ಸಂಗ್ರಹ ಚಿತ್ರ 
ರಾಜ್ಯ

Lok Sabha Polls 2024: ದಾವಣಗೆರೆ, ರಾಮನಗರದಲ್ಲಿ ಚುನಾವಣಾಧಿಕಾರಿಗಳ ಬೇಟೆ; 22 ಕೋಟಿ ಮೌಲ್ಯದ ಚಿನ್ನ, ವಜ್ರ ಜಪ್ತಿ

ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗುತ್ತಿದ್ದಂತೆ ಚುನಾವಣಾಧಿಕಾರಿಗಳು ಅಲರ್ಟ್ ಆಗಿದ್ದು ಅಕ್ರಮ ಸಾಗಾಣೆ ಮೇಲೆ ನಿಗಾ ಇಟ್ಟಿದ್ದು ರಾಮನಗರ ಮತ್ತು ದಾವಣಗೆರೆಯಲ್ಲಿ ತಪಾಸಣೆ ವೇಳೆ ಬರೋಬ್ಬರಿ 22 ಕೋಟಿ ಮೌಲ್ಯದ ಚಿನ್ನ ಮತ್ತ ವಜ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ದಾವಣಗೆರೆ/ರಾಮನಗರ: ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗುತ್ತಿದ್ದಂತೆ ಚುನಾವಣಾಧಿಕಾರಿಗಳು ಅಲರ್ಟ್ ಆಗಿದ್ದು ಅಕ್ರಮ ಸಾಗಾಣೆ ಮೇಲೆ ನಿಗಾ ಇಟ್ಟಿದ್ದು ರಾಮನಗರ ಮತ್ತು ದಾವಣಗೆರೆಯಲ್ಲಿ ತಪಾಸಣೆ ವೇಳೆ ಬರೋಬ್ಬರಿ 22 ಕೋಟಿ ಮೌಲ್ಯದ ಚಿನ್ನ ಮತ್ತ ವಜ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 10 ಕೋಟಿ ಮೌಲ್ಯದ ಚಿನ್ನವನ್ನು ರಾಮನಗರದಲ್ಲಿ ಜಪ್ತಿ ಮಾಡಿದ್ದರೆ ದಾವಣಗೆರೆಯಲ್ಲಿ 12.50 ಕೋಟಿ ಮೌಲ್ಯದ ಚಿನ್ನ, ವಜ್ರ, ಹಾಗೆ ತುಮಕೂರಿನಲ್ಲಿ 70 ಲಕ್ಷ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ದಾವಣಗೆರೆಯ ಲೋಕಿಕೆರೆ ಚೆಕ್​ಪೋಸ್ಟ್ ನಲ್ಲಿ ಚುನಾವಣಾ ಅಧಿಕಾರಿ ಲೋಕೇಶ್ ನೇತೃತ್ವದಲ್ಲಿ ತಪಾಸಣೆ ನಡೆಸಿದ್ದು ಈ ವೇಳೆ ಸೂಕ್ತ ದಾಖಲೆಗಳು ಇಲ್ಲದ ಕಾರಣ 12.50 ಕೋಟಿ ರೂ. ಮೌಲ್ಯದ ಚಿನ್ನ, ವಜ್ರವನ್ನು ಜಪ್ತಿ ಮಾಡಲಾಗಿದೆ. ಈ ಚಿನ್ನ ಮತ್ತು ವಜ್ರವನ್ನು ವಿವಿಧ ಆಭರಣ ಅಂಗಡಿಗಳಿಗೆ ಸಾಗಿಸಲಾಗುತ್ತಿತ್ತು ಎಂದು ತಿಳಿಬಂದಿದೆ.

ರಾಮನಗರದ ಬಿಡದಿ ಪೊಲೀಸರು ದಾಖಲೆ ಇಲ್ಲದೆ ಸಾಗಿಸುತ್ತಿದ್ದ 10 ಕೋಟಿ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಮೈಸೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ವಾಹನವನ್ನು ಬಿಡದಿ ಬಳಿಯ ಹೆಜ್ಜಾಲ‌ ಟೋಲ್ ಬಳಿ ಪೊಲೀಸರು ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ