ಸಂಗ್ರಹ ಚಿತ್ರ 
ರಾಜ್ಯ

Lok Sabha Polls 2024: ದಾವಣಗೆರೆ, ರಾಮನಗರದಲ್ಲಿ ಚುನಾವಣಾಧಿಕಾರಿಗಳ ಬೇಟೆ; 22 ಕೋಟಿ ಮೌಲ್ಯದ ಚಿನ್ನ, ವಜ್ರ ಜಪ್ತಿ

ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗುತ್ತಿದ್ದಂತೆ ಚುನಾವಣಾಧಿಕಾರಿಗಳು ಅಲರ್ಟ್ ಆಗಿದ್ದು ಅಕ್ರಮ ಸಾಗಾಣೆ ಮೇಲೆ ನಿಗಾ ಇಟ್ಟಿದ್ದು ರಾಮನಗರ ಮತ್ತು ದಾವಣಗೆರೆಯಲ್ಲಿ ತಪಾಸಣೆ ವೇಳೆ ಬರೋಬ್ಬರಿ 22 ಕೋಟಿ ಮೌಲ್ಯದ ಚಿನ್ನ ಮತ್ತ ವಜ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ದಾವಣಗೆರೆ/ರಾಮನಗರ: ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗುತ್ತಿದ್ದಂತೆ ಚುನಾವಣಾಧಿಕಾರಿಗಳು ಅಲರ್ಟ್ ಆಗಿದ್ದು ಅಕ್ರಮ ಸಾಗಾಣೆ ಮೇಲೆ ನಿಗಾ ಇಟ್ಟಿದ್ದು ರಾಮನಗರ ಮತ್ತು ದಾವಣಗೆರೆಯಲ್ಲಿ ತಪಾಸಣೆ ವೇಳೆ ಬರೋಬ್ಬರಿ 22 ಕೋಟಿ ಮೌಲ್ಯದ ಚಿನ್ನ ಮತ್ತ ವಜ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 10 ಕೋಟಿ ಮೌಲ್ಯದ ಚಿನ್ನವನ್ನು ರಾಮನಗರದಲ್ಲಿ ಜಪ್ತಿ ಮಾಡಿದ್ದರೆ ದಾವಣಗೆರೆಯಲ್ಲಿ 12.50 ಕೋಟಿ ಮೌಲ್ಯದ ಚಿನ್ನ, ವಜ್ರ, ಹಾಗೆ ತುಮಕೂರಿನಲ್ಲಿ 70 ಲಕ್ಷ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ದಾವಣಗೆರೆಯ ಲೋಕಿಕೆರೆ ಚೆಕ್​ಪೋಸ್ಟ್ ನಲ್ಲಿ ಚುನಾವಣಾ ಅಧಿಕಾರಿ ಲೋಕೇಶ್ ನೇತೃತ್ವದಲ್ಲಿ ತಪಾಸಣೆ ನಡೆಸಿದ್ದು ಈ ವೇಳೆ ಸೂಕ್ತ ದಾಖಲೆಗಳು ಇಲ್ಲದ ಕಾರಣ 12.50 ಕೋಟಿ ರೂ. ಮೌಲ್ಯದ ಚಿನ್ನ, ವಜ್ರವನ್ನು ಜಪ್ತಿ ಮಾಡಲಾಗಿದೆ. ಈ ಚಿನ್ನ ಮತ್ತು ವಜ್ರವನ್ನು ವಿವಿಧ ಆಭರಣ ಅಂಗಡಿಗಳಿಗೆ ಸಾಗಿಸಲಾಗುತ್ತಿತ್ತು ಎಂದು ತಿಳಿಬಂದಿದೆ.

ರಾಮನಗರದ ಬಿಡದಿ ಪೊಲೀಸರು ದಾಖಲೆ ಇಲ್ಲದೆ ಸಾಗಿಸುತ್ತಿದ್ದ 10 ಕೋಟಿ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಮೈಸೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ವಾಹನವನ್ನು ಬಿಡದಿ ಬಳಿಯ ಹೆಜ್ಜಾಲ‌ ಟೋಲ್ ಬಳಿ ಪೊಲೀಸರು ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT