ಪ್ರಾತಿನಿಧಿಕ ಚಿತ್ರ 
ರಾಜ್ಯ

ಬೆಂಗಳೂರು: 39 ವರ್ಷದ ಮಿದುಳು ಪಾರ್ಶ್ವವಾಯು ಪೀಡಿತ ರೋಗಿಗೆ 3 ನಿಮಿಷಗಳಲ್ಲಿ ವೈದ್ಯರಿಂದ ಚಿಕಿತ್ಸೆ

ಅತಿಯಾದ ಮದ್ಯಪಾನ ಮತ್ತು ಧೂಮಪಾನ ಮಾಡುತ್ತಿದ್ದ 39 ವರ್ಷದ ರೋಗಿಯು ಜೀವಕ್ಕೆ ಅಪಾಯವನ್ನುಂಟುಮಾಡುವ ಮಿದುಳಿನ ಆಘಾತಕ್ಕೆ ಒಳಗಾದ ಮೂರು ನಿಮಿಷಗಳಲ್ಲಿಯೇ ಪಾರ್ಶ್ವವಾಯುವಿಗೆ ಚಿಕಿತ್ಸೆ ನೀಡಿರುವ ಅಪರೂಪದ ಘಟನೆ ವರದಿಯಾಗಿದೆ.

ಬೆಂಗಳೂರು: ಅತಿಯಾದ ಮದ್ಯಪಾನ ಮತ್ತು ಧೂಮಪಾನ ಮಾಡುತ್ತಿದ್ದ 39 ವರ್ಷದ ರೋಗಿಯು ಜೀವಕ್ಕೆ ಅಪಾಯವನ್ನುಂಟುಮಾಡುವ ಮಿದುಳಿನ ಆಘಾತಕ್ಕೆ ಒಳಗಾದ ಮೂರು ನಿಮಿಷಗಳಲ್ಲಿಯೇ ಪಾರ್ಶ್ವವಾಯುವಿಗೆ ಚಿಕಿತ್ಸೆ ನೀಡಿರುವ ಅಪರೂಪದ ಘಟನೆ ವರದಿಯಾಗಿದೆ.

ಸುಮಾರು 114 ಕೆಜಿ ತೂಕವಿದ್ದ ರೋಗಿಯು ತೀವ್ರ ತಲೆನೋವು, ತಲೆತಿರುಗುವಿಕೆ ಮತ್ತು ವಾಂತಿಯೊಂದಿಗೆ ಆಸ್ಪತ್ರೆಗೆ ಬಂದಿದ್ದರು. ಅದಾದ 30 ನಿಮಿಷಗಳಲ್ಲಿಯೇ ಪಾರ್ಶ್ವವಾಯು ಲಕ್ಷಣಗಳು ಅವರಲ್ಲಿ ಕಂಡುಬಂದವು. ತುರ್ತು ವೈದ್ಯಕೀಯ ತಂಡವು ಕೂಡಲೇ ಕಾರ್ಯಪ್ರವೃತ್ತವಾಯಿತು.

ವೈದ್ಯರು ನಾಲ್ಕು-ವೆಸೆಲ್ ಆಂಜಿಯೋಗ್ರಾಮ್ ಮತ್ತು ಮೆಕ್ಯಾನಿಕಲ್ ಥ್ರಂಬೆಕ್ಟಮಿಯನ್ನು ಶಿಫಾರಸು ಮಾಡಿದರು. ಹೆಪ್ಪುಗಟ್ಟಿದ್ದನ್ನು ಹೊರತೆಗೆದ ನಂತರ ರಕ್ತದ ಹರಿವನ್ನು ಪುನಃಸ್ಥಾಪಿಸಿತು, ಅಂಗಗಳ ಶಕ್ತಿಯನ್ನು ಶೇ 75-100 ರಷ್ಟು ಹೆಚ್ಚಿಸಿತು, ಮಾತು ಮತ್ತು ಚಲನಶೀಲತೆಯನ್ನು ಸುಧಾರಿಸಿತು. ಇದಾದ ನಂತರ, ಆರು ಗಂಟೆಗಳ ಒಳಗೆ ಮೆಕ್ಯಾನಿಕಲ್ ಥ್ರಂಬೆಕ್ಟಮಿ ನಡೆಸಲಾಯಿತು. ಇದರ ಪರಿಣಾಮವಾಗಿ ನರಕೋಶದ ಹಾನಿ ಸುಧಾರಣೆಯಾಯಿತು. ರೋಗಿಯು ಈಗ ಸ್ವತಂತ್ರವಾಗಿ ನಡೆಯಬಹುದು ಮತ್ತು ಇದೀಗ ಪಿಜಿಯೋಥೆರಪಿ ಚಿಕಿತ್ಸೆಗೆ ಒಳಗಾಗಿದ್ದಾರೆ.

ಗಿರಿನಗರದ ಭಗವಾನ್ ಮಹಾವೀರ್ ಜೈನ್ ಆಸ್ಪತ್ರೆಯ ಇಂಟರ್‌ವೆನ್ಷನಲ್ ರೇಡಿಯಾಲಜಿಸ್ಟ್ ಡಾ. ಭಾಸ್ಕರ್ ಮಾತನಾಡಿ, 'ಶಸ್ತ್ರಚಿಕಿತ್ಸೆಯ ನಂತರ ಕೇವಲ ಮೂರು ನಿಮಿಷಗಳಲ್ಲಿ 0/5 ರಿಂದ 5/5 ರ ನ್ಯೂರೋಲಾಜಿಕಲ್ ಸ್ಕೋರ್‌ನಿಂದ ಪಾರ್ಶ್ವವಾಯು ರೋಗಿಯ ತ್ವರಿತ ಚೇತರಿಕೆಯು ನಿಜಕ್ಕೂ ಗಮನಾರ್ಹವಾಗಿದೆ. ನನ್ನ 25 ವರ್ಷಗಳ ಅನುಭವದಲ್ಲಿ ಇದುವೇ ತ್ವರಿತ ಚೇತರಿಕೆ ಕಂಡ ಮೊದಲ ಪ್ರಕರಣವಾಗಿದೆ. ಆಂಜಿಯೋಗ್ರಫಿ ಸಮಯದಲ್ಲಿ 3 ಮಿಮೀ ಹೆಪ್ಪುಗಟ್ಟುವಿಕೆಯನ್ನು ಯಶಸ್ವಿಯಾಗಿ ಹೊರತೆಗೆದಿದ್ದು ಅದೃಷ್ಟದ ಫಲಿತಾಂಶವಾಗಿದೆ. ಅತ್ಯಂತ ಕಿರಿಯ ವಯಸ್ಸಿನವರೇ ಇದೀಗ ಪಾರ್ಶ್ವವಾಯುವಿಗೆ ತುತ್ತಾಗುತ್ತಿದ್ದಾರೆ. ತಲೆನೋವು, ಮೂಗು ಸೋರುವಿಕೆ ಮತ್ತು ವಾಂತಿಯಂತಹ ಲಕ್ಷಣಗಳಿಂದ ರೋಗನಿರ್ಣಯ ಮಾಡುವುದು ಗಮನಾರ್ಹ ಸವಾಲನ್ನು ಒಡ್ಡುತ್ತದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT