ಮುಸ್ಲಿಂ ಯುವಕರ ಪುಂಡಾಟ 
ರಾಜ್ಯ

ಬೆಂಗಳೂರು: ರಾಮನವಮಿ ಮುಗಿಸಿ ಹೋಗುತ್ತಿದ್ದವರನ್ನು ಅಡ್ಡಗಟ್ಟಿ ಅಲ್ಲಾಹು ಅಕ್ಬರ್ ಎಂದ ಯುವಕರು, ವಿಡಿಯೋ ವೈರಲ್

ದೇಶಾದ್ಯಂತ ಹಿಂದೂಗಳು ರಾಮ ನವಮಿಯನ್ನು ಅದ್ದೂರಿಯಾಗಿ ಆಚರಿಸಿದ್ದು ಇನ್ನು ರಾಮನವಮಿಯನ್ನು ಮುಗಿಸಿಕೊಂಡು ಕಾರಿನಲ್ಲಿ ಹೋಗುತ್ತಿದ್ದವರನ್ನು ಅಡ್ಡಗಟ್ಟಿದ ಮುಸ್ಲಿಂ ಯುವಕರು ಪುಂಡಾಟ ನಡೆಸಿದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದ ಬೆಟ್ಟಳ್ಳಿ ಮಸೀದಿ ಬಳಿ ನಡೆದಿದೆ.

ಬೆಂಗಳೂರು: ದೇಶಾದ್ಯಂತ ಹಿಂದೂಗಳು ರಾಮ ನವಮಿಯನ್ನು ಅದ್ದೂರಿಯಾಗಿ ಆಚರಿಸಿದ್ದು ಇನ್ನು ರಾಮನವಮಿಯನ್ನು ಮುಗಿಸಿಕೊಂಡು ಕಾರಿನಲ್ಲಿ ಹೋಗುತ್ತಿದ್ದವರನ್ನು ಅಡ್ಡಗಟ್ಟಿದ ಮುಸ್ಲಿಂ ಯುವಕರು ಪುಂಡಾಟ ನಡೆಸಿದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದ ಬೆಟ್ಟಳ್ಳಿ ಮಸೀದಿ ಬಳಿ ನಡೆದಿದೆ.

ಕಾರನ್ನು ತಡೆದು ನಿಲ್ಲಿಸಿದ ಪುಂಡರು ಕಾರಿನ ಬಳಿ ಬಂದು ಜೈ ಶ್ರೀರಾಮ್ ಎಂದು ಹೇಳಬೇಕಾ, ಜೈ ಶ್ರೀ ರಾಮ್ ಅಲ್ಲ. ಓನ್ಲೀ ಅಲ್ಲಾಹು ಅಕ್ಬರ್ ಎಂದು ಕೂಗಿದ್ದಾರೆ. ಅಷ್ಟೇ ಅಲ್ಲದೆ ಕಾರಿನಲ್ಲಿ ಇದ್ದವರಿಗೆ ಅವಾಚ್ಯವಾಗಿ ನಿಂದಿಸಿದ್ದು ಅಲ್ಲದೆ ಹಲ್ಲೆ ಕೂಡ ನಡೆಸಿದ್ದಾರೆ.

ಯುವಕರ ಪುಂಡಾಟದಿಂದ ಗರಂ ಆದ ಕಾರಿನಲ್ಲಿದ್ದ ಯುವಕರು ನಿಮ್ಮ ಹಬ್ಬದಲ್ಲಿ ನಾವು ಹೀಗೆ ಮಾಡುತ್ತೀವಾ ಎಂದು ಪ್ರಶ್ನೆ ಮಾಡಿದ್ದಾರೆ. ಆಗ ಅಲ್ಲೆ ಇದ್ದ ಮತ್ತೆ ಇಬ್ಬರು ಸೇರಿಕೊಂಡು ಮೂವರು ಹಿಂದು ಯುವಕರ ಮೇಲೆ ಹಲ್ಲೆ ಮಾಡಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸದ್ಯ ಪುಂಡಾಟ ಮಾಡಿದವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT