ಸಾಂದರ್ಭಿಕ ಚಿತ್ರ 
ರಾಜ್ಯ

ಭಾರೀ ಮಳೆ: ನಾಲ್ಕು ಮಂಗಳೂರು-ದುಬೈ ವಿಮಾನಗಳು ರದ್ದು, ಪ್ರಯಾಣಿಕರಿಗೆ ತೊಂದರೆ

ಕಳೆದ 48 ಗಂಟೆಗಳಲ್ಲಿ ದುಬೈ ಮತ್ತು ನೆರೆಯ ಮಧ್ಯಪ್ರಾಚ್ಯ ದೇಶಗಳಲ್ಲಿ ಭಾರೀ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಮಂಗಳೂರು- ದುಬೈ ಮಾರ್ಗದ ನಾಲ್ಕು ವಿಮಾನಗಳನ್ನು ಬುಧವಾರ ರದ್ದುಗೊಳಿಸಲಾಯಿತು.

ಮಂಗಳೂರು: ಕಳೆದ 48 ಗಂಟೆಗಳಲ್ಲಿ ದುಬೈ ಮತ್ತು ನೆರೆಯ ಮಧ್ಯಪ್ರಾಚ್ಯ ದೇಶಗಳಲ್ಲಿ ಭಾರೀ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ಮಂಗಳೂರು- ದುಬೈ ಮಾರ್ಗದ ನಾಲ್ಕು ವಿಮಾನಗಳನ್ನು ಬುಧವಾರ ರದ್ದುಗೊಳಿಸಲಾಯಿತು.

ತಿರುಚಿರಾಪಳ್ಳಿಯಿಂದ ಮಂಗಳೂರು ಮಾರ್ಗದ ಮತ್ತೊಂದು ವಿಮಾನವನ್ನು ಸಹ ರದ್ದುಗೊಳಿಸಲಾಗಿದೆ. ಇಲ್ಲಿಂದ ಜೆಡ್ಡಾಕ್ಕೆ ತೆರಳುವ ವಿಮಾನ ಹಾರಾಟದಲ್ಲಿ ವಿಳಂಬವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರದ್ದುಗೊಳಿಸಲಾದ ವಿಮಾನಗಳು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಕಂಪನಿಗೆ ಸೇರಿದ್ದಾಗಿವೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ದುಬೈನಿಂದ ಮಂಗಳೂರಿಗೆ ತೆರಳಬೇಕಿದ್ದ ಫ್ಲೈಟ್ ನಂಬರ್​ 814, ಮಂಗಳೂರಿನಿಂದ ದುಬೈಗೆ ಹೊರಡಬೇಕಿದ್ದ ಫ್ಲೈಟ್ ನಂಬರ್​ 813, ದುಬೈನಿಂದ ಮಂಗಳೂರಿಗೆ ತೆರಳಬೇಕಿದ್ದ ವಿಮಾನ 384 ಮತ್ತು ಮಂಗಳೂರಿನಿಂದ ದುಬೈಗೆ ಹೊರಡಬೇಕಿದ್ದ ಫ್ಲೈಟ್ ನಂಬರ್​ 383 ಅನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅದೇ ರೀತಿ ಮಂಗಳೂರಿನಿಂದ ಜಿದ್ದಾಗೆ ತೆರಳುವ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ವಿಳಂಬವಾಗಿದೆ. ಮತ್ತೊಂದೆಡೆ, ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವನ್ನು ಗುರುವಾರವೂ ರದ್ದುಗೊಳಿಸಲಾಗಿದೆ. ಜೆಡ್ಡಾದಿಂದ ಮಂಗಳೂರಿಗೆ ತೆರಳಬೇಕಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಸಂಖ್ಯೆ 796 ಮತ್ತು ಮಂಗಳೂರಿನಿಂದ ತಿರುಚಿರಾಪಳ್ಳಿಗೆ ಹೊರಡಬೇಕಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಕೂಡಾ ವಿಳಂಬವಾಗಲಿದೆ.

ಏಪ್ರಿಲ್ 15 ರ ಮಧ್ಯರಾತ್ರಿಯಿಂದ, ದುಬೈನ ಅನೇಕ ಸ್ಥಳಗಳಲ್ಲಿ ಭಾರೀ ನೀರು ನಿಂತಿದ್ದು, ನಿಯಮಿತ ಚಟುವಟಿಕೆಗಳು ಮತ್ತು ವಿಮಾನ ಪ್ರಯಾಣವನ್ನು ಅಡ್ಡಿಪಡಿಸಿದೆ. ದುಬೈನಲ್ಲಿ ಮಂಗಳವಾರ ಕೇವಲ 12 ಗಂಟೆಗಳಲ್ಲಿ ದಾಖಲೆಯ 100 ಮಿಮೀ ಮಳೆಯಾಗಿದೆ ಎಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT