ ಕಾರಣಕ್ಕೆ ಬಿಜೆಪಿಯ ಪ್ರಮುಖ ಕಾರ್ಯಕರ್ತ ವಿಜಯ ಕುಮಾರ್ ಎಂಬುವರನ್ನು ಪ್ರೀತಂ ಬೆಂಬಲಿಗರು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಹಾಸನ: ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡರನ್ನು ಟೀಕಿಸಿದ ಕಾರಣಕ್ಕೆ ಬಿಜೆಪಿಯ ಪ್ರಮುಖ ಕಾರ್ಯಕರ್ತ ವಿಜಯ ಕುಮಾರ್ ಎಂಬುವರನ್ನು ಪ್ರೀತಂ ಬೆಂಬಲಿಗರು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಎಂ.ಜಿ.ರಸ್ತೆಯಲ್ಲಿರುವ ವಿಜಯಕುಮಾರ್ ಎಂಬುವವರ ಒಡೆತನದ ಇಂಟರ್‌ನೆಟ್ ಪಾರ್ಲರ್‌ಗೆ ನುಗ್ಗಿದ ಯುವಕರು ಅವಾಚ್ಯ ಶಬ್ದಗಳಿಂದ ನಿಂದಿಸಿ ವಿಜಯಕುಮಾರ್ ಮೇಲೆ ಹಲ್ಲೆ ನಡೆಸಿ ಗಾಜು ಮತ್ತು ಗಾಜೆಟ್‌ಗಳನ್ನು ಒಡೆದು ಹಾಕಿದ್ದಾರೆ. ಅಲ್ಲದೆ ವಿಜಯಕುಮಾರ್ ಅವರನ್ನು ರಕ್ಷಿಸಲು ಬಂದ ಪ್ರಮೋದ್ ಮತ್ತು ಸಂದೇಶ್ ಅವರ ಮೇಲೂ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.

ಗಾಯಾಳು ವಿಜಯಕುಮಾರ್ ಗೆ ಸದ್ಯ ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಜಯಕುಮಾರ್ ಇತ್ತೀಚೆಗೆ ಪ್ರೀತಂ ಗೌಡ ವಿರುದ್ಧ ಮಾಡಿದ ಹೇಳಿಕೆಯೇ ಹಲ್ಲೆಗೆ ಕಾರಣ ಎನ್ನಲಾಗಿದೆ. ಬಿಜೆಪಿ ಹೈಕಮಾಂಡ್ ಮೈತ್ರಿ ನಿರ್ಧಾರ ಕೈಗೊಂಡಿದ್ದು, ಪ್ರೀತಂ ಗೌಡ ಸೇರಿದಂತೆ ಎಲ್ಲರೂ ಈ ನಿರ್ಧಾರಕ್ಕೆ ಬದ್ಧರಾಗಿರಬೇಕು ಎಂದು ವಿಜಯ ಕುಮಾರ್ ಹೇಳಿದ್ದರು. ಹಾಸನದಲ್ಲಿ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ರ‍್ಯಾಲಿಯಲ್ಲಿ ವಿಜಯಕುಮಾರ್ ಬಿಜೆಪಿ ಬಾವುಟ ಹಿಡಿದುಕೊಂಡು ಬಂದಿದ್ದರು.

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಬೇಲೂರು ಶಾಸಕ ಎಚ್.ಕೆ.ಸುರೇಶ್, ಭವಾನಿ ರೇವಣ್ಣ ಆಸ್ಪತ್ರೆಗೆ ಭೇಟಿ ನೀಡಿ ವಿಜಯಕುಮಾರ್ ಆರೋಗ್ಯ ವಿಚಾರಿಸಿದರು. ಅಲ್ಲದೆ ಹಲ್ಲೆ ನಡೆಸಿದ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಪೊಲೀಸರನ್ನು ಒತ್ತಾಯಿಸಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಸಿ ಸತ್ಯಭಾಮಾ ಅವರನ್ನು ಭೇಟಿ ಮಾಡಿ, ತಪ್ಪಿತಸ್ಥರ ವಿರುದ್ಧ ಶೀಘ್ರ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸುವಂತೆ ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT