ಸಾಂದರ್ಭಿಕ ಚಿತ್ರ 
ರಾಜ್ಯ

ಅಕ್ರಮ ಸಂಬಂಧ: ಬೆಂಗಳೂರಿನ ಸಾರಕ್ಕಿ ಬಳಿಯಿರುವ ಪಾರ್ಕ್​ನಲ್ಲಿ ಜೋಡಿ ಕೊಲೆ

ರಾಜಧಾನಿ ಬೆಂಗಳೂರಿನ ಸಾರಕ್ಕಿ ಬಳಿಯಿರುವ ಪಾರ್ಕ್​ನಲ್ಲಿ ಗುರುವಾರ ಹಾಡು ಹಗಲೆ ಜೋಡಿ ಕೊಲೆ ನಡೆದಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನ ಸಾರಕ್ಕಿ ಬಳಿಯಿರುವ ಪಾರ್ಕ್​ನಲ್ಲಿ ಗುರುವಾರ ಹಾಡು ಹಗಲೆ ಜೋಡಿ ಕೊಲೆ ನಡೆದಿದೆ. ಇಂದು ಸಂಜೆ ಅಕ್ರಮ ಸಂಬಂಧ ಮುಂದುವರಿಸಲು ನಿರಾಕರಿಸಿದ ಯುವತಿಯನ್ನ ವಿವಾಹಿತ ವ್ಯಕ್ತಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಇಂದು ಸಂಜೆ ಸಾರಕ್ಕಿ ಮಾರ್ಕೆಟ್ ಬಳಿ ಇರುವ ಪಾರ್ಕ್ ನಲ್ಲಿ ಗೊರಗುಂಟೆ ಪಾಳ್ಯ ನಿವಾಸಿ ಸುರೇಶ್‌ (46) ಮತ್ತು ಶಾಂಕಾಂಬರಿ ನಗರ ನಿವಾಸಿ ಅನುಷಾ (25) ಎಂಬುವವ ನಡುವೆ ಜಗಳ ಆರಂಭವಾಗಿ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ.

ಪೊಲೀಸರ ಪ್ರಕಾರ, ಸುರೇಶ್ ಮತ್ತು ಅನುಷಾ ಇಬ್ಬರು ಹಲವು ವರ್ಷಗಳಿಂದ ಪರಿಚಿತರು. ಸುರೇಶ್‌ಗೆ ಮದುವೆಯಾಗಿತ್ತು. ಆದರೂ ಸುರೇಶ್ ಹಾಗೂ ಅನುಷಾ ಇಬ್ಬರು ಅನೈತಿಕ ಸಂಬಂಧ ಹೊಂದಿದ್ದರು. ಅನುಷಾಗೆ ಸಂಬಂದ ಮುಂದುವರೆಸುವುದು ಇಷ್ಟ ಇರ್ಲಿಲ್ಲಾ. ಹೀಗಾಗಿ, ಭೇಟಿ ಮಾಡಿ ನಂತರ ಸಂಪರ್ಕ್ ಕಡಿತ ಮಾಡಿಕೊಳ್ಳುವ ತೀರ್ಮಾನ ಮಾಡಿದ್ದರು. ಈ ವೇಳೆ ಅನುಷಾ ತನ್ನ ಕೈ ತಪ್ಪಿ ಹೋಗ್ತಾಳೆ ಎಂದು ಕೋಪಗೊಂಡಿದ್ದ ಸುರೇಶ್ ಕೋಪದಲ್ಲಿ ಚಾಕುವಿನಿಂದ ಇರಿದು ಕೊಂದಿದ್ದಾನೆ.

ಮಗಳಿಗೆ ಸುರೇಶ್ ಚಾಕು ಹಾಕುತಿದ್ದಾಗ ಅನುಷಾ ತಾಯಿ ಗೀತಾ ತಡೆಯಲು ಯತ್ನಿಸಿದ್ದಾರೆ. ಗೀತಾ ತಾಯಿ ಅಡ್ಡ ಬಂದರೂ ನಿಲ್ಲಿಸದೆ ಚಾಕು ಇರಿಯುವುದನ್ನ ಮುಂದುವರಿಸಿದ್ದ ಸುರೇಶ್ ತಲೆಮೇಲೆ ಅಲ್ಲಿಯೇ ಇದ್ದ ಸಿಮೆಂಟ್ ಇಟ್ಟಿಗೆಯನ್ನು ಎತ್ತಿ ಹಾಕಿದ್ದಾರೆ. ತೀವ್ರ ರಕ್ತ ಸ್ರಾವವಾಗಿ ಸ್ಥಳದಲ್ಲಿ ಅನುಷಾ ಮತ್ತು ಸುರೇಶ್ ಇಬ್ಬರು ಮೃತಪಟ್ಟಿದ್ದಾರೆ.

ಅನುಷಾ ತಾಯಿ ಗೀತಾ ಅವರನ್ನು ವಶಕ್ಕೆ ಪಡೆದ ಜೆಪಿ‌ ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT