ಐಷಾರಾಮಿ ಕಾರುಗಳ ವಶ 
ರಾಜ್ಯ

ಬೆಂಗಳೂರು: ಜಯನಗರದ ಕಾರೊಂದರಲ್ಲಿ ಕೋಟಿ ಕೋಟಿ ಹಣ ಪತ್ತೆ, ಎರಡು ಐಷಾರಾಮಿ ಕಾರು ವಶ!

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಚೆಕ್‌ಪೋಸ್ಟ್‌ಗಳಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ. ಇನ್ನು ಬೆಂಗಳೂರಿನ ಜಯನಗರದ ಕಾರೊಂದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.40 ಕೋಟಿ ರೂಪಾಯಿ ಹಣವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಚೆಕ್‌ಪೋಸ್ಟ್‌ಗಳಲ್ಲಿ ಹದ್ದಿನ ಕಣ್ಣಿಟ್ಟಿದ್ದಾರೆ. ಇನ್ನು ಬೆಂಗಳೂರಿನ ಜಯನಗರದ ಕಾರೊಂದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.40 ಕೋಟಿ ರೂಪಾಯಿ ಹಣವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಜಯನಗರದಲ್ಲಿ ಬೆಂಜ್‌ ಕಾರಿನಲ್ಲಿ ಕೋಟಿ ಕೋಟಿ ಹಣವನ್ನು ಸಾಗಿಸಲಾಗುತ್ತಿದೆ ಎಂದು ಅಪರಿಚಿತರು ಕರೆ ಮಾಡಿದ ಹಿನ್ನೆಲೆಯಲ್ಲಿ ಅಖಾಡಕ್ಕಿಳಿದ ಅಧಿಕಾರಿಗಳು, ಸ್ಕೂಟಿಯಲ್ಲಿದ್ದ ಕೋಟಿ ಕೋಟಿ ಹಣವನ್ನು ಕಾರಿಗೆ ಶಿಫ್ಟ್‌ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದ್ದು ಕೂಡಲೇ ಎರಡು ಕಾರುಗಳನ್ನು ನಿಲ್ಲಿಸಿ ಪರಿಶೀಲನೆ ಮಾಡುವಾಗ ಕೋಟಿ ಕೋಟಿ ಹಣ ಪತ್ತೆಯಾಗಿದೆ.

ಯಾರಿಗೂ ಅನುಮಾನ ಬಾರದಿರಲಿ ಎಂದು ಕಿಡಿಗೇಡಿಗಳು ಸುಮಾರು 1.40 ಕೋಟಿ ರೂ. ಹಣವನ್ನು ಗೋಣಿಚೀಲದಲ್ಲಿ ತುಂಬಿದ್ದರು. ಅಧಿಕಾರಿಗಳು ತಪಾಸಣೆಗೆ ಮುಂದಾದ ಮಾವಿನ ಹಣ್ಣಿನ ಬ್ಯಾಗ್‌ ಎಂದು ಸಬುಬೂ ಹೇಳಿ ಕಾರನ್ನು ಲಾಕ್‌ ಮಾಡಿದ್ದಾರೆ. ಅನುಮಾನಗೊಂಡ ಚುನಾಣಾಧಿಕಾರಿಗಳು ಕಾರಿನ ಗ್ಲಾಸ್‌ ಒಡೆದು ಪರಿಶೀಲನೆ ನಡೆಸಿದಾಗ ನಗದು ಪತ್ತೆಯಾಗಿದೆ. ಕಂತೆ ಕಂತೆ ಹಣ ಸಿಗುತ್ತಿದ್ದಂತೆ ಕಾರಿನಲ್ಲಿದ್ದ ಐವರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ವಶಕ್ಕೆ ಹಣವನ್ನು ಜಯನಗರ ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

ಗಂಗೂಲಿ ಹಿಂದಿಕ್ಕಿದ ವಿರಾಟ್ ಕೊಹ್ಲಿ: ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಈ ಮೈಲಿಗಲ್ಲು ಸಾಧಿಸಿದ Kohli

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

SCROLL FOR NEXT