ಸಂಗ್ರಹ ಚಿತ್ರ 
ರಾಜ್ಯ

Lok Sabha Polls 2024: ದಾವಣಗೆರೆ, ರಾಮನಗರದಲ್ಲಿ ಚುನಾವಣಾಧಿಕಾರಿಗಳ ಬೇಟೆ; 22 ಕೋಟಿ ಮೌಲ್ಯದ ಚಿನ್ನ, ವಜ್ರ ಜಪ್ತಿ

ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗುತ್ತಿದ್ದಂತೆ ಚುನಾವಣಾಧಿಕಾರಿಗಳು ಅಲರ್ಟ್ ಆಗಿದ್ದು ಅಕ್ರಮ ಸಾಗಾಣೆ ಮೇಲೆ ನಿಗಾ ಇಟ್ಟಿದ್ದು ರಾಮನಗರ ಮತ್ತು ದಾವಣಗೆರೆಯಲ್ಲಿ ತಪಾಸಣೆ ವೇಳೆ ಬರೋಬ್ಬರಿ 22 ಕೋಟಿ ಮೌಲ್ಯದ ಚಿನ್ನ ಮತ್ತ ವಜ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ದಾವಣಗೆರೆ/ರಾಮನಗರ: ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗುತ್ತಿದ್ದಂತೆ ಚುನಾವಣಾಧಿಕಾರಿಗಳು ಅಲರ್ಟ್ ಆಗಿದ್ದು ಅಕ್ರಮ ಸಾಗಾಣೆ ಮೇಲೆ ನಿಗಾ ಇಟ್ಟಿದ್ದು ರಾಮನಗರ ಮತ್ತು ದಾವಣಗೆರೆಯಲ್ಲಿ ತಪಾಸಣೆ ವೇಳೆ ಬರೋಬ್ಬರಿ 22 ಕೋಟಿ ಮೌಲ್ಯದ ಚಿನ್ನ ಮತ್ತ ವಜ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 10 ಕೋಟಿ ಮೌಲ್ಯದ ಚಿನ್ನವನ್ನು ರಾಮನಗರದಲ್ಲಿ ಜಪ್ತಿ ಮಾಡಿದ್ದರೆ ದಾವಣಗೆರೆಯಲ್ಲಿ 12.50 ಕೋಟಿ ಮೌಲ್ಯದ ಚಿನ್ನ, ವಜ್ರ, ಹಾಗೆ ತುಮಕೂರಿನಲ್ಲಿ 70 ಲಕ್ಷ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ದಾವಣಗೆರೆಯ ಲೋಕಿಕೆರೆ ಚೆಕ್​ಪೋಸ್ಟ್ ನಲ್ಲಿ ಚುನಾವಣಾ ಅಧಿಕಾರಿ ಲೋಕೇಶ್ ನೇತೃತ್ವದಲ್ಲಿ ತಪಾಸಣೆ ನಡೆಸಿದ್ದು ಈ ವೇಳೆ ಸೂಕ್ತ ದಾಖಲೆಗಳು ಇಲ್ಲದ ಕಾರಣ 12.50 ಕೋಟಿ ರೂ. ಮೌಲ್ಯದ ಚಿನ್ನ, ವಜ್ರವನ್ನು ಜಪ್ತಿ ಮಾಡಲಾಗಿದೆ. ಈ ಚಿನ್ನ ಮತ್ತು ವಜ್ರವನ್ನು ವಿವಿಧ ಆಭರಣ ಅಂಗಡಿಗಳಿಗೆ ಸಾಗಿಸಲಾಗುತ್ತಿತ್ತು ಎಂದು ತಿಳಿಬಂದಿದೆ.

ರಾಮನಗರದ ಬಿಡದಿ ಪೊಲೀಸರು ದಾಖಲೆ ಇಲ್ಲದೆ ಸಾಗಿಸುತ್ತಿದ್ದ 10 ಕೋಟಿ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಮೈಸೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ವಾಹನವನ್ನು ಬಿಡದಿ ಬಳಿಯ ಹೆಜ್ಜಾಲ‌ ಟೋಲ್ ಬಳಿ ಪೊಲೀಸರು ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT