ಸಂಗ್ರಹ ಚಿತ್ರ 
ರಾಜ್ಯ

Lok Sabha Polls 2024: ದಾವಣಗೆರೆ, ರಾಮನಗರದಲ್ಲಿ ಚುನಾವಣಾಧಿಕಾರಿಗಳ ಬೇಟೆ; 22 ಕೋಟಿ ಮೌಲ್ಯದ ಚಿನ್ನ, ವಜ್ರ ಜಪ್ತಿ

ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗುತ್ತಿದ್ದಂತೆ ಚುನಾವಣಾಧಿಕಾರಿಗಳು ಅಲರ್ಟ್ ಆಗಿದ್ದು ಅಕ್ರಮ ಸಾಗಾಣೆ ಮೇಲೆ ನಿಗಾ ಇಟ್ಟಿದ್ದು ರಾಮನಗರ ಮತ್ತು ದಾವಣಗೆರೆಯಲ್ಲಿ ತಪಾಸಣೆ ವೇಳೆ ಬರೋಬ್ಬರಿ 22 ಕೋಟಿ ಮೌಲ್ಯದ ಚಿನ್ನ ಮತ್ತ ವಜ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ದಾವಣಗೆರೆ/ರಾಮನಗರ: ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗುತ್ತಿದ್ದಂತೆ ಚುನಾವಣಾಧಿಕಾರಿಗಳು ಅಲರ್ಟ್ ಆಗಿದ್ದು ಅಕ್ರಮ ಸಾಗಾಣೆ ಮೇಲೆ ನಿಗಾ ಇಟ್ಟಿದ್ದು ರಾಮನಗರ ಮತ್ತು ದಾವಣಗೆರೆಯಲ್ಲಿ ತಪಾಸಣೆ ವೇಳೆ ಬರೋಬ್ಬರಿ 22 ಕೋಟಿ ಮೌಲ್ಯದ ಚಿನ್ನ ಮತ್ತ ವಜ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 10 ಕೋಟಿ ಮೌಲ್ಯದ ಚಿನ್ನವನ್ನು ರಾಮನಗರದಲ್ಲಿ ಜಪ್ತಿ ಮಾಡಿದ್ದರೆ ದಾವಣಗೆರೆಯಲ್ಲಿ 12.50 ಕೋಟಿ ಮೌಲ್ಯದ ಚಿನ್ನ, ವಜ್ರ, ಹಾಗೆ ತುಮಕೂರಿನಲ್ಲಿ 70 ಲಕ್ಷ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ದಾವಣಗೆರೆಯ ಲೋಕಿಕೆರೆ ಚೆಕ್​ಪೋಸ್ಟ್ ನಲ್ಲಿ ಚುನಾವಣಾ ಅಧಿಕಾರಿ ಲೋಕೇಶ್ ನೇತೃತ್ವದಲ್ಲಿ ತಪಾಸಣೆ ನಡೆಸಿದ್ದು ಈ ವೇಳೆ ಸೂಕ್ತ ದಾಖಲೆಗಳು ಇಲ್ಲದ ಕಾರಣ 12.50 ಕೋಟಿ ರೂ. ಮೌಲ್ಯದ ಚಿನ್ನ, ವಜ್ರವನ್ನು ಜಪ್ತಿ ಮಾಡಲಾಗಿದೆ. ಈ ಚಿನ್ನ ಮತ್ತು ವಜ್ರವನ್ನು ವಿವಿಧ ಆಭರಣ ಅಂಗಡಿಗಳಿಗೆ ಸಾಗಿಸಲಾಗುತ್ತಿತ್ತು ಎಂದು ತಿಳಿಬಂದಿದೆ.

ರಾಮನಗರದ ಬಿಡದಿ ಪೊಲೀಸರು ದಾಖಲೆ ಇಲ್ಲದೆ ಸಾಗಿಸುತ್ತಿದ್ದ 10 ಕೋಟಿ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಮೈಸೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ವಾಹನವನ್ನು ಬಿಡದಿ ಬಳಿಯ ಹೆಜ್ಜಾಲ‌ ಟೋಲ್ ಬಳಿ ಪೊಲೀಸರು ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಮಗ್ರತೆ, ಸಮರ್ಪಣೆ ಉದ್ದೇಶದೊಂದಿಗೆ ಕರ್ನಾಟಕ ಜನತೆಗೆ ಸೇವೆ ಸಲ್ಲಿಸಲು ಬದ್ಧ: ಡಿಕೆ ಶಿವಕುಮಾರ್

ಸಿದ್ದರಾಮಯ್ಯಗೆ ವಿಶ್ರಾಂತಿ ನೀಡಲ್ಲ, ಅವರ ಸೇವೆ ಇನ್ನೂ ಅಗತ್ಯವಿದೆ: CLP ಸಭೆಯಲ್ಲಿ ವೇಣುಗೋಪಾಲ್ ಭಾವುಕ

ಅಭಿವೃದ್ಧಿಯ ಬಂಡಿಯನ್ನು ಮುಂದಕ್ಕೆ ಎಳೆದೊಯ್ಯವ ಜವಾಬ್ದಾರಿ ನಿಮ್ಮ ಹೆಗಲ ಮೇಲಿದೆ: ಡಿಕೆಶಿಗೆ ಸಿದ್ದು ಪತ್ರ!

ಲೋಕಭವನಕ್ಕೆ ತೆರಳಿದ ಡಿ.ಕೆ ಶಿವಕುಮಾರ್: ಸರ್ಕಾರ ರಚನೆಗೆ ರಾಜ್ಯಪಾಲರ ಆಹ್ವಾನ; ಜೂನ್ 3ಕ್ಕೆ ಸಿಎಂ ಆಗಿ ಪ್ರಮಾಣವಚನ!

ವೈಭವ್ ಸೂರ್ಯವಂಶಿಗೆ ಬಂಪರ್ ಆಫರ್: ಜಾರ್ಖಂಡ್ ಆರೋಗ್ಯ ಇಲಾಖೆಯ ಬ್ರಾಂಡ್ ಅಂಬಾಸಿಡರ್

SCROLL FOR NEXT