ಯದುವೀರ್ ಕೃಷ್ಣದತ್ತ ಒಡೆಯರ್ 
ರಾಜ್ಯ

ನನ್ನ ಪೂರ್ವಜರಂತೆ ನಾನು ಕೂಡ ಜನರಿಗಾಗಿ ಶ್ರಮಸುತ್ತೇನೆ: ಯದುವೀರ್ ಕೃಷ್ಣದತ್ತ ಒಡೆಯರ್

ನನ್ನ ಪೂರ್ವಜರಂತೆ ನಾನು ಕೂಡ ಜನರಿಗಾಗಿ ಶ್ರಮಸುತ್ತೇನೆಂದು ಮೈಸೂರು ಕ್ಷೇತ್ರದ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭಾನುವಾರ ಹೇಳಿದರು.

ಮೈಸೂರು: ನನ್ನ ಪೂರ್ವಜರಂತೆ ನಾನು ಕೂಡ ಜನರಿಗಾಗಿ ಶ್ರಮಸುತ್ತೇನೆಂದು ಮೈಸೂರು ಕ್ಷೇತ್ರದ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭಾನುವಾರ ಹೇಳಿದರು.

ಮಹಾರಾಜ ಮೈದಾನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಭಾನುವಾರ ಆಯೋಜಿಸಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಗೆ ಜನರ ಮಧ್ಯೆ ಇದ್ದು ಗೊತ್ತಿಲ್ಲ ಎಬ ಕಾಂಂಗ್ರೆಸ್ ನಾಯಕರ ಹೇಳಿಕೆಗೆ ಪರೋಕ್ಷವಾಗಿ ಟಾಂಗ್ ನೀಡಿದರು.

ನನ್ನ ಪೂರ್ವಜರು ಅರಮನೆಯಲ್ಲಿ ಆಡಳಿತ ನಡೆಸುತ್ತಿದ್ದಾಗ ಜನರ ಕಲ್ಯಾಣಕ್ಕಾಗಿ ತಮ್ಮನ್ನು ತಾವು ಅರ್ಪಿಸಿಕೊಂಡಿದ್ದರು. ನಾನು ಅರಮನೆಯಲ್ಲಿ ಹುಟ್ಟಿ ಬೆಳೆದರೂ ಪ್ರಜಾಸತ್ತಾತ್ಮಕ ಚೌಕಟ್ಟಿನಲ್ಲಿ ಜನರೊಂದಿಗೆ ನಿಂತು ಅವರ ಶ್ರೇಯೋಭಿವೃದ್ಧಿಗಾಗಿ ಪ್ರತಿಪಾದಿಸುವ ಸಂಕಲ್ಪ ಮಾಡಿದ್ದೇನೆ. ಚಾಮುಂಡೇಶ್ವರಿ ದೇವಿಯ ರಥವನ್ನು ಒಡೆಯರ್‌ಗಳು ಎಳೆದಂತೆಯೇ, ಈಗ ಪ್ರಧಾನಿ ಮೋದಿಯವರೊಂದಿಗೆ ಭಾರತ ಮಾತೆಯ ರಥವನ್ನು ಮುನ್ನಡೆಸುತ್ತೇನೆ. ಇದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.

ಇದೇ ವೇಳೆ ಮೋದಿಯವರ 10 ವರ್ಷಗಳ ಆಡಳಿತಾವಧಿಯಲ್ಲಿ ಕೈಗೊಂಡ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉಲ್ಲೇಖಿಸಿದರು. ಪ್ರಧಾನಿ ಮೋದಿಯವರು ಆಧುನಿಕ ಯೋಗವನ್ನು ಜಗತ್ತಿಗೆ ಪರಿಚಯಿಸಿದರು, ಮೋದಿಯವರ ಈ ಪ್ರಯತ್ನ ಯೋಗಕ್ಕೆ ಅಂತರಾಷ್ಟ್ರೀಯ ಮನ್ನಣೆಯನ್ನು ಗಳಿಸಿವೆ, ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಕಾಪಾಡಿವೆ ಎಂದು ಪ್ರತಿಪಾದಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT