ಬೆಂಗಳೂರಿನಲ್ಲಿ ಹವಾಮಾನ 
ರಾಜ್ಯ

Bengaluru Rains: 'ಹುಸಿಯಾಯ್ತು ಏಪ್ರಿಲ್ ಮಳೆ', ಮೇ ನಲ್ಲಿ 'ನೋಡೋಣ' ಎಂದ ಹವಾಮಾನ ಇಲಾಖೆ

ಯುಗಾದಿ ಹಬ್ಬದ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂಬ ಊಹೆ ಕೊನೆಗೂ ಸುಳ್ಳಾಗಿದ್ದು, ಮೇ ತಿಂಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರು: ಯುಗಾದಿ ಹಬ್ಬದ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂಬ ಊಹೆ ಕೊನೆಗೂ ಸುಳ್ಳಾಗಿದ್ದು, ಮೇ ತಿಂಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಹೌದು.. ಕಳೆದೆರಡು ತಿಂಗಳುಗಳಿಂದ ಮಳೆಗಾಗಿ ಹಾತೊರೆಯುತ್ತಿದ್ದ ರಾಜ್ಯದ ಜನತೆ ಪ್ರಮುಖವಾಗಿ ಬೆಂಗಳೂರಿಗರು ಮಳೆಗಾಗಿ ಮತ್ತೊಂದಷ್ಟು ದಿನ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ.

ಹವಾಮಾನ ಇಲಾಖೆಯ ನೂತನ ವರದಿಯನ್ವಯ ಮುಂದಿನ 10 ದಿನಗಳ ಕಾಲ ರಾಜ್ಯದ ಘಟ್ಟ ಪ್ರದೇಶಗಳನ್ನು ಹೊರತು ಪಡಿಸಿ ಬೆಂಗಳೂರು ಮತ್ತು ಕರ್ನಾಟಕದ ಇತರೆ ಭಾಗಗಳಲ್ಲಿ ಮಳೆ ಸಾಧ್ಯತೆ ಕಡಿಮೆ ಎಂದು ಹೇಳಿದೆ.

ಪ್ರಮುಖ ಜಾಗತಿಕ ಸಂಖ್ಯಾತ್ಮಕ ಹವಾಮಾನ ಮುನ್ಸೂಚನಾ ಸಂಸ್ಥೆಗಳಾದ ಮಧ್ಯಮ-ಶ್ರೇಣಿಯ ಹವಾಮಾನ ಮುನ್ಸೂಚನೆಗಳ ಯುರೋಪಿಯನ್ ಕೇಂದ್ರ (ECMWF) ಮತ್ತು ಜಾಗತಿಕ ಮುನ್ಸೂಚನೆ ವ್ಯವಸ್ಥೆ (GFS) ಈ ವರದಿ ನೀಡಿದ್ದು, 'ಸಂಚಿತ ಮಳೆಯು ಮುಂದಿನ 10 ದಿನಗಳಲ್ಲಿ ಘಟ್ಟಗಳನ್ನು ಹೊರತುಪಡಿಸಿ ಬೆಂಗಳೂರು ಮತ್ತು ಕರ್ನಾಟಕದ ಇತರ ಭಾಗಗಳಲ್ಲಿ ಯಾವುದೇ ರೀತಿಯ ಮಳೆ ಸಾಧ್ಯತೆ ಕಡಿಮೆ ಎಂದು ಹೇಳಿದೆ.

ಏಪ್ರಿಲ್‌ನಲ್ಲಿ ಸುರಿಯಬೇಕಿದ್ದ ಮಾವಿನ ಮಳೆ ಕೂಡ ಮಿಸ್ ಆಗಿದ್ದು, ಮೇ ತಿಂಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಬೆಂಗಳೂರು 150+ ನಾಟೌಟ್ ಮುಂದುವರಿಕೆ

ಇನ್ನು ಹಾಲಿ ಹವಾಮಾನ ಇಲಾಖೆಯ ವರದಿಯನ್ವಯ ಬೆಂಗಳೂರಿನ '150+ ನಾಟೌಟ್' ಮಳೆ ಇಲ್ಲದ ದಿನಗಳು ಮುಂದುವರೆದಿದ್ದು, ಬೆಂಗಳೂರಿಗರು ಮಳೆಗಾಗಿ ಮತ್ತೊಂದು ತಿಂಗಳು ಕಾಯಬೇಕಾದ ಸ್ಥಿತಿ ನಿರ್ಮಾಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?