ರಾಜ್ಯ

UPSC 2023: ತೇರ್ಗಡೆ ಹೊಂದಿದ ಕನ್ನಡಿಗರು ಇವರು; ಅವರ ಕನಸು, ಆಸೆಗಳೇನು?

ವಿಜಯಪುರದ ವಿಜೇತಾ ಭೋಸಮಣಿ ಅವರು 2023 ರ ಕೇಂದ್ರ ಲೋಕಸೇವಾ ಆಯೋಗದ (UPSC) ಪರೀಕ್ಷೆಯಲ್ಲಿ 100 ನೇ ರ್ಯಾಂಕ್ ಗಳಿಸಿದ್ದಾರೆ, 2023ನೇ ಸಾಲಿನ ಯುಪಿಎಸ್ ಸಿ ಫಲಿತಾಂಶ ನಿನ್ನೆ ಮಂಗಳವಾರ ಪ್ರಕಟವಾಗಿದೆ.

ಬೆಂಗಳೂರು: ವಿಜಯಪುರದ ವಿಜೇತಾ ಭೋಸಮಣಿ ಅವರು 2023 ರ ಕೇಂದ್ರ ಲೋಕಸೇವಾ ಆಯೋಗದ (UPSC) ಪರೀಕ್ಷೆಯಲ್ಲಿ 100 ನೇ ರ್ಯಾಂಕ್ ಗಳಿಸಿದ್ದಾರೆ, 2023ನೇ ಸಾಲಿನ ಯುಪಿಎಸ್ ಸಿ ಫಲಿತಾಂಶ ನಿನ್ನೆ ಮಂಗಳವಾರ ಪ್ರಕಟವಾಗಿದೆ.

ದೇಶದ ಕಟ್ಟಕಡೆಯ ಸಮುದಾಯದ ಬದುಕಿನಲ್ಲಿ ಬದಲಾವಣೆ ತರಲು ಕೆಲಸ ಮಾಡುವ ಉತ್ಸಾಹ ಹೊಂದಿರುವ ವಿಜೇತಾ ತಮ್ಮ ಜೀವನದಲ್ಲಿ ಹೊಸ ಅಧ್ಯಾಯ ಆರಂಭ ಬಗ್ಗೆ ಉತ್ಸುಕರಾಗಿದ್ದಾರೆ. ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ ತಮ್ಮ ಸೇವೆಯನ್ನು ಪೂರ್ಣಗೊಳಿಸಿದ ಪೋಷಕರ ಪುತ್ರಿ ವಿಜೇತಾ ಅವರು ಪ್ರಾಣಿಗಳ ಕಲ್ಯಾಣಕ್ಕೆ ಕೊಡುಗೆ ನೀಡುವ ಆಶಯ ಹೊಂದಿದ್ದಾರೆ. ನಾಲ್ಕನೇ ಬಾರಿಯ ಪ್ರಯತ್ನದಲ್ಲಿ ವಿಜೇತಾ ಯಶಸ್ವಿಯಾಗಿದ್ದಾರೆ.

ದಾವಣಗೆರೆಯಲ್ಲಿ ನರ್ಸರಿ ಹೊಂದಿರುವ ಕೃಷಿಕರೊಬ್ಬರ ಪುತ್ರಿ, 23 ವರ್ಷದ ಸೌಭಾಗ್ಯ ಎಸ್ ಬೀಳಗಿಮಠ ಯುಪಿಎಸ್ ಸಿ ಪ್ರಿಲಿಮ್ಸ್ ಪರೀಕ್ಷೆಗೆ ಪ್ರತಿದಿನ 12 ಗಂಟೆಗಳ ತೀವ್ರ ಅಧ್ಯಯನ ನಡೆಸಿ ಫಲ ನೀಡಿತು.

ತಮ್ಮ ತಂದೆ ಮಾಡುತ್ತಿರುವ ಕೆಲಸಗಳನ್ನು ನೋಡಿ ಬೆಳೆದಿರುವ ಸೌಭಾಗ್ಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿಯಂತಹ ಕ್ಷೇತ್ರಗಳಿಗೆ ಕೊಡುಗೆ ನೀಡಲು ಬಯಸುತ್ತಿರುವುದಾಗಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಕೋವಿಡ್ ಸಂದರ್ಭದಲ್ಲಿ ಕೊಳೆಗೇರಿಗಳಲ್ಲಿ ವಾಸಿಸುವ ಮಕ್ಕಳಿಗೆ ಮಾರ್ಗದರ್ಶನ ನೀಡುತ್ತಿದ್ದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಶಾಂತಪ್ಪ ಕುರುಬರ ಅವರು 644ನೇ ರ್ಯಾಂಕ್ ಗಳಿಸಿದ್ದಾರೆ. ಪ್ರಸ್ತುತ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿರುವ ಇವರು ತಮ್ಮ ಕೆಲಸ ಮಾಡುತ್ತಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದರು.

ಕರ್ನಾಟಕದ ಸುಮಾರು 40 ಅಭ್ಯರ್ಥಿಗಳು UPSC 2023 ಪರೀಕ್ಷೆಗಳನ್ನು ಯಶಸ್ವಿಯಾಗಿ ತೇರ್ಗಡೆ ಮಾಡಿ ಹುದ್ದೆಗಳಿಗೆ ಎದುರು ನೋಡುತ್ತಿದ್ದಾರೆ. ಈ ವರ್ಷ ಒಟ್ಟು 1,016 ಅಭ್ಯರ್ಥಿಗಳನ್ನು UPSC ನೇಮಕಾತಿಗೆ ಶಿಫಾರಸು ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT