ಸೇತುವೆ ಕುಸಿತ (ಸಾಂಕೇತಿಕ ಚಿತ್ರ) TNIE
ರಾಜ್ಯ

ಮಂಗಳೂರು: ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 7 ಮಂದಿಗೆ ಗಾಯ!

ಮಂಗಳೂರಿನಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 7 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಬಂಟ್ವಾಳದ ಮಲ್ಲಿಪ್ಪಾಡಿಯಲ್ಲಿ ಈ ಘಟನೆ ನಡೆದಿದೆ.

ಮಲ್ಲಿಪ್ಪಾಡಿ: ಮಂಗಳೂರಿನಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 7 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಬಂಟ್ವಾಳದ ಮಲ್ಲಿಪ್ಪಾಡಿಯಲ್ಲಿ ಈ ಘಟನೆ ನಡೆದಿದೆ.

ಗಾಯಗೊಂಡವರನ್ನು ತಕ್ಷಣವೇ ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಯಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡವರನ್ನು ತಕ್ಷಣವೇ ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಯಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಥಮ ಚಿಕಿತ್ಸೆ ಪಡೆದ ನಂತರ ಓರ್ವ ವ್ಯಕ್ತಿ ಪುತ್ತೂರಿನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮಲ್ಲಿಪ್ಪಾಡಿ ಮೂಲಕ ಹಾದುಹೋಗುವ ಟ್ರೆಂಚ್ ಬಳಿ ಕುಸಿತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಗಳು ಸೂಚಿಸಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾರ್ಮಿಕರು ಡಬಲ್ ಸೆಂಟ್ರಿಂಗ್ ವಿಧಾನವನ್ನು ಬಳಸಿಕೊಂಡು ಸ್ಲ್ಯಾಬ್ ಕೆಲಸದಲ್ಲಿ ತೊಡಗಿದ್ದಾಗ ಕುಸಿತ ಸಂಭವಿಸಿದೆ. ಮೇಲಿನಿಂದ ಕಾಂಕ್ರೀಟ್ ಮಿಶ್ರಣವನ್ನು ಸುರಿಯುವುದರಿಂದ ಕೆಳಭಾಗದ ಸೆಂಟ್ರಿಂಗ್ ರಾಡ್‌ನ ಸಡಿಲಗೊಂಡಿದ್ದು ಮೇಲಿನ ಭಾಗದ ಕುಸಿತಕ್ಕೆ ಕಾರಣವಾಯಿತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ನಿರ್ಮಾಣ ಸ್ಥಳದಲ್ಲಿ ಮೇಲ್ವಿಚಾರಕರ ಅನುಪಸ್ಥಿತಿಯು ದುರ್ಘಟನೆಗೆ ಪ್ರಮುಖ ಕಾರಣ ಎಂದು ತಿಳಿದುಬಂದಿದೆ. ಕಾಮಗಾರಿಯ ಯೋಜನೆ ಮತ್ತು ಅನುಷ್ಠಾನದಲ್ಲಿ ನಿರ್ಲಕ್ಷ್ಯವೇ ಘಟನೆಗೆ ಪ್ರಾಥಮಿಕ ಕಾರಣ ಎಂದು ತಜ್ಞರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

ಬಿಹಾರದಲ್ಲಿ ರಾಜಕೀಯ ಬಿರುಗಾಳಿ: ಮುಖ್ಯಮಂತ್ರಿ ಸ್ಥಾನಕ್ಕೆ ನಿತಿಶ್ ಕುಮಾರ್ ರಾಜೀನಾಮೆ?

'ದೇಹದ ಮೇಲೆ ಕ್ಯಾಮೆರಾ Zoom': ಪಾಪರಾಜಿಗಳ ವಿರುದ್ಧ ಸಪ್ತಮಿಗೌಡ ಕಿಡಿ, Rukmini Vasanth ಬೆಂಬಲ!

ಇರಾನ್ ಹಡಗಿನ ಮೇಲೆ ದಾಳಿ; 101 ಜನ ನಾಪತ್ತೆ; ಅಮೆರಿಕದೊಂದಿಗೆ 'ಸಂಧಾನ ಇಲ್ಲ', ಯುದ್ಧ ಮುಂದುವರಿಯಲಿದೆ

T20 ವಿಶ್ವಕಪ್ 2026: 'ಚಿಂತೆ ಬೇಡ.. ಭಾರತೀಯ ಅಭಿಮಾನಿಗಳ ಸೈಲೆಂಟ್ ಮಾಡುತ್ತೇವೆ': Sam Curran ಅತ್ಯುತ್ಸಾಹ!

SCROLL FOR NEXT