ಪ್ರಾತಿನಿಧಿಕ ಚಿತ್ರ 
ರಾಜ್ಯ

ಬೆಳಗಾವಿ: ಕಳ್ಳತನದ ಶಂಕೆ; ಸೋದರ ಸಂಬಂಧಿಗೆ ಥಳಿಸಿ ಕೊಲೆ ಮಾಡಿದ ಆರೋಪಿ ಬಂಧನ

ತಮ್ಮ ಮನೆಯಲ್ಲಿ ಕಳ್ಳತನ ಮಾಡಿದ್ದಾರೆಂದು ಶಂಕಿಸಿ ಸಂಬಂಧಿಕರೊಬ್ಬರಿಗೆ ಥಳಿಸಿ ಕೊಲೆ ಮಾಡಿರುವ ಘಟನೆ ಬೆಳಗಾವಿ ತಾಲ್ಲೂಕಿನ ಸುತಗಟ್ಟಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತರನ್ನು ಸುತಗಟ್ಟಿ ನಿವಾಸಿ ರಾಯಪ್ಪ ಬಸವನಿ ಮನ್ನಿಕೇರಿ (30) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿ ಶೆಟ್ಟಿಯಪ್ಪ ಕಲ್ಲಪ್ಪ ಮನ್ನಿಕೇರಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ: ತಮ್ಮ ಮನೆಯಲ್ಲಿ ಕಳ್ಳತನ ಮಾಡಿದ್ದಾರೆಂದು ಶಂಕಿಸಿ ಸಂಬಂಧಿಕರೊಬ್ಬರಿಗೆ ಥಳಿಸಿ ಕೊಲೆ ಮಾಡಿರುವ ಘಟನೆ ಬೆಳಗಾವಿ ತಾಲ್ಲೂಕಿನ ಸುತಗಟ್ಟಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ.

ಮೃತರನ್ನು ಸುತಗಟ್ಟಿ ನಿವಾಸಿ ರಾಯಪ್ಪ ಬಸವನಿ ಮನ್ನಿಕೇರಿ (30) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿ ಶೆಟ್ಟಿಯಪ್ಪ ಕಲ್ಲಪ್ಪ ಮನ್ನಿಕೇರಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ರಾಯಪ್ಪ ಮದ್ಯವ್ಯಸನಿಯಾಗಿದ್ದು, ಮದ್ಯ ಖರೀದಿಸಲು ಕಳ್ಳತನ ಮಾಡುತ್ತಿದ್ದ. ಈ ವಿಚಾರ ಗ್ರಾಮಸ್ಥರಿಗೆ ತಿಳಿದಿತ್ತು. ಆದರೆ, ಆತನ ವಿರುದ್ಧ ಈವರೆಗೆ ಯಾವುದೇ ಕಳ್ಳತನ ಪ್ರಕರಣ ದಾಖಲಾಗಿಲ್ಲ. ಶೆಟ್ಟಿಯಪ್ಪ ಮನೆಗೆ ಬೀಗ ಹಾಕಿ ಯಾರನ್ನೋ ಭೇಟಿಯಾಗಲೆಂದು ಗ್ರಾಮದಿಂದ ಹೊರಟಿದ್ದರು. ಮೂರು ದಿನಗಳ ನಂತರ ಹಿಂತಿರುಗಿ ಬಂದು ನೋಡಿದಾಗ ಮನೆಯಲ್ಲಿ ಕಳ್ಳತನವಾಗಿರುವುದು ಕಂಡು ಬಂತು.

ಕೂಡಲೇ ಅನುಮಾನಗೊಂಡ ಶೆಟ್ಟಿಯಪ್ಪ ರಾಯಪ್ಪನೇ ಕಳ್ಳತನ ಮಾಡಿದ್ದಾನೆ ಎಂದು ಬಲವಾಗಿ ನಂಬಿದ್ದಾರೆೆ. ಕಳ್ಳರು ಮಾಳಿಗೆಯಿಂದ ನುಗ್ಗಿ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದಿದ್ದರು. ಶೆಟ್ಟಿಯಪ್ಪ ರಾಯಪ್ಪನನ್ನು ಹಿಡಿದು ವಿಚಾರಿಸಿದ್ದಾರೆ. ಇದರಿಂದ ರಾಯಪ್ಪ ಕೆರಳಿದ್ದು, ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಅದು ಹಿಂಸಾಚಾರಕ್ಕೆ ತಿರುಗಿದ್ದು, ರಾಯಪ್ಪ ಕುಡುಗೋಲು ತೆಗೆದುಕೊಂಡು ಶೆಟ್ಟಿಯಪ್ಪನ ಮೇಲೆ ದಾಳಿ ಮಾಡಲು ಮುಂದಾಗಿದ್ದಾನೆ. ಈ ವೇಳೆ ಶೆಟ್ಟಿಯಪ್ಪ ರಾಯಪ್ಪನನ್ನು ಥಳಿಸಿ ಕಂಬಕ್ಕೆ ಕಟ್ಟಿ ಹಾಕಿದ್ದಾರೆ. ಆದರೆ, ತೀವ್ರವಾಗಿ ಗಾಯಗೊಂಡಿದ್ದ ರಾಯಪ್ಪ ಸಾವಿಗೀಡಾಗಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT