ಸಾಂದರ್ಭಿಕ ಚಿತ್ರ 
ರಾಜ್ಯ

ಹುಸಿಯಾದ ನಿರೀಕ್ಷೆ, ಕರುಣೆ ತೋರದ ವರುಣ; ಬೆಂಗಳೂರಿನಲ್ಲಿ ಇನ್ನೂ ಒಂದು ವಾರ ರಣ ಬಿಸಿಲು: IMD

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸತತ ಮೂರ್ನಾಲ್ಕು ದಿನಗಳಿಂದಲೂ ಮಳೆರಾಯ ತಂಪೆರೆದಿದ್ದಾನೆ. ಆದರೆ ರಾಜ್ಯ ರಾಜಧಾನಿ ಬೆಂಗಳೂರಿನ ಮೇಲೆ ಮಾತ್ರ ವರುಣ ಮುನಿಸಿಕೊಂಡಿದ್ದಾನೆ.

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸತತ ಮೂರ್ನಾಲ್ಕು ದಿನಗಳಿಂದಲೂ ಮಳೆರಾಯ ತಂಪೆರೆದಿದ್ದಾನೆ. ಆದರೆ ರಾಜ್ಯ ರಾಜಧಾನಿ ಬೆಂಗಳೂರಿನ ಮೇಲೆ ಮಾತ್ರ ಮಳೆರಾಯ ಮುನಿಸಿಕೊಂಡಿದ್ದು, ಇದುವರೆಗೂ ಒಂದು ಹನಿಯೂ ಮಳೆಯಿಲ್ಲದೆ ಇಲ್ಲಿನ ಜನರು ಬಿಸಿಲಿನ ಬೇಗೆಗೆ ಬೆಂದು ಹೋಗಿದ್ದಾರೆ.

ಮಳೆಗಾಗಿ ಕಾಯುತ್ತಿರುವ ಬೆಂಗಳೂರು ಜನರ ನಿರೀಕ್ಷೆ ಮತ್ತೊಮ್ಮೆ ಹುಸಿಯಾಗಿದೆ. ಯುಗಾದಿ ನಂತರದ ಮಳೆಯ ಮುನ್ಸೂಚನೆಯಿಂದ ಉತ್ಸಾಹದಲ್ಲಿದ್ದ ನಗರ ವಾಸಿಗಳು ಮರುಣನ ಕೃಪೆಗಾಗಿ ಇನ್ನೂ ಒಂದು ವಾರ ಕಾಯಬೇಕಾಗಿದೆ, ಭಾರತೀಯ ಹವಾಮಾನ ಇಲಾಖೆ (IMD) ಸುಮಾರು ಒಂದು ವಾರದವರೆಗೆ ಮಳೆಯ ಸಾಧ್ಯತೆಯನ್ನು ಮುಂದೂಡಿದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ತುಂತುರು ಮಳೆಯಾಗಿದೆ.

ಇನ್ನೂ ಬೆಂಗಳೂರಿನಲ್ಲಿ ಮುಂದಿನ 5 ದಿನಗಳ ಕಾಲ ಬಿಸಿಲಿನ ವಾತಾವರಣ ಮುಂದುವರೆಯಲಿದ್ದು, ಏಪ್ರಿಲ್‌ 19ರ ಬಳಿಕ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬಿಸಿಲಿನ ಬೇಗೆಗೆ ಬೆಂದು ಬೇಸತ್ತು ಹೋಗಿರುವ ನಗರದ ಜನರು ಮಳೆಗಾಗಿ ಪರಿತಪಿಸುತ್ತಿದ್ದಾರೆ.

ಏಪ್ರಿಲ್‌ನಲ್ಲಿ ತಾಪಮಾನವು ಹೆಚ್ಚಾಗುವ ನಿರೀಕ್ಷೆಯಿಲ್ಲದಿದ್ದರೂ, ಯಾವುದೇ ಬೇರೆ ಪರಿಹಾರವಿಲ್ಲ ತಾಪಮಾನವು 35-36 ಡಿಗ್ರಿ ಸೆಲ್ಸಿಯಸ್‌ನಲ್ಲಿ ಇರುತ್ತದೆ ಎಂದು IMD ಯ ಹಿರಿಯ ವಿಜ್ಞಾನಿ ಎ ಪ್ರಸಾದ್ ಅವರು ವಿವರಿಸಿದರು,

ಈ ಹಿಂದೆ, ಏಪ್ರಿಲ್‌ನಲ್ಲಿ ಬೆಂಗಳೂರಿಗೆ 61.7 ಮಿಮೀ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿತ್ತು. ಆದಾಗ್ಯೂ, ಮಳೆಯು ಕೆಲವು ದಿನಗಳ ಕಾಲ ವಿಳಂಬವಾಗಿದೆ ಎಂದು ವರದಿಯಾಗಿದೆ, ನಗರದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ನಿರೀಕ್ಷೆಯಿದೆ.

ಏಪ್ರಿಲ್ 14 ರಂದು, ನಗರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ, ಸುಮಾರು ಮೂರು ಡಿಗ್ರಿಗಳಷ್ಟು ಕುಸಿತವಾಗಿದೆ. ಇನ್ನೂ, ಗರಿಷ್ಠ ತಾಪಮಾನವು 34 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿದೆ, ಇದು ಏಪ್ರಿಲ್‌ನಲ್ಲಿ ಬೆಂಗಳೂರಿನ ಸಾಮಾನ್ಯ ಸರಾಸರಿಯಾಗಿದೆ. IMD ವೆಬ್‌ಸೈಟ್ ಪ್ರಕಾರ, ಏಪ್ರಿಲ್ 15 ಮತ್ತು 16 ರಂದು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 22 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT