ವೇದಿಕೆಗೆ ನುಗ್ಗಿದ ಮಹಿಳೆಯರು 
ರಾಜ್ಯ

ತುಮಕೂರು: ದೇವೇಗೌಡರ ಭಾಷಣದ ವೇಳೆ ವೇದಿಕೆಗೆ ನುಗ್ಗಿದ ಮಹಿಳೆಯರು; ಕುಮಾರಸ್ವಾಮಿ ವಿರುದ್ಧ ಘೋಷಣೆ

ಕುಂಚಿಟಿಗ ಸಮುದಾಯ ಭವನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಮಾತನಾಡುತ್ತಿದ್ದ ವೇಳೆ ವೇದಿಕೆಗೆ ನುಗ್ಗಿದ ಇಬ್ಬರು ಮಹಿಳೆಯರು ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗಿದ್ದಾರೆ.

ತುಮಕೂರು: ಕುಂಚಿಟಿಗ ಸಮುದಾಯ ಭವನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಮಾತನಾಡುತ್ತಿದ್ದ ವೇಳೆ ವೇದಿಕೆಗೆ ನುಗ್ಗಿದ ಇಬ್ಬರು ಮಹಿಳೆಯರು ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗಿದ್ದಾರೆ.

ಗ್ಯಾರಂಟಿ ಯೋಜನೆಗಳಿಂದ ಗ್ರಾಮೀಣ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದ ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗಿದರು. ಇಬ್ಬರು ಮಹಿಳೆಯರು ಕಾಂಗ್ರೆಸ್ ಕಾರ್ಯಕರ್ತೆಯರು ಎಂದು ಶಂಕಿಸಲಾಗಿದೆ. ಕೆಲವು ನಾಯಕರು ಮಾತನಾಡುವವರೆಗೂ ಕಾದು ದೇವೇಗೌಡರು ಭಾಷಣ ಮಾಡುವ ಸರದಿ ಬಂದಾಗ ಘೋಷಣೆಗಳನ್ನು ಕೂಗಿದರು.

ಬಿಜೆಪಿ ಮಹಿಳಾ ಕಾರ್ಯಕರ್ತರು ಅವರನ್ನು ಸಭಾಂಗಣದಿಂದ ಹೊರಕ್ಕೆ ಎಳೆದೊಯ್ದರು ಮತ್ತು ನಂತರ ಪೊಲೀಸರು ಅವರನ್ನು ದೂರ ಕಳುಹಿಸಿದರು. ಈ ಘಟನೆಯಿಂದ ತಬ್ಬಿಬ್ಬಾದ ದೇವೇಗೌಡರು ಕೆಲ ಕಾಲ ಭಾಷಣ ನಿಲ್ಲಿಸಿ ನಂತರ ಮಾತನಾಡಿದರು.

ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದು ಸೋನಿಯಾ ಗಾಂಧಿ. ತುಮಕೂರಿನಿಂದ (2019ರಲ್ಲಿ) ಸ್ಪರ್ಧಿಸುವ ಇರಾದೆ ನನಗಿರಲಿಲ್ಲ, ಆದರೆ ಕಾಂಗ್ರೆಸ್ ನನ್ನನ್ನು ಇಲ್ಲಿಗೆ ತಂದು ಸೋಲಿಸಿತು. ಹಾಗಾಗಿ ರಾಜಕೀಯದಲ್ಲಿ ಯಾರನ್ನೂ ನಂಬುವುದಿಲ್ಲ ಎಂದು ಹೇಳಿದರು.

ಹಾಸನದಿಂದ ತುಮಕೂರಿಗೆ ಹೇಮಾವತಿ ನದಿ ನೀರು ಬಿಡುವುದಕ್ಕೆ ವಿರೋಧವಿದೆ ಎಂಬ ಅಪಪ್ರಚಾರಕ್ಕೆ ಬಲಿಯಾಗಿದ್ದೇನೆ ಎಂದು ಗೌಡರು ಹೇಳಿದರು. ಹತ್ತು ಲೋಕಸಭಾ ಕ್ಷೇತ್ರಗಳು ಕಾವೇರಿ ಜಲಾನಯನ ಪ್ರದೇಶದಲ್ಲಿ ಬರುತ್ತವೆ ಮತ್ತು ನಮ್ಮ ಅಭ್ಯರ್ಥಿಗಳು ಗೆದ್ದರೆ ನಾವು ಪ್ರಧಾನಿ ನರೇಂದ್ರ ಮೋದಿಯವರ ಮುಂದೆ ನಿಂತು ರಾಜ್ಯಕ್ಕೆ ನ್ಯಾಯವನ್ನು ಪಡೆಯಬಹುದು ಎಂದು ಅವರು ಸಲಹೆ ನೀಡಿದರು.

2019ರ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ ಗೌಡರು, ಈ ಬಾರಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಬಿಜೆಪಿಯ ವಿ.ಸೋಮಣ್ಣ ಪರ ಪ್ರಚಾರಕ್ಕೆ ಇಳಿದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Caste Census-'ಇನ್ಫೋಸಿಸ್ ನವರೇನು ಬೃಹಸ್ಪತಿಗಳಾ? ಬದಲಾವಣೆ ಕ್ರಾಂತಿಯಲ್ಲ, ಗುತ್ತಿಗೆದಾರರ ಆರೋಪ ದುರುದ್ದೇಶಪೂರಿತ: ಸಿಎಂ ಸಿದ್ದರಾಮಯ್ಯ

Gujarat Cabinet reshuffle: ಗುಜರಾತ್ ಡಿಸಿಎಂ ಆಗಿ ಹರ್ಷ ಸಾಂಘ್ವಿ, ರಿವಾಬಾ ಜಡೇಜಾ ಸೇರಿ 25 ಸಚಿವರು ಪ್ರಮಾಣವಚನ

'ಅವರು ಗಾಂಧಿಯನ್ನೇ ಬಿಡಲಿಲ್ಲ, ಇನ್ನು ನಾನು ಯಾವ ಲೆಕ್ಕ?': BJP, RSS ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಮಹಾರಾಷ್ಟ್ರ: ಬಿಜೆಪಿ ಶಾಸಕ ಶಿವಾಜಿ ಕಾರ್ಡಿಲೆ ಹೃದಯಾಘಾತದಿಂದ ನಿಧನ

ತೆಲುಗು ಚಿತ್ರದತ್ತ ಮುಖ ಮಾಡಿದ ರಿಷಭ್ ಶೆಟ್ಟಿ; ಕಾಂತಾರ: ಚಾಪ್ಟರ್ 2 ಮಾಡುವ ಬಗ್ಗೆ ಮಹತ್ವದ ಅಪ್ಡೇಟ್!

SCROLL FOR NEXT