ಮನೆ ದ್ವಂಸ ಪ್ರಕರಣ: ಗೋವಾ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ 
ರಾಜ್ಯ

ಕನ್ನಡಿಗರ ಮನೆ ನೆಲಸಮ; ಪರ್ಯಾಯ ವ್ಯವಸ್ಥೆ ಕಲ್ಪಿಸಲು ಗೋವಾ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಮನವಿ

ನೆರೆಯ ಗೋವಾದಲ್ಲಿ ಕನ್ನಡಿಗರ ಮನೆಗಳನ್ನು ನೆಲಸಮ ಮಾಡಲಾಗಿದೆ ಎಂಬ ಆರೋಪದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಲ್ಲಿನ ನಿವಾಸಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವವರೆಗೆ ಮುಂದಿನ ಪ್ರಕ್ರಿಯೆಯನ್ನು ತಕ್ಷಣವೇ ನಿಲ್ಲಿಸುವಂತೆ ಗೋವಾ ಮುಖ್ಯಮಂತ್ರಿಗೆ ಭಾನುವಾರ ಮನವಿ ಮಾಡಿದ್ದಾರೆ.

ಬೆಂಗಳೂರು: ನೆರೆಯ ಗೋವಾದಲ್ಲಿ ಕನ್ನಡಿಗರ ಮನೆಗಳನ್ನು ನೆಲಸಮ ಮಾಡಲಾಗಿದೆ ಎಂಬ ಆರೋಪದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಲ್ಲಿನ ನಿವಾಸಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವವರೆಗೆ ತೆರವು ಪ್ರಕ್ರಿಯೆಯನ್ನು ತಕ್ಷಣವೇ ನಿಲ್ಲಿಸುವಂತೆ ಗೋವಾ ಮುಖ್ಯಮಂತ್ರಿಗೆ ಭಾನುವಾರ ಮನವಿ ಮಾಡಿದ್ದಾರೆ.

ಎಲ್ಲ ಸ್ಥಳಾಂತರಗೊಂಡ ಕುಟುಂಬಗಳಿಗೆ ಪುನರ್ವಸತಿಯನ್ನು ಕಲ್ಪಿಸುವಂತೆ ಅವರು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ಮನವಿ ಮಾಡಿದ್ದಾರೆ.

'ಗೋವಾದ ಸಂಗೋಲ್ಡಾದಲ್ಲಿ ಕನ್ನಡಿಗರಿಗೆ ಸೇರಿದ ಮನೆಗಳನ್ನು ಕೆಡವಿದ ಘಟನೆಯಿಂದ ತೀವ್ರ ಕಳವಳಗೊಂಡಿದ್ದೇನೆ. ಆ ಕುಟುಂಬಗಳಿಗೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸುವವರೆಗೆ ತೆರವು ಪ್ರಕ್ರಿಯೆಯನ್ನು ನಿಲ್ಲಿಸುವಂತೆ ನಾನು ಗೋವಾದ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರಿಗೆ ಮನವಿ ಮಾಡುತ್ತೇನೆ' ಎಕ್ಸ್‌ನಲ್ಲಿ ಸಿದ್ದರಾಮಯ್ಯ ಪೋಸ್ಟ್ ಮಾಡಿದ್ದಾರೆ.

ಪ್ರತಿ ಸಂತ್ರಸ್ತ ಕುಟುಂಬದ ಘನತೆ ಮತ್ತು ಸ್ಥಿರತೆಯನ್ನು ನಾವು ಎತ್ತಿಹಿಡಿಯುವುದು ನಿರ್ಣಾಯಕವಾಗಿದೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪೋಸ್ಟ್‌ನಲ್ಲಿ ಮಾಧ್ಯಮ ವರದಿಗಳು ಮತ್ತು ಮನೆ ನೆಲಸಮಗೊಳಿಸುವ ಚಿತ್ರಗಳನ್ನು ಸಹ ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT