ವೇದಿಕೆಗೆ ನುಗ್ಗಿದ ಮಹಿಳೆಯರು 
ರಾಜ್ಯ

ತುಮಕೂರು: ದೇವೇಗೌಡರ ಭಾಷಣದ ವೇಳೆ ವೇದಿಕೆಗೆ ನುಗ್ಗಿದ ಮಹಿಳೆಯರು; ಕುಮಾರಸ್ವಾಮಿ ವಿರುದ್ಧ ಘೋಷಣೆ

ಕುಂಚಿಟಿಗ ಸಮುದಾಯ ಭವನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಮಾತನಾಡುತ್ತಿದ್ದ ವೇಳೆ ವೇದಿಕೆಗೆ ನುಗ್ಗಿದ ಇಬ್ಬರು ಮಹಿಳೆಯರು ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗಿದ್ದಾರೆ.

ತುಮಕೂರು: ಕುಂಚಿಟಿಗ ಸಮುದಾಯ ಭವನದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಮಾತನಾಡುತ್ತಿದ್ದ ವೇಳೆ ವೇದಿಕೆಗೆ ನುಗ್ಗಿದ ಇಬ್ಬರು ಮಹಿಳೆಯರು ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗಿದ್ದಾರೆ.

ಗ್ಯಾರಂಟಿ ಯೋಜನೆಗಳಿಂದ ಗ್ರಾಮೀಣ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದ ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗಿದರು. ಇಬ್ಬರು ಮಹಿಳೆಯರು ಕಾಂಗ್ರೆಸ್ ಕಾರ್ಯಕರ್ತೆಯರು ಎಂದು ಶಂಕಿಸಲಾಗಿದೆ. ಕೆಲವು ನಾಯಕರು ಮಾತನಾಡುವವರೆಗೂ ಕಾದು ದೇವೇಗೌಡರು ಭಾಷಣ ಮಾಡುವ ಸರದಿ ಬಂದಾಗ ಘೋಷಣೆಗಳನ್ನು ಕೂಗಿದರು.

ಬಿಜೆಪಿ ಮಹಿಳಾ ಕಾರ್ಯಕರ್ತರು ಅವರನ್ನು ಸಭಾಂಗಣದಿಂದ ಹೊರಕ್ಕೆ ಎಳೆದೊಯ್ದರು ಮತ್ತು ನಂತರ ಪೊಲೀಸರು ಅವರನ್ನು ದೂರ ಕಳುಹಿಸಿದರು. ಈ ಘಟನೆಯಿಂದ ತಬ್ಬಿಬ್ಬಾದ ದೇವೇಗೌಡರು ಕೆಲ ಕಾಲ ಭಾಷಣ ನಿಲ್ಲಿಸಿ ನಂತರ ಮಾತನಾಡಿದರು.

ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದು ಸೋನಿಯಾ ಗಾಂಧಿ. ತುಮಕೂರಿನಿಂದ (2019ರಲ್ಲಿ) ಸ್ಪರ್ಧಿಸುವ ಇರಾದೆ ನನಗಿರಲಿಲ್ಲ, ಆದರೆ ಕಾಂಗ್ರೆಸ್ ನನ್ನನ್ನು ಇಲ್ಲಿಗೆ ತಂದು ಸೋಲಿಸಿತು. ಹಾಗಾಗಿ ರಾಜಕೀಯದಲ್ಲಿ ಯಾರನ್ನೂ ನಂಬುವುದಿಲ್ಲ ಎಂದು ಹೇಳಿದರು.

ಹಾಸನದಿಂದ ತುಮಕೂರಿಗೆ ಹೇಮಾವತಿ ನದಿ ನೀರು ಬಿಡುವುದಕ್ಕೆ ವಿರೋಧವಿದೆ ಎಂಬ ಅಪಪ್ರಚಾರಕ್ಕೆ ಬಲಿಯಾಗಿದ್ದೇನೆ ಎಂದು ಗೌಡರು ಹೇಳಿದರು. ಹತ್ತು ಲೋಕಸಭಾ ಕ್ಷೇತ್ರಗಳು ಕಾವೇರಿ ಜಲಾನಯನ ಪ್ರದೇಶದಲ್ಲಿ ಬರುತ್ತವೆ ಮತ್ತು ನಮ್ಮ ಅಭ್ಯರ್ಥಿಗಳು ಗೆದ್ದರೆ ನಾವು ಪ್ರಧಾನಿ ನರೇಂದ್ರ ಮೋದಿಯವರ ಮುಂದೆ ನಿಂತು ರಾಜ್ಯಕ್ಕೆ ನ್ಯಾಯವನ್ನು ಪಡೆಯಬಹುದು ಎಂದು ಅವರು ಸಲಹೆ ನೀಡಿದರು.

2019ರ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ ಗೌಡರು, ಈ ಬಾರಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಬಿಜೆಪಿಯ ವಿ.ಸೋಮಣ್ಣ ಪರ ಪ್ರಚಾರಕ್ಕೆ ಇಳಿದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿದೇಶದಿಂದ ನವ ಮಂಗಳೂರು ಬಂದರಿಗೆ ಆಗಮಿಸಿದ ಎರಡು ತೈಲ ಹಡಗುಗಳು!

West Asia war: ತಾರಕಕ್ಕೇರಿದ ಅಮೆರಿಕಾ-ಇರಾನ್ ಸಂಘರ್ಷ; ಟ್ರಂಪ್ ಬೆದರಿಕೆಗೆ ಮಣಿಯದ ಟೆಹ್ರಾನ್, ವಿದ್ಯುತ್ ಸ್ಥಾವರ ನಾಶಪಡಿಸಿದರೆ ಭೀಕರ ಪ್ರತಿದಾಳಿ ಎಚ್ಚರಿಕೆ

ಐಪಿಎಲ್ 2026: 5 ಎಸೆತದಲ್ಲಿ 5 ಸಿಕ್ಸರ್.. ಇಂಟರ್ನೆಟ್ ಗೆ ಬೆಂಕಿ ಹಚ್ಚಿದ ಸನ್ ರೈಸರ್ಸ್ ಹೈದರಾಬಾದ್ ಬ್ಯಾಟರ್! Video

West Asia war: ಜಾಗತಿಕ ತೈಲ ಮಾರುಕಟ್ಟೆ ಅಸ್ಥಿರ; 48 ಗಂಟೆಗಳಲ್ಲಿ 'ಹಾರ್ಮುಜ್ ಜಲಸಂಧಿ' ತೆರೆಯದಿದ್ದರೆ ವಿದ್ಯುತ್ ಸ್ಥಾವರಗಳ ನಾಶ; ಇರಾನ್'ಗೆ ಟ್ರಂಪ್ ಕಠಿಣ ಎಚ್ಚರಿಕೆ

'ಇನ್ ಯಾವ್ friendship ಇಲ್ಲ': ಇರಾನ್ ಮಿಲಿಟರಿ ಅಧಿಕಾರಿಗಳು, ಸಿಬ್ಬಂದಿಗಳ ಹೊರದಬ್ಬಿದ Saudi Arabia

SCROLL FOR NEXT