ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು ಜಲ ಬಿಕ್ಕಟ್ಟು: ಸಾರ್ವಜನಿಕ ಶೌಚಾಲಯದ ಮೇಲೂ ಪರಿಣಾಮ; 5 ರೂ. ಇದ್ದ ಶುಲ್ಕ 10ಕ್ಕೆ ಏರಿಕೆ!

ಬೆಂಗಳೂರು: ಬೆಂಗಳೂರಿನ ಜಲ ಬಿಕ್ಕಟ್ಟಿನ ಪರಿಣಾಮ ಸಾರ್ವಜನಿಕ ಶೌಚಾಲಯಗಳ ಮೇಲೂ ಬೀರಿದ್ದು, ಶೌಚಾಲಯಗಳ ಬಳಕೆ ಶುಲ್ಕವನ್ನು ರೂ.5ರಿಂದ ರೂ.10ಕ್ಕೆ ಏರಿಕೆ ಮಾಡಲಾಗಿದೆ.

ಬೆಂಗಳೂರು: ಬೆಂಗಳೂರಿನ ಜಲ ಬಿಕ್ಕಟ್ಟಿನ ಪರಿಣಾಮ ಸಾರ್ವಜನಿಕ ಶೌಚಾಲಯಗಳ ಮೇಲೂ ಬೀರಿದ್ದು, ಶೌಚಾಲಯಗಳ ಬಳಕೆ ಶುಲ್ಕವನ್ನು ರೂ.5ರಿಂದ ರೂ.10ಕ್ಕೆ ಏರಿಕೆ ಮಾಡಲಾಗಿದೆ.

ಇಲ್ಲಿಯವರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಾರ್ವಜನಿಕ ಶೌಚಾಲಯಗಳ ನಿರ್ವಾಹಕರು ಶೌಚಾಲಯಗಳ ಬಳಕೆದಾರರಿಗೆ ಮೂತ್ರ ವಿಸರ್ಜನೆಗೆ ರೂ 2 ಮತ್ತು ಮಲವಿಸರ್ಜನೆಗೆ ರೂ 5 ವಿಧಿಸುತ್ತಿದ್ದವು. ಆದರೆ ನಗರದಲ್ಲಿ ನೀರಿನ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ದರಗಳನ್ನು ಕ್ರಮವಾಗಿ 5 ಮತ್ತು 10 ರೂಗೆ ಹೆಚ್ಚಳ ಮಾಡಿದೆ.

ಶೌಚಾಲಯ ಬಳಕೆದಾರರಿಗೆ ಸಣ್ಣ ಬಕೆಟ್‌ಗಳಲ್ಲಿ ನೀರು ನೀಡಲಾಗುತ್ತಿದ್ದು, ಹೆಚ್ಚುವರಿ ನೀರಿಗೆ ಹೆಚ್ಚುವರಿ ಹಣ ವಿಧಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ನೀರಿನ ಟ್ಯಾಂಕರ್‌ಗಳ ಬೆಲೆಗಳನ್ನು ಹೆಚ್ಚಿಸಲಾಗಿದೆ. ಇದರಿಂದ ಸಾರ್ವಜನಿಕ ಶೌಚಾಲಯಗಳ ನಿರ್ವಹಣಾ ವೆಚ್ಚ ಕೂಡ ಹೆಚ್ಚಾಗಿದೆ. ಅಂತರ್ಜಲ ಹಾಗೂ ನೀರಿನ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಶೌಚಾಲಯಗಳ ಬಳಕೆಯ ಶುಲ್ಕವನ್ನು ಹೆಚ್ಚಿಸಲಾಗಿದೆ ಎಂದು ಶೌಚಾಲಯಗಳ ನಿರ್ವಾಹಕರು ಹೇಳುತ್ತಿದ್ದಾರೆ.

ಶುಲ್ಕ ಹೆಚ್ಚಳ ಮಾಡಿದ್ದರೂ ಸಾರ್ವಜನಿಕ ಶೌಚಾಲಯಗಳು ಕೊಳಕು, ದುರ್ವಾಸನೆ ಮತ್ತು ಅನೈರ್ಮಲ್ಯದಿಂದ ಕೂಡಿವೆ ಎಂದು ಬಿಎಂಟಿಸಿ ಬಸ್ ಚಾಲಕರೊಬ್ಬರು ಹೇಳಿದ್ದಾರೆ.

ಕೆಲವು ಶೌಚಾಲಯಗಳು ಸ್ನಾನದ ಸೇವೆಗಳನ್ನು ನಿಲ್ಲಿಸಿವೆ. ಕೆಲವು ನೀರಿನ ಕೊರತೆಯಿಂದಾಗಿ ತಾತ್ಕಾಲಿಕವಾಗಿ ಮುಚ್ಚಲ್ಪಟ್ಟಿವೆ ಎಂದು ತಿಳಿಸಿದ್ದಾರೆ.

ಮೆಜೆಸ್ಟಿಕ್‌ನಲ್ಲಿ ಸಾರ್ವಜನಿಕ ಶೌಚಾಲಯ ನಡೆಸುತ್ತಿರುವ ವ್ಯಕ್ತಿಯೊಬ್ಬರು ಮಾತನಾಡಿ, “ನಮಗೆ ದಿನಕ್ಕೆ ಮೂರು ಟ್ಯಾಂಕರ್ ನೀರು ಬೇಕಾಗುತ್ತದೆಯ ಪ್ರತಿ ಟ್ಯಾಂಕರ್ ನೀರಿನ ಬೆಲೆ 5,000 ರೂ ಆಗಿದೆ. ಇದು ನಮ್ಮ ಗಳಿಕೆಯ ಮೇಲೆ ಪರಿಣಾಮ ಬೀರಿದೆ, ನಮ್ಮ ಗಳಿಕೆಯ ಬಹುತೇಕ ಹಣವನ್ನು ನೀರಿನ ವೆಚ್ಚಕ್ಕೇ ಸರಿದೂಗಿಸುವಂತಾಗಿದೆ ಎಂದು ಹೇಳಿದ್ದಾರೆ.

ಈ ಬೆಳವಣಿಕೆ ಕುರಿತು ಪ್ರತಿಕ್ರಿಯೆ ನೀಡಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT