ಬಿಜೆಪಿಯ ಹಿರಿಯ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ 
ರಾಜ್ಯ

ಚುನಾವಣೆಗಾಗಿ ಪ್ರತಿ ಸಕ್ಕರೆ ಕಾರ್ಖಾನೆಯಿಂದ 50 ಲಕ್ಷ ರೂ. ವಸೂಲಿ: ಸಚಿವರ ವಿರುದ್ಧ ಯತ್ನಾಳ್ ಆರೋಪ

ತೂಕದ ಯಂತ್ರದ ಬಗ್ಗೆ ಸಚಿವರು ವಿಧಾನಸಭೆಯಲ್ಲೇ ಹೇಳಿದ್ದರು. ಆದರೆ, ಈಗ ಅವರ ಪುತ್ರಿ ಚುನಾವಣೆಗೆ ನಿಂತಿರುವ ಕಾರಣ ಮಾತು ಬದಲಿಸಿ, ಕಾರ್ಖಾನೆಗಳಿಂದ 50 ಲಕ್ಷ ವಸೂಲಿ ಮಾಡುತ್ತಿದ್ದಾರೆ.

ಅಥಣಿ: ಎಲ್ಲ ಸಕ್ಕರೆ ಕಾರ್ಖಾನೆಗಳ ಮುಂದೆ ತೂಕದ ಯಂತ್ರ ಅಳವಡಿಸಿ ರೈತರಿಗೆ ನ್ಯಾಯ ಒದಗಿಸುವುದಾಗಿ ಹೇಳಿದ್ದ ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರು, ಈಗ ಪ್ರತಿ ಕಾರ್ಖಾನೆ ಮಾಲೀಕರಿಂದ 50 ಲಕ್ಷ ಹಣ ಕೇಳುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದ್ದಾರೆ.

ಅಥಣಿಯಲ್ಲಿ ಗುರುವಾರ ರಾತ್ರಿ ಅಣ್ಣಾಸಾಹೇಬ ಜೊಲ್ಲೆ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ತೂಕದ ಯಂತ್ರದ ಬಗ್ಗೆ ಸಚಿವರು ವಿಧಾನಸಭೆಯಲ್ಲೇ ಹೇಳಿದ್ದರು. ಆದರೆ, ಈಗ ಅವರ ಪುತ್ರಿ ಚುನಾವಣೆಗೆ ನಿಂತಿರುವ ಕಾರಣ ಮಾತು ಬದಲಿಸಿ, ಕಾರ್ಖಾನೆಗಳಿಂದ 50 ಲಕ್ಷ ವಸೂಲಿ ಮಾಡುತ್ತಿದ್ದಾರೆ.

ಕಾರ್ಖಾನೆ ಮಾಲೀಕರಿಂದ ತಲಾ 50 ಲಕ್ಷ ರೂ.ಗಳನ್ನು ಪಡೆದುಕೊಳ್ಳಲು ‘ಏಜೆಂಟ’ರನ್ನು ನೇಮಿಸಿದ್ದಾರೆ. 50 ಲಕ್ಷ ರೂಪಾಯಿ ಕೋರಿ ‘ಏಜೆಂಟ್’ ಒಬ್ಬ ನನ್ನನ್ನು ಸಂಪರ್ಕಿಸಿದ್ದ. ಆದರೆ ನಾನು ಹಣ ನೀಡಲು ನಿರಾಕರಿಸಿ 10 ತೂಕದ ಯಂತ್ರಗಳನ್ನು ನನ್ನ ಕಾರ್ಖಾನೆಗೆ ಅಳವಡಿಸುವಂತೆ ಹೇಳಿದೆ ಎಂದು ಯತ್ನಾಳ್ ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT