ಮೃತ ನಂದಿನಿ 
ರಾಜ್ಯ

ಸುಡಾನ್‌: ಹಕ್ಕಿಪಿಕ್ಕಿ ಜನಾಂಗಕ್ಕೆ ಸೇರಿದ ಮೈಸೂರು ಮಹಿಳೆ ಅನುಮಾನಾಸ್ಪದ ಸಾವು

ಮೈಸೂರು ಜಿಲ್ಲೆಯ ಹಕ್ಕಿಪಿಕ್ಕಿ ಜನಾಂಗಕ್ಕೆ ಸೇರಿದ ಬುಡಕಟ್ಟು ಮಹಿಳೆಯೊಬ್ಬರು ಸುಡಾನ್‌ನಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ಮೃತ ಮಹಿಳೆಯನ್ನು ನಂದಿನಿ ಎಂದು ಗುರುತಿಸಲಾಗಿದೆ. ಬ್ಯುಸಿನೆಸ್ ಸಂಬಂಧಿ ವಿಚಾರವಾಗಿ ನಂದಿನಿ ಸುಡಾನ್‌ಗೆ ತೆರಳಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.

ಬೆಂಗಳೂರು: ಮೈಸೂರು ಜಿಲ್ಲೆಯ ಹಕ್ಕಿಪಿಕ್ಕಿ ಜನಾಂಗಕ್ಕೆ ಸೇರಿದ ಬುಡಕಟ್ಟು ಮಹಿಳೆಯೊಬ್ಬರು ಸುಡಾನ್‌ನಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ಮೃತ ಮಹಿಳೆಯನ್ನು ನಂದಿನಿ ಎಂದು ಗುರುತಿಸಲಾಗಿದೆ.

ಬ್ಯುಸಿನೆಸ್ ಸಂಬಂಧಿ ವಿಚಾರವಾಗಿ ನಂದಿನಿ ಸುಡಾನ್‌ಗೆ ತೆರಳಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ. ಆಕೆಯ ಸಾವಿನ ಹಿಂದಿನ ನಿಖರ ಕಾರಣವನ್ನು ಅಧಿಕಾರಿಗಳು ನೀಡಿಲ್ಲ.

ನಂದಿನಿಯ ಪತಿ ಮೈಸೂರು ನಗರ ಸಮೀಪದ ಹುಣಸೂರು ಪಟ್ಟಣದ ಪಕ್ಷಿರಾಜಪುರದಲ್ಲಿ ನೆಲೆಸಿದ್ದು, ಸುಡಾನ್‌ನಿಂದ ನಂದಿನಿಯ ಮೃತದೇಹವನ್ನು ವಾಪಸ್ ತರುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ಸುಡಾನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯೊಂದಿಗೆ ಮಾತನಾಡಿದ್ದಾರೆ ಮತ್ತು ಏಪ್ರಿಲ್ 17 ರಂದು ನಂದಿನಿ ಅವರ ಪಾರ್ಥಿವ ಶರೀರ ಬರುವ ನಿರೀಕ್ಷೆಯಿದೆ ಎಂದು ಕುಟುಂಬಕ್ಕೆ ತಿಳಿಸಲಾಗಿದೆ.

ಹಕ್ಕಿ ಪಿಕ್ಕಿ ಜನಾಂಗಕ್ಕೆ ಸೇರಿದ 181 ಕ್ಕೂ ಹೆಚ್ಚು ಮಂದಿ ಕಳೆದ ವರ್ಷ ಹಿಂಸಾಚಾರ ಪೀಡಿತ ಸುಡಾನ್‌ನಲ್ಲಿ ಸಿಲುಕಿಕೊಂಡಿದ್ದರು. ಅವರನ್ನು ಮರಳಿ ಕರೆತರಲು ಭಾರತ ಸರ್ಕಾರ ‘ಆಪರೇಷನ್ ಕಾವೇರಿ’ ಆರಂಭಿಸಿತು.

ಹಕ್ಕಿ ಪಿಕ್ಕಿ ಜನಾಂಗ ಅರಣ್ಯ ಪ್ರದೇಶಗಳ ಬಳಿ ವಾಸಿಸುತ್ತಿದೆ. ಜೀವನ ನಡೆಸಲು ಸಾಧ್ಯವಾಗದೆ, ಅವರು ಗಿಡಮೂಲಿಕೆಗಳ ಸೌಂದರ್ಯವರ್ಧಕಗಳನ್ನು ಮಾರಾಟ ಮಾಡಲು ಆಫ್ರಿಕನ್ ದೇಶಗಳಿಗೆ ವಿಶೇಷವಾಗಿ ಸುಡಾನ್‌ಗೆ ಪ್ರಯಾಣಿಸುತ್ತಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!