ಸಿಸಿಬಿ ಪೊಲೀಸರು 
ರಾಜ್ಯ

ನಗರದಲ್ಲಿ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಭಿಕ್ಷಾಟನೆ ಮಾಡುತ್ತಿದ್ದ 47 ಮಕ್ಕಳ ರಕ್ಷಣೆ, 36 ಮಹಿಳೆಯರು ವಶಕ್ಕೆ

ನಗರದಲ್ಲಿ ಭಿಕ್ಷಾಟನೆ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು, 47 ಮಕ್ಕಳನ್ನು ರಕ್ಷಿಸಿ, 36 ಮಂದಿ ಮಹಿಳೆಯರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು: ನಗರದಲ್ಲಿ ಭಿಕ್ಷಾಟನೆ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು, 47 ಮಕ್ಕಳನ್ನು ರಕ್ಷಿಸಿ, 36 ಮಂದಿ ಮಹಿಳೆಯರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸಿಸಿಬಿಯ ಮಹಿಳಾ ಸಂರಕ್ಷಣಾ ದಳ, ವಿಶೇಷ ವಿಚಾರಣ ದಳ, ಪುಲಕೇಶಿ ನಗರ ಉಪ ವಿಭಾಗದ ಪೊಲೀಸರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಗುರುವಾರ ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿದ್ದಾರೆ.

ಪುಲಕೇಶಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹಜೀಸರ್ ಇಸ್ಮಾಯಿಲ್ ಸೈಟ್ ಮಜೀದ್ ಬಳಿ ಸೇರಿದಂತೆ ಸುತ್ತಮತ್ತಲ ಸ್ಥಳಗಳ ಬೀದಿ ಬದಿಯಲ್ಲ ಈ ಮಕ್ಕಳು ಭಿಕ್ಷಾಟಣೆಯಲ್ಲಿ ತೊಡಗಿದ್ದರು. ಮಕ್ಕಳನ್ನು ಭಿಕ್ಷಾಟನೆಯಲ್ಲಿ ತೊಡಗಿಸಿದ್ದ 37 ಮಹಿಳೆಯರನ್ನು ವಶಕ್ಕೆ ಪಡೆದು ಮಕ್ಕಳ ಕಲ್ಯಾಣ ಸಮಿತಿ ಎದುರು ಹಾಜರುಪಡಿಸಲಾಗಿದೆ.

ಭಿಕ್ಷಾಟನೆಯಿಂದ ರಕ್ಷಿಸಿರುವ 47 ಮಂದಿ ಮಕ್ಕಳಲ್ಲಿ 28 ಹುಡುಗಿಯರು ಮತ್ತು 19 ಗಂಡು ಮಕ್ಕಳಿದ್ದು, ಎಲ್ಲರನ್ನೂ ಮಕ್ಕಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸುಪರ್ದಿಗೆ ನೀಡಲಾಗಿದೆ.

ರಕ್ಷಣೆಗೊಳಗಾದ ಮಕ್ಕಳಲ್ಲಿ 6 ಮಕ್ಕಳು ಒಂದು ವರ್ಷದೊಳಗಿನವರು, 12 ಮಕ್ಕಳು 1 ರಿಂದ 2 ವರ್ಷದವರು, ಆರು ಮಕ್ಕಳು 3ರಿಂದ 6 ವರ್ಷದವರು, 16 ಮಕ್ಕಳು 6ರಿಂದ 10 ವರ್ಷದವರು, ಏಳು ಮಂದಿ 10 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದಾರೆ.

ಈ ಮಕ್ಕಳನ್ನು ಭಿಕ್ಷಾಟನೆಯಲ್ಲೇ ತೊಡಗಿದ್ದ ಮಹಿಳೆಯರ ಪೈಕಿ ಕರ್ನಾಟಕ, ಆಂಧ್ರಪ್ರದೇಶ, ಉತ್ತರಪ್ರದೇಶದ ಮೂಲದ ಮಹಿಳೆಯರೂ ಇದ್ದಾರೆ. ಬೇರೆ ಮಕ್ಕಳನ್ನು ತಂದು ಭಿಕ್ಷಾಟನೆಗೆ ಬಳಸಿಕೊಂಡಿದ್ದರೆ, ಆ ಮಹಿಳೆಯರ ವಿರುದ್ಧ ಮಾನವ ಕಳ್ಳ ಸಾಗಣೆ ಅಡಿಯಲ್ಲಿ ಪ್ರಕರಣ ದಾಲಿಸಿಕೊಂಡು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT