ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ 
ರಾಜ್ಯ

Rameshwaram Cafe blast: ಸಿದ್ದು ಸರ್ಕಾರದ 'Ease of Doing Terror' ನೀತಿಯೇ ರಾಜ್ಯದಲ್ಲಿ ISIS ಕೇಂದ್ರ ಸ್ಥಾಪನೆಗೆ ಪ್ರೇರೇಪಣೆ- BJP

ರಾಮೇಶ್ವರಂ ಸ್ಫೋಟ ಪ್ರಕರಣದ ಬಾಂಬರ್ ಗಳನ್ನು ಎನ್ಐಎ (NIA) ಅಧಿಕಾರಿಗಳು ಬಂಧಿಸಿದ ಬೆನ್ನಲ್ಲೇ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ತೀವ್ರ ಕಿಡಿಕಾರಿದೆ.

ಬೆಂಗಳೂರು: ರಾಮೇಶ್ವರಂ ಸ್ಫೋಟ ಪ್ರಕರಣದ ಬಾಂಬರ್ ಗಳನ್ನು ಎನ್ಐಎ (NIA) ಅಧಿಕಾರಿಗಳು ಬಂಧಿಸಿದ ಬೆನ್ನಲ್ಲೇ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ತೀವ್ರ ಕಿಡಿಕಾರಿದೆ.

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, 'ರಾಮೇಶ್ವರಂ ಸ್ಫೋಟ ಪ್ರಕರಣದಲ್ಲಿ ಕಾಂಗ್ರೆಸ್‌ನ ಸಹೋದರರನ್ನು ಎನ್‌ಐಎ ಬಂಧಿಸಿದೆ. ಜಿಹಾದಿ ಟಿಪ್ಪು ಸುಲ್ತಾನನ ಅಭಿಮಾನಿಗಳು ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಭಯೋತ್ಪಾದಕರು ಮುಕ್ತವಾಗಿ ತಿರುಗಾಡುತ್ತಿದ್ದಾರೆ ಎಂದು ಹೇಳಿದೆ.

ಅಂತೆಯೇ ಸಿದ್ದರಾಮಯ್ಯನವರ ‘ಈಸ್ ಆಫ್ ಡೂಯಿಂಗ್ ಟೆರರ್’ ನೀತಿಗಳು ಜಾಗತಿಕ ಉಗ್ರ ಸಂಘಟನೆ ಐಸಿಸ್ (ISIS) ಈಗ ಕರ್ನಾಟಕದಲ್ಲಿ ತನ್ನ ಕೇಂದ್ರ ಸ್ಥಾಪಿಸಲು ಪ್ರೇರೇಪಿಸಿದೆ. ಸಮೃದ್ಧ ಕರ್ನಾಟಕವನ್ನು ಭಯೋತ್ಪಾದನಾ ಕೇಂದ್ರವನ್ನಾಗಿ ಪರಿವರ್ತಿಸುವುದೊಂದೇ ಸಿದ್ದರಾಮಯ್ಯ ಈಡೇರಿಸಿರುವ ಗ್ಯಾರಂಟಿ ಎಂದು ಬಿಜೆಪಿ ಕಿಡಿಕಾರಿದೆ.

ಅಂದಹಾಗೆ ಪಶ್ಚಿಮ ಬಂಗಾಳ ರಾಜದಾನಿ ಕೋಲ್ಕತಾದಲ್ಲಿ ಎನ್ಐಎ ಅಧಿಕಾರಿಗಳು ಇಂದು ರಾಮೇಶ್ವರಂ ಕೆಫೆ ಸ್ಛೋಟ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿಗಳಾದ ಶಂಕಿತ ಮುಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮತೀನ್ ಅಹಮದ್ ತಾಹಾರನ್ನು ಬಂಧಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT