ಯಡಿಯೂರಪ್ಪ 
ರಾಜ್ಯ

ಪ್ರಹ್ಲಾದ ಜೋಶಿ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ದಿಂಗಾಲೇಶ್ವರ ಶ್ರೀ ಮುಂದಾಗಬಾರದು: ಯಡಿಯೂರಪ್ಪ

ಧಾರವಾಡ-ಹುಬ್ಬಳ್ಳಿ ಕ್ಷೇತ್ರದ ಜನತೆ ಪ್ರಹ್ಲಾದ ಜೋಶಿ ಪರವಾಗಿದ್ದಾರೆ. ಅವರ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಕೈ ಹಾಕಬಾರದು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಹುಬ್ಬಳ್ಳಿ: ಧಾರವಾಡ-ಹುಬ್ಬಳ್ಳಿ ಕ್ಷೇತ್ರದ ಜನತೆ ಪ್ರಹ್ಲಾದ ಜೋಶಿ ಪರವಾಗಿದ್ದಾರೆ. ಅವರ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಕೈ ಹಾಕಬಾರದು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಧಾರವಾಡ‌ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯದಂತೆ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಮತ್ತೊಮ್ಮೆ ಮನವಿ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡಬಾರದೆಂದು ಅವರನ್ನು ಕೋರುವೆ. ಮುಂದೆ ಏನು ತೀರ್ಮಾನ ಕೈಗೊಳ್ಳುತ್ತಾರೆ ನೋಡೋಣ ಎಂದರು.

ರಾಜ್ಯದಲ್ಲಿ ಬಿಜೆಪಿ, ಪ್ರಧಾನಿ ಮೋದಿ ಪರವಾದ ಅಲೆ ಇದೆ. ಈ ಕ್ಷೇತ್ರದಲ್ಲಿ ಜೋಶಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಮನೆ ಮನೆಗೆ ಗೊತ್ತಿದೆ. ಅವರೊಬ್ಬ ಪ್ರಬುದ್ಧ ರಾಜಕಾರಣಿಯಾಗಿದ್ದಾರೆ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅಭಿವೃದ್ಧಿ ಕಾರ್ಯಗಳೇ ಅವರ ಗೆಲುವಿಗೆ ಶ್ರೀರಕ್ಷೆಯಾಗಲಿವೆ ಎಂದರು.

ಪ್ರಹ್ಲಾದ್ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ಸ್ವಾಮೀಜಿ ಅವರಿಗೆ ಮತ್ತೊಮ್ಮೆ ವಿನಂತಿ ಮಾಡುತ್ತೇನೆ. ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕು. ಈ ಕುರಿತು ಈಗಾಗಲೇ ಅವರೊಂದಿಗೆ ಮಾತನಾಡಿದ್ದೇನೆ. ಇನ್ನೊಮ್ಮೆ ಫೋನ್ ಕರೆ ಮೂಲಕ ಅವರನ್ನು ಮನವೊಲಿಸುವ ಕೆಲಸ ಮಾಡುವೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT