ಐಷಾರಾಮಿ ಕಾರುಗಳ ವಶ 
ರಾಜ್ಯ

ಬೆಂಗಳೂರು: ಜಯನಗರದ ಕಾರೊಂದರಲ್ಲಿ ಕೋಟಿ ಕೋಟಿ ಹಣ ಪತ್ತೆ, ಎರಡು ಐಷಾರಾಮಿ ಕಾರು ವಶ!

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಚೆಕ್‌ಪೋಸ್ಟ್‌ಗಳಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ. ಇನ್ನು ಬೆಂಗಳೂರಿನ ಜಯನಗರದ ಕಾರೊಂದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.40 ಕೋಟಿ ರೂಪಾಯಿ ಹಣವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಚೆಕ್‌ಪೋಸ್ಟ್‌ಗಳಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ. ಇನ್ನು ಬೆಂಗಳೂರಿನ ಜಯನಗರದ ಕಾರೊಂದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.40 ಕೋಟಿ ರೂಪಾಯಿ ಹಣವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಜಯನಗರದಲ್ಲಿ ಬೆಂಜ್‌ ಕಾರಿನಲ್ಲಿ ಕೋಟಿ ಕೋಟಿ ಹಣವನ್ನು ಸಾಗಿಸಲಾಗುತ್ತಿದೆ ಎಂದು ಅಪರಿಚಿತರು ಕರೆ ಮಾಡಿದ ಹಿನ್ನೆಲೆಯಲ್ಲಿ ಅಖಾಡಕ್ಕಿಳಿದ ಅಧಿಕಾರಿಗಳು, ಸ್ಕೂಟಿಯಲ್ಲಿದ್ದ ಕೋಟಿ ಕೋಟಿ ಹಣವನ್ನು ಕಾರಿಗೆ ಶಿಫ್ಟ್‌ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದ್ದು ಕೂಡಲೇ ಎರಡು ಕಾರುಗಳನ್ನು ನಿಲ್ಲಿಸಿ ಪರಿಶೀಲನೆ ಮಾಡುವಾಗ ಕೋಟಿ ಕೋಟಿ ಹಣ ಪತ್ತೆಯಾಗಿದೆ.

ಯಾರಿಗೂ ಅನುಮಾನ ಬಾರದಿರಲಿ ಎಂದು ಕಿಡಿಗೇಡಿಗಳು ಸುಮಾರು 1.40 ಕೋಟಿ ರೂ. ಹಣವನ್ನು ಗೋಣಿಚೀಲದಲ್ಲಿ ತುಂಬಿದ್ದರು. ಅಧಿಕಾರಿಗಳು ತಪಾಸಣೆಗೆ ಮುಂದಾದ ಮಾವಿನ ಹಣ್ಣಿನ ಬ್ಯಾಗ್‌ ಎಂದು ಸಬುಬೂ ಹೇಳಿ ಕಾರನ್ನು ಲಾಕ್‌ ಮಾಡಿದ್ದಾರೆ. ಅನುಮಾನಗೊಂಡ ಚುನಾಣಾಧಿಕಾರಿಗಳು ಕಾರಿನ ಗ್ಲಾಸ್‌ ಒಡೆದು ಪರಿಶೀಲನೆ ನಡೆಸಿದಾಗ ನಗದು ಪತ್ತೆಯಾಗಿದೆ. ಕಂತೆ ಕಂತೆ ಹಣ ಸಿಗುತ್ತಿದ್ದಂತೆ ಕಾರಿನಲ್ಲಿದ್ದ ಐವರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ವಶಕ್ಕೆ ಹಣವನ್ನು ಜಯನಗರ ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!