ಸಂಗ್ರಹ ಚಿತ್ರ 
ರಾಜ್ಯ

ನಗರದ 2.86 ಲಕ್ಷ ನಲ್ಲಿಗಳಿಗೆ ಏರೇಟರ್​ ಅಳವಡಿಕೆ; BWSSB ಮಾಹಿತಿ

ಏರೇಟರ್​ ಅಳವಡಿಕೆ ಕಡ್ಡಾಯಗೊಳಿಸಿದ ಬಳಿಕ ಸುಮಾರು 2,86,114 ನಲ್ಲಿಗಳಿಗೆ ಏರೇಟರ್​ ಅಳವಡಿಸಲಾಗಿದೆ ಎಂದು ಬೆಂಗಳೂರು ಜಲಮಂಡಳಿ ಶುಕ್ರವಾರ ಮಾಹಿತಿ ನೀಡಿದೆ.

ಬೆಂಗಳೂರು: ಏರೇಟರ್​ ಅಳವಡಿಕೆ ಕಡ್ಡಾಯಗೊಳಿಸಿದ ಬಳಿಕ ಸುಮಾರು 2,86,114 ನಲ್ಲಿಗಳಿಗೆ ಏರೇಟರ್​ ಅಳವಡಿಸಲಾಗಿದೆ ಎಂದು ಬೆಂಗಳೂರು ಜಲಮಂಡಳಿ ಶುಕ್ರವಾರ ಮಾಹಿತಿ ನೀಡಿದೆ.

ಜಲಮಂಡಳಿ ಕೇಂದ್ರ ಕಚೇರಿಯಲ್ಲಿ ಗುರುವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬೆಂಗಳೂರು ನೀರು ಸರಬರಾಜು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ವಿ ಅವರು, ಸರ್ಕಾರಿ ಕಚೇರಿಗಳು ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ನೀರು ಪೋಲು ಮಾಡುವುದನ್ನು ಕಡಿಮೆ ಮಾಡಲು ಏರೇಟರ್ ಗಳ ಅಳವಡಿಕೆಯನ್ನು ತ್ವರಿತಗೊಳಿಸುವಂತೆ ಸೂಚನೆ ನೀಡಿದರು.

ಇದೇ ವೇಳೆ ನಗರದಲ್ಲಿ ಏರೇಟರ್ ಅಳವಡಿಕೆಯನ್ನು ಕಡ್ಡಾಯಗೊಳಿಸಿದ ಬಳಿಕ ಒಟ್ಟು 2,86,114 ನಲ್ಲಿಗಳನ್ನು ಅಳವಡಿಸಲಾಗಿದೆ ಹಾಗೂ ಬೆಂಗಳೂರು ಪೂರ್ವದಲ್ಲಿ 20 ಹೆಚ್ಚುವರಿ ಕೊಳವೆಬಾವಿಗಳನ್ನು ಕೊರೆಯಲು ಅನುಮತಿ ನೀಡಲಾಗಿದೆ ಎಂದು ಮಾಹಿತಿ ನೀಡಿರು.

ಪ್ರತಿ ತಿಂಗಳೂ 10 ಲಕ್ಕೂ ಹೆಚ್ಚು ಲೀ. ನೀರು ಬಳಕೆ ಮಾಡುತ್ತಿರುವ 714 ಬಲ್ಕ್​ ಗ್ರಾಹಕರ ಸಮೀಕ್ಷೆ ನಡೆಸಿ, ಇವರುಗಳಿಂದ ಮಾಹಿತಿ ಸಂಗ್ರಹಿಸಲಾಗಿದೆ. 481 ಬಲ್ಕ್​ ಗ್ರಾಹಕರು ಈಗಾಗಲೇ ತಮ್ಮ ವ್ಯಾಪ್ತಿಯಲ್ಲಿ ಏರೇಟರ್​ ಅಳವಡಿಸಿಕೊಂಡಿದ್ದಾರೆಂದು ಹೇಳಿದರು.

ಈ ವೇಳೆ ರಾಮ್​ ಪ್ರಸಾತ್​ ಮನೋಹರ್ ಅವರು, ಏರೇಟರ್​ ಅಳವಡಿಸಿಕೊಂಡಿರುವ ಬಗ್ಗೆ ಸರಿಯಾದ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಏತನ್ಮಧ್ಯೆ, ತಿಂಗಳಿಗೆ 10 ಲಕ್ಷ ಲೀಟರ್​ಗೂ ಹೆಚ್ಚು ನೀರು ಬಳಕೆದಾರಲ್ಲಿ 127 ಬಲ್ಕ್‌ ಬಳಕೆದಾರರು ಸಂಸ್ಕರಿಸಿದ ನೀರಿನ ಅವಶ್ಯಕತೆ ಇರುವುದನ್ನ ತಿಳಿಸಿದ್ದಾರೆ. ಇವರಿಗೆ ಅವರ ಪ್ರದೇಶಗಳಿಗೆ ಸಮೀಪದ ಜಲಮಂಡಳಿ ಎಸ್‌ಟಿಪಿಗಳು ಹಾಗೂ ಖಾಸಗಿ ಎಸ್‌ ಟಿ ಪಿಗಳಿಂದ ಸಂಸ್ಕರಿಸಿದ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಸಂಸ್ಕರಿಸಿದ ನೀರು ಬಳಕೆಯನ್ನು ಹೆಚ್ಚಿಸುವುದು ಹಾಗೂ ಕಾವೇರಿ ನೀರಿನ ಉಳಿತಾಯವನ್ನು ಮಾಡುವುದರಿಂದ ಮಂಡಳಿಯ ನೀರಿನ ಸರಬರಾಜಿನ ಮೇಲಿನ ಒತ್ತಡ ಕಡಿಮೆಯಾಗುತ್ತದೆ.

ಸಂಸ್ಕರಿಸಿದ ನೀರು ಹೆಚ್ಚಿನ ಪ್ರಮಾಣದಲ್ಲಿ ಬೇಡಿಕೆ ನೀಡುವ ಉದ್ದಿಮೆಗಳು ಹಾಗೂ ಕಟ್ಟಡ ನಿರ್ಮಾಣ ಸಂಸ್ಥೆಗಳಿಗೆ ಸಂಸ್ಕರಿಸಿದ ನೀರಿನ ದರದಲ್ಲಿ ಇನ್ನಷ್ಟು ರಿಯಾಯಿತಿ ನೀಡಬಹುದಾಗಿದೆ. ಈ ಬಗ್ಗೆ ಮಂಡಳಿಯ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

ಕಾವೇರಿ ನೀರಿನ ಮೇಲಿನ ಒತ್ತಡ ಕಡಿಮೆ ಮಾಡುವುದು ಹಾಗೂ ಜಲಮಂಡಳಿಗೆ ಇನ್ನಷ್ಟು ಆದಾಯ ತಂದು ಕೊಡುವಲ್ಲಿ ಸಂಸ್ಕರಿಸಿದ ನೀರು ಬಹಳ ಪ್ರಮುಖ ಪಾತ್ರವನ್ನು ವಹಿಸಲಿದೆ. ಪ್ರತಿ ದಿನ ಜಲಮಂಡಳಿಯ ವತಿಯಿಂದ 1200 ಎಂ.ಎಲ್.ಡಿ ಅಷ್ಟು ಸಂಸ್ಕರಿಸಿದ ನೀರು ಉತ್ಪತ್ತಿಯಾಗುತ್ತಿದೆ. ಇದರಲ್ಲಿ ಬಹಳಷ್ಟು ಪಾಲು ನೀರನ್ನ ಬೆಂಗಳೂರು ನಗರದಲ್ಲಿ ಉಪಯೋಗಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಕೆರೆಗಳನ್ನು ತುಂಬಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಇನ್ನಷ್ಟು ಕೆರೆಗಳನ್ನು ತುಂಬಿಸುವ ನಿಟ್ಟಿನಲ್ಲಿ ಈಗಾಗಲೇ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆದರೆ, ವಾಣಿಜ್ಯ ಉದ್ದೇಶಗಳಿಗಾಗಿ, ಕೈಗಾರಿಕೆಗಳ ಬಳಕೆಗಾಗಿ ಹಾಗೂ ಸ್ವಚ್ಚತೆಗಾಗಿ ಸಂಸ್ಕರಿಸಿದ ನೀರನ್ನು ಬಳಸುವ ನಿಟ್ಟಿನಲ್ಲಿ ಜನಾಂದೋಲನ ಪ್ರಾರಂಭಿಸಬೇಕಾದ ಅವಶ್ಯಕತೆಯಿದೆ. ಜನರಲ್ಲಿ ಸಂಸ್ಕರಿಸಿದ ನೀರಿನ ಬಳಕೆಯ ಬಗ್ಗೆ ಇರುವ ತಪ್ಪು ತಿಳುವಳಿಕೆಯನ್ನು ಹೋಗಲಾಡಿಸುವ ನಿಟ್ಟಿನಲ್ಲೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT